![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಅಧಿಕಾರಿಗೆ ಶಾಸಕ ಸತೀಶ ತರಾಟೆ
Team Udayavani, Jan 12, 2020, 11:46 AM IST
![BG-TDY-3](https://www.udayavani.com/wp-content/uploads/2020/01/BG-TDY-3-620x266.jpg)
ಯಮಕನಮರಡಿ: ಹುಕ್ಕೇರಿ ತಾಲೂಕಿನ ನರಸಿಂಗಪುರ ಗ್ರಾಮದಲ್ಲಿ ಕುಡಿಯುವ ನೀರಿನ ಟ್ಯಾಂಕ್ ಸೋರಿಕೆ ಆಗುತ್ತಿರುವುದನ್ನು ವೀಕ್ಷಿಸಿದ ಶಾಸಕ ಸತೀಶ ಜಾರಕಿಹೊಳಿ ಸಂಬಂಧಿಸಿದ ಅಭಿಯಂತರನ್ನು ತರಾಟೆಗೆ ತೆಗೆದುಕೊಂಡರು.
ಈಗಾಗಲೇ ಈ ಹಿಂದೆ ನಿರ್ಮಾಣ ಮಾಡಿದ ಕುಡಿಯುವ ನೀರಿನ ಟ್ಯಾಂಕ್ಗಳೆಲ್ಲ ಸೋರಿಕೆ ಆಗುತ್ತಿವೆ. ಟ್ಯಾಂಕ್ ನಿರ್ಮಾಣದಲ್ಲಿ ಯಾವ ಗುಣಮಟ್ಟ ಕಾಯ್ದುಕೊಂಡಿದ್ದೀರಿ ಎಂದು ಪ್ರಶ್ನಿಸಿದ ಅವರು, ಹುಕ್ಕೇರಿ ತಾಲೂಕು ನೀರು ಮತ್ತು ನೈರ್ಮಲ್ಯ ಸಮಿತಿ ಅಭಿಯಂತ ರವಿ ಮುರಗಾಲಿ ಅವರನ್ನು ತರಾಟೆಗೆ ತಗೆದುಕೊಂಡರು. ಹತ್ತರಗಿ, ಪಾಶ್ಚಾಪುರ, ಹೆಬ್ಟಾಳ, ದಡ್ಡಿ ಜಿಪಂ ಕ್ಷೇತ್ರದಲ್ಲಿ 6ಹೊಸ ಕುಡಿಯುವ ನೀರಿನ ಟ್ಯಾಂಕ್ ಮಂಜೂರು ಆಗಿದ್ದು, ಅವುಗಳಲ್ಲಿ ಕಳಪೆ ಕಾಮಗಾರಿ ಕಂಡು ಬಂದರೆ ನೇರವಾಗಿ ಗುತ್ತಿಗೆದಾರರು ಹಾಗೂ ಅ ಧಿಕಾರಿಗಳೇ ಹೊಣೆಗಾರರಾಗುತ್ತಾರೆ ಎಂದು ಖಡಕ್ ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಮದಲ್ಲಿ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಮಂಜೂರಾದ 20ಲಕ್ಷ ರೂ. ವೆಚ್ಚದ ಹೊಸ ಕುಡಿಯುವ ನೀರಿನ 1ಲಕ್ಷ ಲೀಟರ್ ಸಾಮರ್ಥ್ಯದ ಟ್ಯಾಂಕಿಗೆ ಭೂಮಿ ಪೂಜೆ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ದಡ್ಡಿ ಜಿಪಂ ಸದಸ್ಯೆ ಮನಿಷಾ ಪಾಟೀಲ, ಮಣಗುತ್ತಿ ತಾಪಂ ಸದಸ್ಯ ಸುರೇಶ ಬೆಣ್ಣಿ, ಆರ್.ಕೆ.ದೇಸಾಯಿ, ಅಶೋಕ ತಳವಾರ, ಬಸವರಾಜ ದೇಸಾಯಿ, ವಿಠಲ ಪಾಶ್ಚಾಪುರಿ, ಗಣಪತಿ ಕಾಂಬಳೆ, ಸುನೀಲ ಹುಕ್ಕೇರಿ, ಸದಾಶಿವ ದುರ್ಗಪ್ಪಗೋಳ, ಭೀಮಶಿ ಗಡಕರಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.