ಜಿಲ್ಲೆಯ ಪ್ರಮುಖ ಬೆಳೆ-ಉತ್ಪನ್ನ ಆಯ್ಕೆಗೆ ಸಭೆ


Team Udayavani, Aug 9, 2020, 1:52 PM IST

ಜಿಲ್ಲೆಯ ಪ್ರಮುಖ ಬೆಳೆ-ಉತ್ಪನ್ನ ಆಯ್ಕೆಗೆ ಸಭೆ

ಸಾಂದರ್ಭಿಕ ಚಿತ್ರ

ಬೆಳಗಾವಿ: ಜಿಲ್ಲೆಯ ಸಾವಯವ ಬೆಲ್ಲ ಉತ್ಪಾದನಾ ಘಟಕಗಳಿಗೆ ಅತ್ಯುತ್ತಮ ಬ್ರ್ಯಾಂಡ್‌ ಸೃಷ್ಟಿಸಬಹುದಲ್ಲದೆ ಅಂತಾರಾಷ್ಟ್ರೀಯ ಮಾರುಕಟ್ಟೆ ಕೂಡ ಸೃಷ್ಟಿಸಲು ವಿಪುಲ ಅವಕಾಶಗಳಿವೆ. ಈ ಹಿನ್ನೆಲೆಯಲ್ಲಿ ಆತ್ಮ ನಿರ್ಭರ ಭಾರತ ಅಭಿಯಾನದಡಿ ಒಂದು ಜಿಲ್ಲೆ; ಒಂದು ಉತ್ಪನ್ನವಾಗಿ ಬೆಲ್ಲವನ್ನು ಆಯ್ಕೆ ಮಾಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹೇಳಿದರು.

ಆತ್ಮ ನಿರ್ಭರ ಭಾರತ ಅಭಿಯಾನದ ಭಾಗವಾಗಿ ಒಂದು ಜಿಲ್ಲೆ; ಒಂದು ಉತ್ಪನ್ನ-ಬೆಳೆ ಕುರಿತು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಕೃಷಿ, ವಾಣಿಜ್ಯ,ಆಹಾರ ಸಂಸ್ಕರಣೆ ಮತ್ತು ಕೃಷಿ ರಫ್ತು ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಈ ಅಭಿಯಾನದಡಿ ಜಿಲ್ಲೆಯ ಪ್ರಮುಖ ಬೆಳೆ ಹಾಗೂ ಉತ್ಪನ್ನವನ್ನು ಗುರುತಿಸಿ ಈ ಬೆಳೆಯ ಮೌಲ್ಯವರ್ಧನೆ, ಸಂಸ್ಕರಣೆ, ಪ್ಯಾಕಿಂಗ್‌, ಬ್ರ್ಯಾಂಡ್‌ ಅಭಿವೃದ್ಧಿ, ಮಾರುಕಟ್ಟೆಗೆ ಪ್ರೋತ್ಸಾಹಿಸಲಾಗುತ್ತದೆ ಎಂದರು.

ಬೆಲ್ಲ ತಯಾರಿಕಾ ಘಟಕಗಳನ್ನು ಮೊದಲು ಗುರುತಿಸಿ ಎಲ್ಲ ಆಯಾಮಗಳಲ್ಲಿ ಪರಿಶೀಲಿಸಿದ ಬಳಿಕ ಆತ್ಮನಿರ್ಭರ್‌ ಅಭಿಯಾನದ ಭಾಗವಾಗಿ ಒಂದು ಉತ್ಪನ್ನ ವಾಗಿ ಆಯ್ಕೆ ಮಾಡಲಾಗುವುದು ಎಂದರು. ಜಿಲ್ಲೆಯಲ್ಲಿ ಹಾಲು, ಅರಿಷಿಣ, ಮಾವು ಇತ್ಯಾದಿ ಸಂಸ್ಕರಣೆ ಘಟಕಗಳ ಸ್ಥಾಪನೆಗೂ ಉತ್ತಮ ಅವಕಾಶಗಳಿವೆ. ಇವುಗಳಲ್ಲಿ ಮಾವು ಸಂಸ್ಕರಣೆ ಘಟಕಗಳ ಮೂಲಕ ವಿವಿಧ ಉಪ ಉತ್ಪನ್ನಗಳ ತಯಾರಿಕೆಗೂ ಸಾಕಷ್ಟು ಅವಕಾಶಗಳಿವೆ. ಕೃಷಿಯೇತರ ಜಮೀನಿನಲ್ಲಿ ಸ್ಥಾಪಿತ ಘಟಕಗಳಿಗೆ ಮಾತ್ರ ಸಾಲಸೌಲಭ್ಯ ದೊರಕುವುದರಿಂದ ಬೆಲ್ಲ ಅಥವಾ ಎರಡನೇ ಆಯ್ಕೆಯಾಗಿ ಅರಿಷಿಣ ಸಂಸ್ಕರಣಾ ಘಟಕವನ್ನು ಆಯ್ಕೆ ಮಾಡುವಾಗ ನಬಾರ್ಡ್‌ ಮತ್ತು ಬೇರೆ ಬೇರೆ ಹಣಕಾಸು ಸಂಸ್ಥೆಗಳ ಜೊತೆ ಚರ್ಚಿಸಿದ ಬಳಿಕ ಮತ್ತೂಂದು ಸುತ್ತಿನ ಚರ್ಚೆ ನಡೆಸಿ ಅಂತಿಮ ತೀರ್ಮಾನ ಮಾಡಲಾಗುವುದು ಎಂದು ಹೇಳಿದರು. ಆತ್ಮ ನಿರ್ಭರ ಭಾರತ ಅಭಿಯಾನ- ಒಂದು ಜಿಲ್ಲೆ; ಒಂದು ಉತ್ಪನ್ನದ ಉತ್ತೇಜನಕ್ಕೆ ಮೊದಲ ವರ್ಷ ಶೇ.100 ರಷ್ಟು ನೆರವನ್ನು ಕೇಂದ್ರ ಸರ್ಕಾರವೇ ಭರಿಸಲಿರುವುದರಿಂದ ಸಂಬಂಧಿಸಿದ ಎಲ್ಲ ಇಲಾಖೆಯ ಅಧಿಕಾರಿಗಳು ಆದಷ್ಟು ಬೇಗನೆ ವಿಸ್ತೃತ ಯೋಜನೆ ರೂಪಿಸಿ ಕೇಂದ್ರ ಸರ್ಕಾರಕ್ಕೆ ಕಳುಹಿಸಬೇಕು ಎಂದು ನಿರ್ದೇಶನ ನೀಡಿದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್‌ ಎಚ್‌.ವಿ. ಮಾತನಾಡಿ, ಮುಂಬರುವ ದಿನಗಳಲ್ಲಿ ಬ್ಯಾಂಕುಗಳಿಂದ ಸರಳವಾಗಿ ಸಾಲಸೌಲಭ್ಯ ಒದಗಿಸಲು ಸಾಧ್ಯವಾಗುವಂತಹ ಆಹಾರ ಸಂಸ್ಕರಣೆ ಘಟಕಗಳನ್ನು ಆಯ್ಕೆ ಮಾಡುವುದರಿಂದ ಅಭಿವೃದ್ಧಿ ಸುಲಭವಾಗುತ್ತದೆ ಎಂದು ಹೇಳಿದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ಮಾತನಾಇ ಯೋಜನೆಮಾಹಿತಿ ನೀಡಿದರು. ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ದೊಡ್ಡಬಸವರಾಜ್‌, ಕೃಷಿ ಇಲಾಖೆಯ ಉಪ ನಿರ್ದೇಶಕ ಡಾ.ಎಚ್‌.ಡಿ.ಕೋಳೇಕರ್‌, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ರವೀಂದ್ರ ಹಕಾಟಿ, ಲೀಡ್‌ ಬ್ಯಾಂಕ್‌ ವ್ಯವಸ್ಥಾಪಕ ರಾಹುಲ್‌ ಸಭೆಯಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.