ನೀರಿಗಾಗಿ ಶೀಘ್ರ ಫಡ್ನವೀಸ್‌ ಭೇಟಿ

•ಶಾಸಕ ಕುಮಠಳ್ಳಿ ನೇತೃತ್ವದಲ್ಲಿ ಸಿಎಂ ಭೇಟಿ ಮಾಡಿದ ನಿಯೋಗ

Team Udayavani, Jun 8, 2019, 1:31 PM IST

bg-tdy-3..

ಅಥಣಿ: ಶಾಸಕ ಮಹೇಶ ಕುಮಠಳ್ಳಿ ನೇತೃತ್ವದಲ್ಲಿ ಕೃಷ್ಣಾ ನದಿ ನೀರು ಹೋರಾಟ ಸಮಿತಿಯಿಂದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು.

ಅಥಣಿ: ಶಾಶ್ವತ ನೀರಿನ ಸಮಸ್ಯೆ ಪರಿಹಾರಕ್ಕಾಗಿ ಮತ್ತು ಬತ್ತಿದ ಕೃಷ್ಣಾ ನದಿಗೆ ನೀರು ಬಿಡಿಸಲು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದ ಕೃಷ್ಣಾ ಹೋರಾಟ ಸಮಿತಿ ಸದಸ್ಯರಿಗೆ ಸಕಾರಾತ್ಮಕವಾಗಿ ಮುಖ್ಯಮಂತ್ರಿ ಸ್ಪಂದಿಸಿದ್ದಾರೆ.

ಎರಡು ತಿಂಗಳಿನಿಂದ ಕೃಷ್ಣಾ ನದಿಯಲ್ಲಿ ನೀರು ಇಲ್ಲದೇ ಬೆಳಗಾವಿ ಜಿಲ್ಲೆಯ ಅಥಣಿ ಹಾಗೂ ಇತರ ತಾಲೂಕುಗಳು ಮತ್ತು ವಿಜಯಪುರ, ಬಾಗಲಕೋಟೆ ಜಿಲ್ಲೆಗಳ ಅನೇಕ ತಾಲೂಕುಗಳಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಉಂಟಾದ ಪರಿಸ್ಥಿತಿ ಅಥಣಿ ಶಾಸಕ ಮಹೇಶ ಕುಮಠಳ್ಳಿಯವರಿಂದ ತಿಳಿದು ಬಂದಿದೆ. ಕೃಷ್ಣಾ ನದಿ ನೀರಿನ ವಿಷಯವನ್ನು ನಾನು ಕೂಡ ಗಂಭೀರವಾಗಿ ಪರಿಗಣಿಸಿದ್ದು, ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಇವರೊಂದಿಗೆ ಚರ್ಚಿಸಲು ಸಮಯ ಕೇಳಲಾಗಿದೆ. ಮುಖ್ಯಮಂತ್ರಿಗಳು ಸಮಯ ಕೊಟ್ಟತಕ್ಷಣ ನನ್ನ ನೇತೃತ್ವದಲ್ಲಿ ಅಥಣಿ ಶಾಸಕ ಮಹೇಶ ಕುಮಠಳ್ಳಿ, ಕಾಗವಾಡ ಶಾಸಕ ಶ್ರೀಮಂತ ಪಾಟೀಲ, ಹಾಗೂ ಕೃಷ್ಣಾ ನದಿ ಪಾತ್ರದ ಎಲ್ಲ ಶಾಸಕರನ್ನು ಒಳಗೊಂಡ ನಿಯೋಗದಲ್ಲಿ ಭೇಟಿ ಮಾಡುವ ಕಾರ್ಯಕ್ಕೆ ನಾನು ಆದ್ಯತೆ ನೀಡುತ್ತೇನೆ ಎಂದು ಹೇಳಿದರು.

ನಿಯೋಗದ ನೇತೃತ್ವ ವಹಿಸಿದ್ದ ಅಥಣಿ ಶಾಸಕ ಮಹೇಶ ಕುಮಠಳ್ಳಿ, ಅಥಣಿ ವ್ಯಾಪ್ತಿಯ ಕೃಷ್ಣಾ ನದಿಯಲ್ಲಿ ಅವರಖೋಡ ಗ್ರಾಮದ ಹತ್ತಿರ ಅಂದಾಜು 15 ಕೋಟಿ ರೂ. ವೆಚ್ಚದಲ್ಲಿ 25 ಅಡಿ ಎತ್ತರದ ಚಿಕ್ಕ ಡ್ಯಾಮ್‌(ತಡೆಗೋಡೆ) ಕಾಮಗಾರಿಗೆ ಇಷ್ಟರಲ್ಲಿಯೇ ಮಂಜೂರಾತಿ ದೊರಕಲಿದೆ. ಹಾಗೂ ಮಹಿಷವಾಡಗಿ ಗ್ರಾಮದ ಹತ್ತಿರ ಇರುವ ತಡೆಗೋಡೆ ಎತ್ತರಿಸುವ ಕಾಮಗಾರಿಯ ಮಂಜೂರಾತಿ ವಿಷಯವನ್ನು ಪರಿಶೀಲಿಸುವುದಾಗಿ ಹೇಳಿದ ಅವರು, ಇದರಿಂದ ಶೇ.70 ರಷ್ಟು ಬೇಸಿಗೆ ಅವಧಿಯ ನೀರಿನ ಕೊರತೆ ನೀಗಿಸಲು ಸಾಧ್ಯವಾಗುತ್ತದೆ ಎಂದರು.

ಕೃಷ್ಣಾ ನದಿಯಲ್ಲಿ ನೀರು ಬತ್ತಿದ್ದರಿಂದ ಅಥಣಿ ಹಾಗೂ ಕಾಗವಾಡ ತಾಲೂಕುಗಳಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗಿದೆ, ಇತ್ತೀಚೆಗೆ ಶೇ.90ಕ್ಕೂ ಹೆಚ್ಚು ಕೊಳವೆ ಬಾವಿಗಳು ಬತ್ತಿದ್ದರಿಂದ ಟ್ಯಾಂಕರ್‌ ಮೂಲಕವೂ ಕುಡಿಯುವ ನೀರಿನ ಪೂರೈಕೆ ಸಾಧ್ಯವಾಗುತ್ತಿಲ್ಲ, ಹೀಗಾಗಿ ತಕ್ಷಣವೇ ಮಾಹಾರಾಷ್ಟ್ರದ ಮುಖ್ಯಮಂತ್ರಿಯವರ ಸಮಯ ಪಡೆದು ಕೃಷ್ಣಾ ನದಿಗೆ ನೀರು ಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪತ್ರಕರ್ತರ ಸಂಘದ ಅಧ್ಯಕ್ಷ ವಿಜಯಕುಮಾರ ಅಡಹಳ್ಳಿ ಈ ಭಾಗದ ಅತ್ಯಂತ ಕಷ್ಟದ ಪರಿಸ್ಥಿತಿ ಗಮನಸಿ ಇದಕ್ಕೊಂದು ಶಾಶ್ವತ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳುವಂತೆ ವಿನಂತಿಸಿದರು. ಈ ಸಂದರ್ಭದಲ್ಲಿ ಗೃಹ ಸಚಿವ ಎಂ.ಬಿ.ಪಾಟೀಲ, ಕಾಗವಾಡ ಶಾಸಕ ಶ್ರೀಮಂತ ಪಾಟೀಲ, ಕೆಪಿಸಿಸಿ ಸದಸ್ಯ ಕಿರಣಕುಮಾರ ಪಾಟೀಲ, ಬಿ.ಎಲ್.ಪಾಟೀಲ್ ಉಪಸ್ಥಿತರಿದ್ದರು.

ನಿಯೋಗದಲ್ಲಿ ಕರವೇ ಅಧ್ಯಕ್ಷ ಬಸನಗೌಡ ಪಾಟೀಲ, ಪತ್ರಕರ್ತರ ಸಂಘದ ಅಧ್ಯಕ್ಷ ವಿಜಯಕುಮಾರ ಅಡಹಳ್ಳಿ, ರಮೇಶ ಬಾದವಾಡಗಿ, ವೆಂಕಟೇಶ ದೆಶಪಾಂಡೆ, ದೀಪಕ ಶಿಂಧೆ, ಮಂಜು ಹೊಳಿಕಟ್ಟಿ, ರಾಕೇಶ ಮೈಗೂರ, ದೀಪಕ ಕಾಂಬಳೆ, ಪ್ರಕಾಶ ಕಾಂಬಳೆ, ಗುತ್ತಿಗೆ ಪೌರಕಾರ್ಮಿಕ ಸಂಘದ ರವಿ ಕಾಂಬಳೆ, ಶ್ರೀಶೈಲ ಪೂಜಾರಿ, ಭಾರತೀಯ ಕಿಸಾನ ಸಂಘದ ಅಶೋಕ ದಾನಗೌಡರ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

Politics: ಸಿದ್ದರಾಮಯ್ಯ, ಪರಮೇಶ್ವರ ಅವರ ಸಿಡಿಯೂ ಮುಂದೆ ಬರಬಹುದು; ಜಾರಕಿಹೊಳಿ‌

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ

ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ

ಬೆಳಗಾವಿ-ಸೋಲಿನ ಭಯದಿಂದ ಕಾಂಗ್ರೆಸ್‌ ಹತಾಶ: ಜಗದೀಶ ಶೆಟ್ಟರ

ಬೆಳಗಾವಿ-ಸೋಲಿನ ಭಯದಿಂದ ಕಾಂಗ್ರೆಸ್‌ ಹತಾಶ: ಜಗದೀಶ ಶೆಟ್ಟರ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.