ಆಹಾರ ಭದ್ರತೆಗೆ ಶಾಸಕ ಶ್ರೀಮಂತ ಪಾಟೀಲ ಕೊಡುಗೆ ಅಪಾರ


Team Udayavani, Oct 15, 2022, 3:41 PM IST

17

ಸಂಬರಗಿ/ಕಾಗವಾಡ: ಕೃಷಿ, ನೀರಾವರಿಗಾಗಿ ಇಸ್ರೇಲ್‌ ಹಾಗೂ ಇತರ ದೇಶಗಳಿಗೆ ಅಧ್ಯಯನಕ್ಕೆ ತೆರಳುವ ಬದಲು ರಾಜ್ಯದ ರೈತರು ಶಾಸಕ ಶ್ರೀಮಂತ ಪಾಟೀಲರ ಕ್ಷೇತ್ರಕ್ಕೆ ಅಧ್ಯಯನಕ್ಕೆ ಬರಬೇಕು ಎಂದು ವಿಧಾನ ಸಭೆಯ ಭರವಸೆ ಸಮಿತಿ ಅಧ್ಯಕ್ಷ ಹಾಗೂ ಉಡುಪಿ ಶಾಸಕ ರಘುಪತಿ ಭಟ್‌ ಏತ ನೀರಾವರಿ ಯೋಜನೆ ಕಾಮಗಾರಿ ವೀಕ್ಷಿಸಿ ಮಾತನಾಡಿದರು.

ನಂತರ ಸಂಬರಗಿಯಲ್ಲಿ ಶ್ರೀಮಂತ ಪಾಟೀಲ ಫೌಂಡೇಶನ್‌ ವತಿಯಿಂದ ಅಗ್ರಾಣಿ ನದಿಯಲ್ಲಿ ಸಂಚಾರಕ್ಕೆ ನೂತನ ಬೋಟ್‌ ಹಸ್ತಾಂತರಿಸಿ ಮಾತನಾಡಿದ ಅವರು, ಗಡಿ ಭಾಗದ ಬರಗಾಲ ಪೀಡಿತ ಪ್ರದೇಶದಲ್ಲಿ ರೈತರ ಸಹಯೋಗದಲ್ಲಿ ಶ್ರೀಮಂತ ಪಾಟೀಲರು ಕೃಷ್ಣಾ ನದಿಯಿಂದ ಏತ ನೀರಾವರಿ ಯೋಜನೆ ಮೂಲಕ ದೇಶಕ್ಕೆ ದೊಡ್ಡ ಕೊಡುಗೆ ಕೊಡುವ ಮೂಲಕ ಆಹಾರ ಭದ್ರತೆ ಹೆಚ್ಚಿಸಿದ್ದಾರೆ. ಎಲ್ಲರೂ ಸರಕಾರದ ಮೇಲೆ ಅವಲಂಬಿತರಾಗದೇ ಇಂತಹ ಯೋಜನೆಗಳಿಗೆ ಕೈ ಜೋಡಿಸಬೇಕು ಎಂದು ಕರೆ ನೀಡಿದರು.

ಶ್ರೀಮಂತ ಪಾಟೀಲರ ಈ ಯೋಜನೆಗಳ ಕುರಿತು ವಿಧಾನಸಭಾ ಅಧಿವೇಶನದಲ್ಲಿ ಚರ್ಚೆಯಾಗಬೇಕು. ಜೊತೆಗೆ ಎಲ್ಲ ಶಾಸಕರು ತಮ್ಮ ತಮ್ಮ ಮತಕ್ಷೇತ್ರಗಳಲ್ಲಿ ಇಂತಹ ಯೋಜನೆಗಳನ್ನು ರೈತರ ಸಹಯೋಗದಲ್ಲಿ ಅನುಷ್ಠಾನಕ್ಕೆ ತಂದಲ್ಲಿ ಒಕ್ಕಲುತನ ಸಮಗ್ರ ಅಭಿವೃದ್ಧಿಯಾಗಲಿದೆ ಎಂದರು.

ಗುಂಡೇವಾಡಿಯ ಶ್ರೀಮಂತ ಪಾಟೀಲ ಏತ ನೀರಾವರಿ ಸಂಘದ ಸಚೀನ ವೀರ ಮಾತನಾಡಿ, ಶ್ರೀಮಂತ ಪಾಟೀಲರು ಶಾಸಕರಾಗುವ ಮೊದಲೇ ಈ ಎಲ್ಲ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದಾರೆ. ಇದರಿಂದ ಈ ಭಾಗದ ಸಾವಿರಾರು ಎಕರೆ ಭೂಮಿ ನೀರಾವರಿಗೊಳಪಟ್ಟಿದೆ ಎಂದರು.

ಭರವಸೆ ಸಮಿತಿ ಸದಸ್ಯ, ಶಾಸಕ ಶ್ರೀಮಂತ ಪಾಟೀಲ ಮಾತನಾಡಿ, ಉಡುಪಿ ಶಾಸಕ ರಘುಪತಿ ಭಟ್‌ ನೇತೃತ್ವದ ಭರವಸೆ ಸಮಿತಿ ಸದಸ್ಯರು ಹಿಪ್ಪರಗಿ ಆಣೆಕಟ್ಟು ಹಿನ್ನೀರಿನಿಂದ ತೊಂದರೆಗೊಳಗಾದ ಸಂತ್ರಸ್ತರ ಪುನರ್‌ ವಸತಿ ಯೋಜನೆ ಹಾಗೂ ಪರಿಹಾರದ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ. ಖೀಳೆಗಾಂವ ಬಸವೇಶ್ವರ ಏತ ನೀರಾವರಿ ಯೋಜನೆ ನಿಗದಿತ ಅವಧಿ ಯಲ್ಲಿಯೇ ಪೂರ್ಣಗೊಳ್ಳಲಿದೆ ಎಂದರು.

ಸಮಿತಿ ಸದಸ್ಯರು ಶಾಸಕ ಶ್ರೀಮಂತ ಪಾಟೀಲ ಅವರ ಸಕ್ಕರೆ ಕಾರ್ಖಾನೆ, ಮದಭಾವಿ ಪ್ರಗತಿಪರ ರೈತ ದಿಲೀಪ ಪವಾರ ಅವರ ಲಿಫ್ಟ್‌ ಇರಿಗೇಶನ್‌ ಕರೆ, ಗುಂಡೇವಾಡಿಯ ಏತ ನೀರಾವರಿ ಕೆರೆ ವೀಕ್ಷಿಸಿದರು.

ಭರವಸೆ ಸಮಿತಿಯ ಬೈಂದೂರ ಶಾಸಕ ಬಿ.ಎಂ.ಸುಕುಮಾರಶೆಟ್ಟಿ, ಯಾದಗಿರಿ ಶಾಸಕ ವೆಂಕಟರೆಡ್ಡಿ ಮುದ್ನಾಳ, ದೇವರ ಹಿಪ್ಪರಗಿ ಶಾಸಕ ಸೋಮನಾಥಗೌಡ ಪಾಟೀಲ, ನೀರಾವರಿ ಇಲಾಖೆ ವ್ಯವಸ್ಥಾಪಕ ನಿರ್ದೇಶಕ ಮಲ್ಲಿಕಾರ್ಜುನ ಗುಂಗೆ, ಅಧೀಕ್ಷಕ ಅಭಿಯಂತರ ಆರ್‌.ಬಿ.ರಾಠೊಡ, ಚಿಕ್ಕೋಡಿ ಉಪ ವಿಭಾಗಾ ಧಿಕಾರಿ ಸಂತೋಷ ಕಾಮಗೊಂಡ, ತಹಶೀಲ್ದಾರ್‌ ಸುರೇಶ ಮುಂಜೆ, ಬಿಜೆಪಿ ಮುಖಂಡರಾದ ಶ್ರೀನಿವಾಸ ಪಾಟೀಲ, ಶಿವಾನಂದ ಗೊಲಭಾವಿ, ಸಂಭಾಜಿ ವೀರ, ರಾಮ ಸೊಡ್ಡಿ, ಅಬ್ದುಲ್‌ ಮುಲ್ಲಾ, ಅಣ್ಣಪ್ಪ ಮಿಸಾಳ, ಬಾಳಪ್ಪ ಆಜೂರ, ನಾನಾ ಪಾಟೀಲ, ಮಾರುತಿ ಜಾಧವ, ಹುಚ್ಚಪ್ಪಾ ಗುಂಜಿಗಾವಿ, ಕುಮಾರ ಗೋಕಾಕ, ಮಹಾದೇವ ಗುಂಜಿಗಾವಿ, ಕಲಗೌಡ ಪಾಟೀಲ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.