ಎಂಇಎಸ್ ಹಿರಿಯ ಹೋರಾಟಗಾರ ಎನ್.ಡಿ. ಪಾಟೀಲ್ ನಿಧನ
Team Udayavani, Jan 17, 2022, 1:15 PM IST
ಬೆಳಗಾವಿ: ಮಹಾರಾಷ್ಟ್ರ ಏಕೀಕರಣ ಸಮಿತಿಯ ಹಿರಿಯ ಹೋರಾಟಗಾರ ಮಹಾರಾಷ್ಟ್ರದ ಮಾಜಿ ಸಚಿವ ನಾರಾಯಣ ಜ್ಞಾನದೇವ್ ಪಾಟೀಲ್ (ಎನ್.ಡಿ.ಪಾಟೀಲ) ಅನಾರೋಗ್ಯದಿಂದ ಸೋಮವಾರ ಬೆಳಗ್ಗೆ ನಿಧನರಾದರು.
ಅನಾರೋಗ್ಯದಿಂದಾಗಿ ಎನ್.ಡಿ. ಪಾಟೀಲ (93 ವ) ಅವರನ್ನು ಕೊಲ್ಲಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ನಾಲ್ಕೈದು ದಿನಗಳಿಂದ ಚಿಕಿತ್ಸೆ ನೀಡಿದರೂ ಫಲಿಸದೇ ನಿಧನರಾದರು. ಮಹಾರಾಷ್ಟ್ರ ಏಕೀಕರಣ ಸಮಿತಿ ಪ್ರತಿವರ್ಷ ಜ. 17ರಂದು ನಡೆಸುವ ಹುತಾತ್ಮ ದಿನದಂದೇ ಎನ್.ಡಿ. ಪಾಟೀಲ ನಿಧನರಾಗಿದ್ದು ಕಾಕತಾಳೀಯ.
ಇದನ್ನೂ ಓದಿ:ಪಿಡಬ್ಲ್ಯೂಡಿ ಖಾಸಗಿ ಕಂಪನಿಯಾ?: ಅಧಿಕಾರಿಗಳಿಗೆ ಸಂಸದ ಉಮೇಶ ಜಾಧವ್ ತರಾಟೆ
ಎನ್.ಡಿ ಪಾಟೀಲ್ ಎಂದೇ ಖ್ಯಾತರಾಗಿದ್ದ ಅವರು ಬೆಳಗಾವಿ ಗಡಿ ವಿವಾದದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಮಹಾರಾಷ್ಟ್ರದಿಂದ ಬೆಳಗಾವಿಗೆ ಬಂದು ಚಳವಳಿ ನಡೆಸುತ್ತಿದ್ದರು.ಸುಮಾರು 60 ವರ್ಷಗಳಿಂದ ಕರ್ನಾಟಕ ಮಹಾರಾಷ್ಟ್ರ ಗಡಿ ಹೋರಾಟದಲ್ಲಿ ಪಾಲ್ಗೊಳ್ಳುತ್ತಿದ್ದರು. 18 ವರ್ಷಗಳ ಕಾಲ ಮಹಾರಾಷ್ಟ್ರ ವಿಧಾನ ಪರಿಷತ್ ಸದಸ್ಯರಾಗಿದ್ದರು. 1977-80ರಲ್ಲಿ ಮಹಾರಾಷ್ಟ್ರದ ಸಹಕಾರ ಸಚಿವರಾಗಿದ್ದರು. ರಾಜ್ಯ ಗಡಿ ಸಲಹಾ ಸಮಿತಿಯ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್ ಚೆಲ್ಲಾಪಿಲ್ಲಿ
Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ
MUST WATCH
ಹೊಸ ಸೇರ್ಪಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ