ಆರೆಸ್ಸೆಸ್‌ ತಾಲಿಬಾನ್‌ಗೆ ಹೋಲಿಸಿದ ಸಿದ್ದುಗೆ ಬಿ.ಸಿ ಪಾಟೀಲ ತಿರುಗೇಟು


Team Udayavani, Sep 30, 2021, 1:28 PM IST

ghdftytr

ಬೆಳಗಾವಿ:ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆರೆಸ್ಸೆಸ್‌ ಅನ್ನು ತಾಲಿಬಾನ್‌ ಸಂಘಟನೆಗೆ ಹೋಲಿಕೆ ಮಾಡಿರುವುದು ಸರಿಯಲ್ಲ. ಅವರದ್ದು ಬಾಲೀಶ ಹೇಳಿಕೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಕಾಂಗ್ರೆಸ್‌ಗೆ ತಿರುಗೇಟು ನೀಡಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ನವರು ಮೊದಲಿನಿಂದಲೂ ಪಾಕಿಸ್ತಾನ, ತಾಲಿಬಾನ್‌ ಸಂಘಟನೆಗಳಿಗೆ ಬೆಂಬಲಿಸುತ್ತ ಬಂದಿದ್ದಾರೆ. ಈಗ ಬೇರೆಯವರತ್ತ ಬೆರಳು ತೋರಿಸುತ್ತಿದ್ದಾರೆ. ಪಾಕಿಸ್ತಾನವನ್ನು ಬೆಂಬಲಿಸುವವರು ಯಾರು ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಕಿಡಿಕಾರಿದರು. ಬಿಜೆಪಿ ರಾಷ್ಟ್ರೀಯವಾದ ಮತ್ತು ಏಕತೆಗೆ ಒತ್ತು ಕೊಡುತ್ತದೆ. ಕಾಂಗ್ರೆಸ್‌ನವರ ಇಲ್ಲಸಲ್ಲದ ಆರೋಪಗಳು ಸತ್ಯಕ್ಕೆ ದೂರವಾಗಿವೆ ಎಂದರು.

ನಾವು ಯಾರೂ ಕಾಂಗ್ರೆಸ್‌ಗೆ ಮರಳುವ ಪ್ರಶ್ನೆಯೇ ಇಲ್ಲ. ಆದರೆ ಆ ಪಕ್ಷದ ಕೆಲವು ನಾಯಕರು ಬಟ್ಟೆ ಹಾವು ಬಿಟ್ಟು ಹೆದರಿಸುತ್ತಿದ್ದಾರೆ. ಬೆಂಕಿ ಹಚ್ಚುವ ಕೆಲಸ ಅವರು ಮಾಡುತ್ತಿದ್ದಾರೆ. ಬಿಜೆಪಿಗೆ ಬಂದಿರುವ ನಾವು ಯಾರೂ ವಲಸಿಗರಲ್ಲ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಗೆದ್ದು ಸಚಿವರಾಗಿದ್ದೇವೆ. ಬಿಜೆಪಿಯಲ್ಲಿ ನಮಗೆ ಸೂಕ್ತ ಸ್ಥಾನಮಾನ ಸಿಕ್ಕಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹಾಗೂ ನಮ್ಮ ಸ್ನೇಹ ವಲಯದ ಶಾಸಕರ ಮಧ್ಯೆ ಯಾವುದೇ ಬ್ರೇಕ್‌ ಆಗಿಲ್ಲ. ನಮ್ಮೆಲ್ಲರ ಮಧ್ಯೆ ಪ್ರೀತಿ ಇದೆ ಎಂದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ರಾಜ್ಯದಲ್ಲಿ ಪಕ್ಷ ಸಂಘಟನೆಗಾಗಿ ಕೈಗೊಂಡಿರುವ ಪ್ರವಾಸಕ್ಕೆ ಯಾರೂ ಬ್ರೇಕ್‌ ಹಾಕಿಲ್ಲ. ಪಕ್ಷ ಮತ್ತಷ್ಟು ಸಬಲವಾಗಲಿದೆ. ಯಡಿಯೂರಪ್ಪ ಅವರ ಮಾರ್ಗದರ್ಶನ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿಯೇ 2023ರ ವಿಧಾನಸಭೆ ಸಾರ್ವತ್ರಿಕ ಚುನಾವಣೆ ಎದುರಿಸಲಿದ್ದೇವೆ. ಹೆಚ್ಚಿನ ಸ್ಥಾನಗಳನ್ನು ಗೆದ್ದು ಮತ್ತೆ ಅಧಿಕಾರಕ್ಕೆ ಬರುತ್ತೇವೆ. ಹಾನಗಲ್‌ ಮತ್ತು ಸಿಂದಗಿ ಉಪ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದರು.

ಹಾನಗಲ್‌ನಲ್ಲಿ ವಿಧಾನಸಭೆ ಉಪಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಟಿಕೆಟ್‌ ಆಕಾಂಕ್ಷಿಗಳ ಪಟ್ಟಿ ಸಿದ್ಧಪಡಿಸುಂತೆ ವರಿಷ್ಠರಿಂದ ಸೂಚನೆ ಬಂದಿದೆ. ಅಲ್ಲಿ ಉಸ್ತುವಾರಿ ಸಚಿವನಾಗಿದ್ದರಿಂದ ಹಾನಗಲ್‌ನಲ್ಲಿ ಸಭೆ ನಡೆಸಿ ಆಕಾಂಕ್ಷಿಗಳ ಪಟ್ಟಿ ಪಡೆದು ಹೈಕಮಾಂಡ್‌ಗೆ ಕಳುಹಿಸಲಾಗುವುದು ಎಂದರು.

ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾನಗಲ್‌ ನಿಂದ ಸ್ಪರ್ಧಿಸುವ ವಿಷಯ ನನಗೆ ಗೊತ್ತಿಲ್ಲ. ಅಲ್ಲಿಂದ ಯಾರು ಸ್ಪರ್ಧಿಸಬೇಕು ಎಂಬುದನ್ನು ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದು ಸಚಿವ ಪಾಟೀಲ ಹೇಳಿದರು.

ಟಾಪ್ ನ್ಯೂಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.