ಸೋಂಕಿತರ ಸೇವೆಗೆ ಮಾದರಿ ಗಣೇಶ

ಸ್ವಂತ ವೆಚ್ಚದಲ್ಲಿ 22 ವೈದ್ಯಕೀಯ ಸಿಬ್ಬಂದಿ ನೇಮಕ­! ಆಸ್ಪತ್ರೆಯಲ್ಲಿ ‌ಪ್ರತಿ ದಿನ ಉಚಿತ ಊಟದ ವ್ಯವಸ್ಥೆ

Team Udayavani, May 29, 2021, 5:25 PM IST

45654645645

ವರದಿ : ಮಹಾದೇವ ಪೂಜೇರಿ

ಚಿಕ್ಕೋಡಿ: ಕೋವಿಡ್‌ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಚಿಕ್ಕೊಡಿ-ಸದಲಗಾ ಶಾಸಕ ಗಣೇಶ ಹುಕ್ಕೇರಿ ತಮ್ಮ ಕ್ಷೇತ್ರದ ಜನರನ್ನು ಕೊರೊನಾ ಸಂಕಟದಿಂದ ಪಾರು ಮಾಡಲು ನಿರಂತರ ಪ್ರಯತ್ನದ ಜೊತೆಗೆ ಮೂಲಭೂತ ಸೌಲಭ್ಯ ಒದಗಿಸುವಲ್ಲಿ ಒಂದು ಹೆಜ್ಜೆ ಮುಂದಿದ್ದಾರೆ.

ಕ್ಷೇತ್ರದ ಜನರಿಗೆ ಯಾವುದೇ ತೊಂದರೆಯಾಗದಂತೆ ಕಳೆದ ಒಂದು ತಿಂಗಳ ಹಿಂದೆಯಷ್ಟೇ ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದಲ್ಲಿ ಎರಡು ಕೋವಿಡ್‌ ಆಸ್ಪತ್ರೆ, ಯಕ್ಸಂಬಾ ಮತ್ತು ಸದಲಗಾ ಪಟ್ಟಣದಲ್ಲಿ ಕೋವಿಡ್‌ ಆಸ್ಪತ್ರೆ ಆರಂಭ ಮಾಡಿ ಸೋಂಕಿತರ ಆರೈಕೆಗೆ ಅನುಕೂಲ ಕಲ್ಪಿಸಿದ್ದಾರೆ.

ಸ್ವಂತ ಖರ್ಚಿನಲ್ಲಿ ವೈದ್ಯರ ನೇಮಕ: ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಇರುವುದನ್ನು ಮನಗಂಡು ಶಾಸಕ ಹುಕ್ಕೇರಿ ಅವರು ತಮ್ಮ ಅನ್ನಪೂರ್ಣೇಶ್ವರಿ ಫೌಂಡೇಶನ್‌ ಮೂಲಕ ವೈದ್ಯರು ಸೇರಿದಂತೆ 22 ವೈದ್ಯಕೀಯ ಸಿಬ್ಬಂದಿ ನೇಮಕ ಮಾಡಿಕೊಂಡು ಅವರನ್ನು ಚಿಕ್ಕೋಡಿ ತಾಲೂಕಿನ ಅಂಕಲಿ, ಯಕ್ಸಂಬಾ ಮತ್ತು ಸದಲಗಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ನಿಯೋಜಿಸುವ ಮೂಲಕ ಸೋಂಕಿತರಿಗೆ ಚಿಕಿತ್ಸೆ ಕೊಡಿಸಲು ಹಗಲಿರುಳು ಶ್ರಮಿಸುತ್ತಿದ್ದಾರೆ. 8 ಜನ ಎಂಬಿಬಿಎಸ್‌ ವೈದ್ಯರು, ಇಬ್ಬರು ಎಂಡಿ, ಇಬ್ಬರು ಬಿಎಎಂಎಸ್‌ ವೈದ್ಯರು ಹಾಗೂ ಸ್ಟಾಫ್‌ ನರ್ಸ ಮತ್ತು ಡಿ ಗ್ರೂಪ್‌ನ 10 ಜನ ಸಿಬ್ಬಂದಿಯನ್ನು ನೇಮಕ ಮಾಡಿಕೊಂಡಿದ್ದಾರೆ. ಎಂ.ಡಿ ವೈದ್ಯರಿಗೆ 4 ಲಕ್ಷ ರೂ, ಎಂಬಿಬಿಎಸ್‌ ವೈದ್ಯರಿಗೆ 3 ಲಕ್ಷ ರೂ, ಬಿಎಎಂಎಸ್‌ ವೈದ್ಯರಿಗೆ 60 ಸಾವಿರ ರೂ, ಸ್ಟಾಫ್‌ ನರ್ಸ್‌ಗೆ 30 ಸಾವಿರ ರೂ. ಹಾಗೂ ಡಿ ಗ್ರೂಪ್‌ ಸಿಬ್ಬಂದಿಗಳಿಗೆ 20 ಸಾವಿರ ರೂ. ವೇತನ ನಿಗದಿ ಮಾಡಿದ್ದಾರೆ. ಬರುವ ದಿನಗಳಲ್ಲಿ ಖಡಕಲಾಟ ಹಾಗೂ ಪಟ್ಟಣಕುಡಿ ಪ್ರಾಥಮಿಕ ಆಸ್ಪತ್ರೆಗಳಲ್ಲಿಯೂ ಸಹ ವೈದ್ಯರನ್ನು ನೇಮಕ ಮಾಡಿಕೊಂಡು ಕೊರೊನಾ ನಿಯಂತ್ರಣಕ್ಕೆ ಮುಂದಾಗಲಿದ್ದಾರೆ.

ಕ್ಷೇತ್ರದ ಜನರಿಗೆ ವ್ಯಾಕ್ಸಿನ್‌ ಕೊಡಿಸಲು ವಾಹನದ ವ್ಯವಸ್ಥೆ, ಕೋವಿಡ್‌ ಆಸ್ಪತ್ರೆಯಲ್ಲಿ ಉಚಿತ ಊಟದ ವ್ಯವಸ್ಥೆ, ಆಕ್ಸಿಜನ್‌ ಕೊರತೆ ನೀಗಿಸುವಲ್ಲಿ ನಿರಂತರವಾಗಿ ಅಧಿ ಕಾರಿಗಳ ಸಭೆ ನಡೆಸುತ್ತಿರುವ ಶಾಸಕ ಗಣೇಶ ಹುಕ್ಕೇರಿ ಅವರು ಹಗಲು ರಾತ್ರಿ ಎನ್ನದೇ ಕೊರೊನಾ ನಿಯಂತ್ರಣ ದಲ್ಲಿ ಸಮರೋಪಾದಿಯಲ್ಲಿ ತೊಡಗಿಕೊಂಡಿದ್ದಾರೆ.

ಪುತ್ರನಿಗೆ ತಂದೆ ಸಾಥ್‌: ಕೊರೊನಾ ವಿರುದ್ಧ ಹೋರಾಟದಲ್ಲಿ ಶಾಸಕ ಗಣೇಶ ಹುಕ್ಕೇರಿಗೆ ತಂದೆ, ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಸಂಪೂರ್ಣ ಸಾಥ್‌ ನೀಡಿದ್ದಾರೆ. 75ರ ಇಳಿವಯಸ್ಸಿನಲ್ಲಿಯೂ ಕೂಡ ಚಿಕ್ಕೋಡಿ-ಸದಲಗಾ ಕ್ಷೇತ್ರದ ಪ್ರತಿಯೊಂದು ಹಳ್ಳಿಗೆ ಭೇಟಿ ನೀಡಿ ಜನರ ಆರೋಗ್ಯ ವಿಚಾರಿಸುತ್ತಿದ್ದಾರೆ.

ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆ ಮತ್ತು ತಾಲೂಕಿನ ವಿವಿಧ ಪ್ರಾಥಮಿಕ ಆಸ್ಪತ್ರೆಗಳಿಗೆ ಭೇಟಿ ನೀಡುವ ಮೂಲಕ ಅಲ್ಲಿಯ ಸಮಸ್ಯೆ ನಿವಾರಿಸಿ ಸೋಂಕಿನಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ. ಆಸ್ಪತ್ರೆಗಳಿಗೆ ಜನರೇಟರ್‌ ಸೌಲಭ್ಯ: ಮಳೆ-ಗಾಳಿಗೆ ವಿದ್ಯುತ್‌ ಸಮಸ್ಯೆ ಆಗಬಾರೆಂದು ಮುನ್ನೆಚ್ಚರಿಕೆ ಕ್ರಮವಾಗಿ ತಾಲೂಕಿನ ನಾಲ್ಕು ಆಸ್ಪತ್ರೆಗಳಿಗೆ ಹುಕ್ಕೇರಿ ಕುಟುಂಬ ಅನ್ನಪೂರ್ಣೇಶ್ವರಿ ಫೌಂಡೇಶನ್‌ ಮೂಲಕ ಹೊಸ ಜನರೇಟರ್‌ ಒದಗಿಸಿ ವಿದ್ಯುತ್‌ ಸಮಸ್ಯೆ ನೀಗಿಸಿದ್ದಾರೆ.

ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆ, ಸದಲಗಾ, ಯಕ್ಸಂಬಾ ಮತ್ತು ಖಡಕಲಾಟ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ 16 ಲಕ್ಷ ರೂ. ವೆಚ್ಚದಲ್ಲಿ ಜನರೇಟರ್‌ ಸೌಲಭ್ಯ ಕಲ್ಪಿಸಿದ್ದಾರೆ.

ಆಸ್ಪತ್ರೆಗಳಿಗೆ ಆಕ್ಸಿಜನ್‌ ಪೈಪಲೈನ್‌ ಅಳವಡಿಕೆ: ಹೆಚ್ಚಿನ ಸೋಂಕಿತರು ಆಕ್ಸಿಜನ್‌ ಕೊರತೆಯಿಂದ ಬಳಲುತ್ತಿರುವ ಪರಿಣಾಮ ಕೊರೊನಾ ಪೀಡಿತರಿಗೆ ಅನುಕೂಲವಾಗಲು ತಾಲೂಕಿನ ಎಲ್ಲ ಆಸ್ಪತ್ರೆಗಳಿಗೆ ಆಕ್ಸಿಜನ್‌ ಪೈಪ್‌ಲೈನ್‌ ಅಳವಡಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ.

ಉಚಿತ ಊಟ-ಔಷಧ: ಶಾಸಕ ಗಣೇಶ ಹುಕ್ಕೇರಿ ಮತ್ತು ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಕೊರೊನಾ ಸೋಂಕು ತಗುಲಿರುವ ಗ್ರಾಮೀಣ ಪ್ರದೇಶದ ಬಡ ಜನರಿಗೆ ಉಚಿತ ಊಟ, ಔಷಧ ನೀಡಿ, ಬಡ ಜನರ ಕಷ್ಟಕ್ಕೆ ಹೆಗಲು ಕೊಟ್ಟು ನಾವು ನಿಮ್ಮೊಂದಿಗೆ ಇದ್ದೇವೆ ಎಂದು ತಾಲೂಕಿನ ಜನರಿಗೆ ಧೆ„ರ್ಯ ತುಂಬುತ್ತಿದ್ದಾರೆ.

ಟಾಪ್ ನ್ಯೂಸ್

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.