ಸಚಿವ ಸ್ಥಾನಕ್ಕಾಗಿ ಆರಂಭವಾದ ಕಸರತ್ತು
ಬೊಮ್ಮಾಯಿ ಸರ್ಕಾರದಲ್ಲಿ ಗಡಿ ಜಿಲ್ಲೆಗೆ ಪ್ರಾತಿನಿಧ್ಯದ ಲೆಕ್ಕಾಚಾರ| 18ರಲ್ಲಿ 13 ಶಾಸಕರು ಬಿಜೆಪಿ
Team Udayavani, Jul 30, 2021, 6:53 PM IST
ವರದಿ: ಕೇಶವ ಆದಿ
ಬೆಳಗಾವಿ: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಸರಕಾರದಲ್ಲಿ ಸಿಂಹಪಾಲು ಪಡೆದಿದ್ದ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಈಗ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರಕಾರದಲ್ಲಿ ಪ್ರಾತಿನಿಧ್ಯದ ಲೆಕ್ಕಾಚಾರ ಆರಂಭವಾಗಿದೆ.
ಬಿಜೆಪಿ ಸರಕಾರದ ನಾಯಕತ್ವ ಬದಲಾಗಿ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಪದವಿ ಅಲಂಕರಿಸುತ್ತಿದ್ದಂತೆ ಬೆಳಗಾವಿ ಜಿಲ್ಲೆಯ ನಾಲ್ವರು ಸಚಿವರ ಕತೆ ಏನು? ಹೊಸ ಸರಕಾರದಲ್ಲಿ ಯಾರೆಲ್ಲ ಸ್ಥಾನ ಪಡೆಯುತ್ತಾರೆ? ಜಿಲ್ಲೆಗೆ ಗರಿಷ್ಠ ಸ್ಥಾನ ಮತ್ತು ಉಪಮುಖ್ಯಮಂತ್ರಿ ಪಟ್ಟ ಸಿಗಬಹುದೇ? ಎಂಬೆಲ್ಲ ಲೆಕ್ಕಾಚಾರ, ಚರ್ಚೆ ಆರಂಭವಾಗಿದೆ.
ಸಚಿವ ಸ್ಥಾನಕ್ಕಾಗಿ ಬಹಳ ಜೋರಾದ ಪ್ರಯತ್ನಗಳೂ ಸಹ ನಡೆದಿವೆ. ಆದರೆ ಯಡಿಯೂರಪ್ಪ ಸಂಪುಟದಲ್ಲಿದ್ದ ಎಲ್ಲರಿಗೂ ಸ್ಥಾನ ದೊರೆಯುವುದು ಅನುಮಾನ. ಹೊಸ ಮುಖಗಳಿಗೆ ಅವಕಾಶ ಸಿಗುವ ಸಾಧ್ಯತೆ ಎಂಬುದು ಪಕ್ಷದ ಮೂಲಗಳ ಹೇಳಿಕೆ.
ಬೆಳಗಾವಿ ಜಿಲ್ಲೆಯ ಒಟ್ಟು 18 ಶಾಸಕರ ಪೈಕಿ 13 ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರಿದ್ದಾರೆ. ಯಡಿಯೂರಪ್ಪ ಸರಕಾರದಲ್ಲಿ ಲಕ್ಷ್ಮಣ ಸವದಿ, ರಮೇಶ ಜಾರಕಿಹೊಳಿ, ಶ್ರೀಮಂತ ಪಾಟೀಲ, ಶಶಿಕಲಾ ಜೊಲ್ಲೆ ಹಾಗೂ ಉಮೇಶ ಕತ್ತಿ ಸಚಿವರಾಗಿದ್ದರು. ಈಗ ಬೊಮ್ಮಾಯಿ ಸರಕಾರದಲ್ಲಿ ಈ ಐವರಲ್ಲದೆ ಶಾಸಕರಾದ ಆನಂದ ಮಾಮನಿ, ದುರ್ಯೋಧನ ಐಹೊಳೆ, ಪಿ ರಾಜೀವ, ಬಾಲಚಂದ್ರ ಜಾರಕಿಹೊಳಿ, ಅಭಯ ಪಾಟೀಲ, ಮಹೇಶ ಕುಮಟಳ್ಳಿ ಸಚಿವ ಸ್ಥಾನಕ್ಕೆ ಪ್ರಯತ್ನ ಆರಂಭಿಸಿದ್ದಾರೆ.
ಕಾಂಗ್ರೆಸ್-ಜೆಡಿಎಸ್ ಸರಕಾರದ ಪತನಕ್ಕೆ ಕಾರಣರಾದ ಜಿಲ್ಲೆಯ ರಮೇಶ ಜಾರಕಿಹೊಳಿ ಹಾಗೂ ಶ್ರೀಮಂತ ಪಾಟೀಲ ಯಡಿಯೂರಪ್ಪ ಸರಕಾರದಲ್ಲಿ ನಿರೀಕ್ಷೆಯಂತೆ ಸಚಿವ ಸ್ಥಾನ ಪಡೆದಿದ್ದರು. ರಮೇಶ ಜಾರಕಿಹೊಳಿ ತಮ್ಮ ಬೇಡಿಕೆಯಂತೆ ನೀರಾವರಿ ಖಾತೆ ಸಹ ಪಡೆದಿದ್ದರು. ಲಕ್ಷ್ಮಣ ಸವದಿ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದರೂ ತಮ್ಮ ಪ್ರಭಾವ ಬಳಸಿ ಸಚಿವರಾಗಿದ್ದಲ್ಲದೆ ಉಪಮುಖ್ಯಮಂತ್ರಿ ಹುದ್ದೆ ಪಡೆದು ಎಲ್ಲರನ್ನು ಅಚ್ಚರಿಗೊಳಿಸಿದ್ದರು. ಇದಾದ ಬಳಿಕ ಸತತ ಪ್ರಯತ್ನದಿಂದ ಉಮೇಶ ಕತ್ತಿ ಸಚಿವ ಸ್ಥಾನ ಗಿಟ್ಟಿಸಿಕೊಂಡಿದ್ದರು. ಇನ್ನೊಂದು ಕಡೆ ಮಹಿಳಾ ಕೋಟಾದಲ್ಲಿ ಶಶಿಕಲಾ ಜೊಲ್ಲೆ ಸಚಿವರಾಗಿದ್ದರು. ಈಗ ಇವರೆಲ್ಲರ ಸ್ಥಾನ ಏನು ಎಂಬ ಕುತೂಹಲ ಮೂಡಿದೆ.
ಯಡಿಯೂರಪ್ಪ ಸರಕಾರದಲ್ಲಿ ಬೆಂಗಳೂರು ನಂತರ ಬೆಳಗಾವಿಗೆ ಹೆಚ್ಚಿನ ಪ್ರಾತಿನಿಧ್ಯ ದೊರೆತಿದ್ದು ಸಾಕಷ್ಟು ಚರ್ಚೆಗೂ ಗ್ರಾಸವಾಗಿತ್ತು. ಪ್ರಕರಣವೊಂದರಲ್ಲಿ ಸಿಲುಕಿದ್ದ ರಮೇಶ ಚಾರಕಿಹೊಳಿ ಅವರು ವಿರೋಧ ಪಕ್ಷದವರ ಒತ್ತಡ ಮತ್ತು ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಬಾರಿ ರಮೇಶ ಜಾರಕಿಹೊಳಿ ಸಚಿವ ಸ್ಥಾನ ಪಡೆಯುವರೇ ಎಂಬ ಪ್ರಶ್ನೆ ಎಲ್ಲರನ್ನು ಕಾಡುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
MUST WATCH
ಹೊಸ ಸೇರ್ಪಡೆ
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ