ಸಚಿವ ಸ್ಥಾನಕ್ಕೆ ಆತಂಕವಿಲ್ಲ: ರಮೇಶ್
Team Udayavani, Jan 27, 2017, 3:45 AM IST
ಬೆಳಗಾವಿ: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿಯಿಂದ ಸಚಿವ ಸ್ಥಾನಕ್ಕೆ ಯಾವುದೇ ಆತಂಕ ಎದುರಾಗಿಲ್ಲ ಎಂದು ಸಣ್ಣ ಕೈಗಾರಿಕೆ ಸಚಿವ ರಮೇಶ ಜಾರಕಿಹೊಳಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಾಳಿಯ ಹಿಂದೆ ಸ್ಥಳೀಯ ರಾಜಕಾರಣ ಇದೆ. ಕೆಲವರು ರಾಜಕೀಯ ಕಾರಣದಿಂದ ತಪ್ಪು ದಾರಿ ಹಿಡಿದಿದ್ದಾರೆ. ಅವರಿಗೆ ದೇವರು ಒಳ್ಳೆ ಬುದ್ಧಿ ಕೊಡಲಿ. ದ್ವೇಷದ ರಾಜಕೀಯ ಮಾಡಬಾರದು ಎಂದು ಮಾರ್ಮಿಕವಾಗಿ ತಿಳಿಸಿದರು.
ನೇರ ಮಾತನಾಡುವುದು ನನ್ನ ಸ್ವಭಾವ. ಯಾರಿಗೂ ಮೋಸ ಮಾಡಿಲ್ಲ. ವೈಯಕ್ತಿಕ ದ್ವೇಷದಿಂದ ನಾನು ಎಂದಿಗೂ ರಾಜಕೀಯ ಮಾಡುತ್ತಿಲ್ಲ. ನಗುವ ರಾಜಕಾರಣಿಗಳು ಮೋಸ ಮಾಡುತ್ತಾರೆ. ಸಚಿವನಾದ ತಕ್ಷಣವೇ ನಾನು ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಯಾವತ್ತೂ ಪ್ರಚಾರ ಬಯಸಿಲ್ಲ ಎಂದರು.
ಮುಂಬರುವ ಚುನಾವಣೆಯಲ್ಲಿ ಜಿಲ್ಲೆಯ 18 ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಲು ಪ್ರಯತ್ನಿಸುತ್ತೇನೆ ಎಂದು ನುಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್