ಸಂತೋಷ್ ಮನೆಗೆ ಸಚಿವ ಮುರುಗೇಶ ನಿರಾಣಿ ಭೇಟಿ
Team Udayavani, Apr 13, 2022, 12:20 PM IST
ಬೆಳಗಾವಿ: ಉಡುಪಿಯಲ್ಲಿ ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳಗಾವಿಯಲ್ಲಿರುವ ಮೃತನ ಮನೆಗೆ ಸಚಿವ ಮುರುಗೇಶ ನಿರಾಣಿ ಭೇಟಿ ನೀಡಿ ಸಾಂತ್ವನ ಹೇಳಿದರು.
ಸಮರ್ಥ ಕಾಲೋನಿಯ ನಿವಾಸಿ ಸಂತೋಷ ಪಾಟೀಲ ಮನೆಗೆ ಭೇಟಿ ನೀಡಿದ ಸಚಿವರು, ಸಂತೋಷ ಕುಟುಂಬಸ್ಥರಿಗೆ ಮತ್ತು ಪತ್ನಿಗೆ ಸಾಂತ್ವನ ಹೇಳಿದರು.
ಬಳಿಕ ಮಾತನಾಡಿದ ಅವರು, ನಿಮ್ಮ ಕುಟುಂಬದ ಸಂಪೂರ್ಣ ಜವಾಬ್ದಾರಿಯನ್ನು ನಾನು ತೆಗೆದುಕೊಳ್ಳುತ್ತೇನೆ. ಸರ್ಕಾರದಿಂದ ಆದಷ್ಟು ಸಹಾಯವನ್ನು ಕುಟುಂಬಕ್ಕೆ ಮಾಡುತ್ತೇವೆ. ಸಂತೋಷ್ ಪತ್ನಿಗೆ ಯಾವುದಾದರೂ ಒಂದು ಸರ್ಕಾರಿ ನೌಕರಿಯನ್ನು ಕೊಡಿಸುವಂತೆ ಸಿಎಂ ಬೊಮ್ಮಾಯಿಯವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಇದನ್ನೂ ಓದಿ:ಮಂಗಳೂರು: ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಸಿಎಂಗೆ ಕಪ್ಪು ಬಾವುಟ ಪ್ರದರ್ಶಿಸಿದ ಎಸ್.ಡಿ.ಪಿ.ಐ
ಬೆಳಗಾವಿ ಮೂಲದ ಗುತ್ತಿಗೆದಾರ ಮತ್ತು ಬಿಜೆಪಿ ಕಾರ್ಯಕರ್ತ ಎನ್ನಲಾದ ಸಂತೋಷ್ ಪಾಟೀಲ್ ಉಡುಪಿಯಲ್ಲಿ ಮಂಗಳವಾರ ನಿಗೂಢವಾಗಿ ಸಾವನ್ನಪ್ಪಿದ್ದರು.
“ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರೇ ನನ್ನ ಸಾವಿಗೆ ಕಾರಣ” ಎಂದು ಬರೆದಿರುವ “ಡೆತ್ ನೋಟ್’ ಒಂದು ವೈರಲ್ ಆಗುವುದರೊಂದಿಗೆ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದೆ.
ಇತ್ತೀಚೆಗಷ್ಟೇ ಸಂತೋಷ್ ಅವರು ಸಚಿವ ಈಶ್ವರಪ್ಪ ವಿರುದ್ಧ ಶೇ. 40 ಕಮಿಷನ್ ಆರೋಪ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
MUST WATCH
ಹೊಸ ಸೇರ್ಪಡೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ