ರಾಜ್ಯದಲ್ಲಿ ಇನ್ನು ಮುಂದೆ ಲಾಕ್ ಡೌನ್ ಪರಿಸ್ಥಿತಿ ಮುಂದುವರಿಯುವುದಿಲ್ಲ: ಶಿವರಾಮ್ ಹೆಬ್ಬಾರ್
Team Udayavani, Jun 22, 2020, 3:14 PM IST
ಬೆಳಗಾವಿ: ರಾಜ್ಯದಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸರಕಾರ ಸಾಕಷ್ಟು ಬಿಗಿ ಕ್ರಮಗಳನ್ನು ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಇನ್ನು ಮುಂದೆ ಲಾಕ್ ಡೌನ್ ಪರಿಸ್ಥಿತಿ ಮುಂದುವರಿಯುವುದಿಲ್ಲ ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದರು.
ಸಚಿವರಾದ ನಂತರ ಇದೇ ಮೊದಲ ಬಾರಿಗೆ ಸೋಮವಾರ ಬೆಳಗಾವಿ ನಗರಕ್ಕೆ ಆಗಮಿಸಿದ್ದ ಅವರು ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರ ಸ್ವಾಗತ ಸ್ವೀಕರಿಸಿ ಮಾತನಾಡಿದ ಅವರು ಕಾರ್ಮಿಕರು ಧೈರ್ಯವಾಗಿ ಹೋಗಿ ಕೆಲಸ ಮಾಡಬೇಕು. ರಾಜ್ಯ ಹಾಗೂ ರಾಷ್ಟ್ರದ ಪ್ರಗತಿಗಾಗಿ ಗಟ್ಟಿಯಾದ ಹೆಜ್ಜೆಗಳನ್ನು ಇಡಬೇಕಾದ ಸಂದರ್ಭದಲ್ಲಿ ನಾವೆಲ್ಲರೂ ಇದ್ದೇವೆ’ ಎಂದರು.
ಶಿಕ್ಷಣ ಕ್ಷೇತ್ರ ಹೊರತುಪಡಿಸಿ ಉಳಿದ ಎಲ್ಲ ಕ್ಷೇತ್ರಗಳಲ್ಲೂ ಲಾಕ್ಡೌನ್ ನಿರ್ಬಂಧಗಳನ್ನು ನಿಧಾನವಾಗಿ ಕಡಿಮೆ ಮಾಡಲಾಗುತ್ತದೆ. ಮಕ್ಕಳ ವಿಷಯದಲ್ಲಿ ಪ್ರಧಾನಿಗಳು ಹಾಗೂ ಮುಖ್ಯಮಂತ್ರಿಗಳು ಬಹಳ ಎಚ್ಚರಿಕೆಯ ಹೆಜ್ಜೆಗಳನ್ನು ಇಡುತ್ತಿದ್ದಾರೆ. ಒಂದು ವರ್ಷ ಮಕ್ಕಳ ಭವಿಷ್ಯವನ್ನು ಕಳೆದು ಕೊಳ್ಳುತ್ತೇವೆ. ಆದರೆ, ಒಂದು ಮಗುವನ್ನೂ ಕೋವಿಡ್-19ನಿಂದ ಕಳೆದುಕೊಳ್ಳುವುದಕ್ಕೆ ಸಿದ್ಧವಿಲ್ಲ ಎಂದು ಹೇಳಿದರು.
ಮಕ್ಕಳು ಹಾಗೂ ಪೋಷಕರ ಮೇಲೆ ಏನನ್ನೂ ಹೇರಿಕೆ ಮಾಡುವುದಿಲ್ಲ. ಎಲ್ಲಿಯವರೆಗೆ ಪೋಷಕರಲ್ಲಿ ಧೈರ್ಯ ಬರುವುದಿಲ್ಲವೋ ಅಲ್ಲಿವರೆಗೆ ಶಾಲೆಯನ್ನು ಆರಂಭ ಮಾಡುವಂತಹ ಹುಚ್ಚು ನಿರ್ಣಯ ಮಾಡುವುದಕ್ಕೆ ಸರ್ಕಾರ ತಯಾರಿಲ್ಲ. ಸಚಿವ ಸಂಪುಟದಲ್ಲಿ ಈ ಬಗ್ಗೆ ಹಲವು ಬಾರಿ ಚರ್ಚಿಸಲಾಗಿದೆ. ಕೆಎಸ್ಆರ್ಟಿ ಸಿ ಬಸ್ ಓಡಿಸುತ್ತಿದ್ದೇವೆ. ಆದರೆ ಜನರೇ ಬರುತ್ತಿಲ್ಲ. ಹೀಗಾಗಿ ಜನರಿಗೆ ಧೈರ್ಯ ಬರುವವರೆಗೂ ಶಾಲೆಗಳನ್ನು ಆರಂಭಿಸುವುದು ಸರಿಯಲ್ಲ ಎಂದು ನಿರ್ಣಯ ಮಾಡಿದ್ದೇವೆ’ ಎಂದರು.
ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಸವಾಲಾಗಿ ಸ್ವೀಕರಿಸಿದ್ದೇವೆ. ಮಕ್ಕಳ ಸುರಕ್ಷತೆಗಾಗಿ ಎಲ್ಲ ರೀತಿಯ ಸಿದ್ಧತೆಯನ್ನೂ ಮಾಡಿಕೊಳ್ಳಲಾಗಿದೆ. ಪಕ್ಷದ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಸಹಕಾರ ಕೊಡಬೇಕು. ಜನಪ್ರತಿನಿಧಿಗಳು ಕೂಡ ನೆರವಾಗಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ, ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್