ಕೋವಿಡ್ ವಾರಿಯರ್ಸ್ ಗೆ ಹಾಲು ಒಕ್ಕೂಟ ಪ್ರೋತ್ಸಾಹ
Team Udayavani, Jun 14, 2020, 6:39 AM IST
ರಾಯಬಾಗ: ಜಿಲ್ಲಾ ಹಾಲು ಒಕ್ಕೂಟದ ವತಿಯಿಂದ ಕೋವಿಡ್ ವಾರಿಯರ್ಸ್ ಹಾಗೂ ಆಶಾ ಕಾರ್ಯಕರ್ತರಿಗೆ ಪ್ರೋತ್ಸಾಹಧನ ಚೆಕ್ ವಿತರಣಾ ಕಾರ್ಯಕ್ರಮ ಪಟ್ಟಣದ ವಸಂತರಾವ್ ಪಾಟೀಲ ಸಭಾಭವನದಲ್ಲಿ ಶನಿವಾರ ನಡೆಯಿತು.
ವಿಧಾನ ಪರಿಷತ್ ಸದಸ್ಯ ಹಾಗೂ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ವಿವೇಕರಾವ್ ಪಾಟೀಲ ಅವರು ಚೆಕ್ ವಿತರಿಸಿ ಮಾತನಾಡಿ, ಕೋವಿಡ್ ಸಂದಿಗ್ಧ ಪರಿಸ್ಥಿತಿಯಲ್ಲಿ ಆಶಾ ಕಾರ್ಯಕರ್ತರು ಸಾಕಷ್ಟು ಶ್ರಮವಹಿಸಿ ಎಲ್ಲರೂ ಮೆಚ್ಚುವಂಥ ಕಾರ್ಯ ಮಾಡಿದ್ದಾರೆ. ಅವರಿಗೆ ಜಿಲ್ಲಾ ಹಾಲು ಒಕ್ಕೂಟದಿಂದ 25 ಲಕ್ಷ ರೂ. ಪ್ರೋತ್ಸಾಹ ಧನ ವಿತರಿಸಲಾಗಿದೆ. ಜಿಲ್ಲೆಯ ಪ್ರತಿಯೊಬ್ಬ ಆಶಾ ಕಾರ್ಯಕರ್ತರಿಗೆ ಮೂರು ಸಾವಿರ ರೂ. ಧನಸಹಾಯ ನೀಡಲಾಗುತ್ತಿದೆ. ಅಲ್ಲದೆ ಮುಖ್ಯಮಂತ್ರಿಗಳ ಕೋವಿಡ್-19 ಪರಿಹಾರ ನಿಧಿಗೆ 25 ಲಕ್ಷ ರೂ. ನೀಡಿದ್ದೇವೆ ಎಂದು ಹೇಳಿದರು.
ತಹಶೀಲ್ದಾರ್ ಚಂದ್ರಕಾಂತ ಭಜಂತ್ರಿ, ಸಹಕಾರಿ ಸಂಘಗಳ ಉಪನಿರ್ದೇಶಕ ಕೆ.ಎಲ್. ಶ್ರೀನಿವಾಸ ಮಾತನಾಡಿದರು. ತಾಲೂಕಿನ 65 ಆಶಾ ಕಾರ್ಯಕರ್ತರಿಗೆ ಪ್ರೋತ್ಸಾಹ ಧನದ ಚೆಕ್ ವಿತರಿಸಲಾಯಿತು.
ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಉಬೇದುಲ್ಲಾಖಾನ, ಡಾ| ವಿ.ಕೆ. ಜೋಷಿ, ಪಿಎಸ್ಐ ಗಜಾನನ ಮಾಂಗ, ಡಾ| ಆರ್.ಎಚ್. ರಂಗನ್ನವರ, ಕೆಎಂಎಫ್ ನಿರ್ದೇಶಕರಾದ ಎಸ್.ಎಸ್. ಮುಗಳಿ, ಬಿ.ಬಿ. ಕಟ್ಟಿ, ಉದಯಸಿಂಹ ಶಿಂಧೆ, ಡಾ| ಬಿ.ಎಂ. ಪರವಣ್ಣವರ, ಬಿ.ಎಸ್. ವಾಗ್ಮೊಡೆ, ವಿ.ಬಿ. ಈಟಿ, ಆರ್.ಬಿ. ಡೂಗ, ಪಿ.ವೈ. ಅಂಬೋಜಿ, ಸುನೀತಾ ಖಾನಪ್ಪಗೋಳ, ಎಸ್.ಎಸ್. ಪಾಟೀಲ, ಆರ್.ಕೆ. ಬಂಡಿ ಉಪಸ್ಥಿರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್ ಚೆಲ್ಲಾಪಿಲ್ಲಿ
Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ
MUST WATCH
ಹೊಸ ಸೇರ್ಪಡೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!