ಅಧಿವೇಶನ ವಿರುದ್ಧ ಎಂಇಎಸ್ ಮರಾಠಿ ಮಹಾ ಮೇಳಾವ್!
Team Udayavani, Nov 13, 2017, 7:10 AM IST
ಬೆಳಗಾವಿ: ಉತ್ತರ ಕರ್ನಾಟಕದ ವಿಕಾಸಕ್ಕಾಗಿ ಗಡಿ ನೆಲ ಬೆಳಗಾವಿಯಲ್ಲಿ ಸರಕಾರ ನಡೆಸುತ್ತಿರುವ ಚಳಿಗಾಲದ ಅಧಿವೇಶನ ವಿರೋಧಿಸಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಮರಾಠಿ ಮಹಾ ಮೇಳಾವ್ ನಡೆಸಿ ಕರ್ನಾಟಕ ಸರಕಾರಕ್ಕೆ ಸಡ್ಡು ಹೊಡೆಯಲು ಸಜ್ಜಾಗಿದೆ.
ಈ ಸಲ ರಾಷ್ಟ್ರವಾದಿ ಕಾಂಗ್ರೆಸ್ (ಎನ್ಸಿಪಿ)ನ ಇಬ್ಬರು ನಾಯಕರು ಪ್ರಮುಖ ಭಾಷಣಕಾರರಾಗಿ ಆಗಮಿಸಲಿದ್ದಾರೆ. ಮಹಾರಾಷ್ಟ್ರ ವಿಧಾನ ಪರಿಷತ್ನ ವಿರೋಧ ಪಕ್ಷದ ನಾಯಕ ಧನಂಜಯ ಮುಂಡೆ, ಮಾಜಿ ಸಚಿವ ಜಯವಂತ ದಳವಿ, ಸಂಸದ ಧನಂಜಯ ಮಹಾಡಿಕಗೆ ಮೇಳಾವ್ಕ್ಕೆ ಹೋಗುವಂತೆ ಎನ್ಸಿಪಿ ಪರಮೋಚ್ಚ ನಾಯಕ ಶರದ ಪವಾರ ಖಡಕ್ ಸೂಚನೆ ನೀಡಿದ್ದಾರೆ.
ಶರದ ಪವಾರ ಆಗಮಿಸದಿದ್ದರೂ ಅವರು ಬರೆದ ಪತ್ರವನ್ನು ಎಂಇಎಸ್ ನಾಯಕರು ಮೇಳಾವ್ದಲ್ಲಿ ಓದಲಿದ್ದಾರೆ.
1986ರಲ್ಲಿ ಕನ್ನಡ ವಿರೋಧಿ ಸಮಾವೇಶಕ್ಕೆ ಜಿಲ್ಲಾಡಳಿತ ಅನುಮತಿ ನೀಡಿರಲಿಲ್ಲ. ಆಗ ಶರದ ಪವಾರ ಹಾಗೂ ಛಗನ್ ಭುಜಬಲ ವೇಷ ಬದಲಿಸಿಕೊಂಡು ಸಮಾವೇಶದಲ್ಲಿ ಭಾಗವಹಿಸಿದ್ದರು. ಈ ಸಲವೂ ಅನುಮತಿ ಸಿಗದಿದ್ದರೆ ಎನ್ಸಿಪಿ ಮುಖಂಡರು ಹೇಗಾದರೂ ಮಾಡಿ ಭಾಗವಹಿಸುವಂತೆ ಪವಾರ ಸೂಚನೆ ನೀಡಿದ್ದಾರೆ ಎಂದು ಎಂಇಎಸ್ ನಾಯಕರು
ತಿಳಿಸಿದ್ದಾರೆ.
ಜೊತೆಗೆ, ಬೆಳಗಾವಿ ದಕ್ಷಿಣ ಕ್ಷೇತ್ರದ ಎಂಇಎಸ್ ಬೆಂಬಲಿತ ಶಾಸಕ ಸಂಭಾಜಿ ಪಾಟೀಲ ಹಾಗೂ ಖಾನಾಪುರ ಶಾಸಕ ಅರವಿಂದ ಪಾಟೀಲ ಅವರು ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ಆಗಮಿಸಿ ನಂತರ ಮೇಳಾವ್ದಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರತಿ ವರ್ಷದಂತೆ ಈ ಸಲವೂ ಮಹಾರಾಷ್ಟ್ರ ಪರ ಘೋಷಣೆ ಕೂಗಿ ಕಲಾಪದಿಂದ ಹೊರ ನಡೆದು ಮೇಳಾವ್ದಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ.
ಮೇಳಾವ್ಕ್ಕೆ ಹೆಚ್ಚಿನ ಜನರನ್ನು ಸೇರಿಸಲು ಎಂಇಎಸ್ ಸಾಮಾಜಿಕ ಜಾಲತಾಣಗಳ ಮೊರೆ ಹೋಗಿದೆ. ವಾಟ್ಸ್ ಆ್ಯಪ್, ಫೇಸ್ಬುಕ್ಗಳ ಮೂಲಕ ಪ್ರಚಾರ ನಡೆಸುತ್ತಿದೆ. ಕನ್ನಡ ವಿರುದಟಛಿ ಬರೆದ ಪೋಸ್ಟ್ಗಳನ್ನು ಅಪ್ಲೋಡ್ ಮಾಡಲಾಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಎಂಇಎಸ್ ನಾಯಕರು ಸಭೆ ನಡೆಸಿ ಜನರನ್ನು ಆಹ್ವಾನಿಸುತ್ತಿದ್ದಾರೆ. ಆದರೆ, ಸದ್ಯ ಹೊಲಗಳಲ್ಲಿ ರಾಶಿ ಕಾರ್ಯ ನಡೆಯುತ್ತಿರುವುದರಿಂದ ಹೆಚ್ಚಿನ ಜನ ಸೇರುವುದು ಅಸಾಧ್ಯ.
ಭೈರೋಬಾ ಕಾಂಬಳೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ