ಕಾಮಗಾರಿ ಆದೇಶದಲ್ಲಿ ಶಾಸಕರ ಹೆಸರಿಗೆ ಅವಕಾಶವಿಲ್ಲ

ಗೆದ್ದ ಶಾಸಕರನ್ನು ಕಡೆಗಣಿಸಿ ಸೋತ ಅಭ್ಯರ್ಥಿಗಳಿಗೆ ಅನುದಾನ ; ಶಾಸಕ ರಾಜೇಗೌಡ ಹಕ್ಕುಚ್ಯುತಿ ಪ್ರತಿಧ್ವನಿ

Team Udayavani, Dec 28, 2022, 6:55 AM IST

ಕಾಮಗಾರಿ ಆದೇಶದಲ್ಲಿ ಶಾಸಕರ ಹೆಸರಿಗೆ ಅವಕಾಶವಿಲ್ಲ

ಬೆಳಗಾವಿ: ಇನ್ನು ಮುಂದೆ ಸರಕಾರದಿಂದ ಕೈಗೊಳ್ಳುವ ಯಾವುದೇ ಕಾಮಗಾರಿಯ ಹೆಸರನ್ನು ಮಾತ್ರ ಸರಕಾರದ ಆದೇಶದಲ್ಲಿ ನಮೂದಿಸಲಾಗು ವುದು. ಅದು ಬಿಟ್ಟು ಶಾಸಕರು ಸೇರಿ ಯಾವುದೇ ವ್ಯಕ್ತಿಯ ಹೆಸರನ್ನು ಉಲ್ಲೇಖಿಸಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಸೋತ ಅಭ್ಯರ್ಥಿಗೆ ಅನುದಾನ ಬಿಡುಗಡೆ ಮಾಡುವ ಮೂಲಕ ತಮ್ಮ ಹಕ್ಕುಚ್ಯುತಿ ಆಗಿದೆ ಎಂದು ಆರೋಪಿಸಿ ಸ್ಥಳೀಯ ಶಾಸಕ ಟಿ.ಡಿ. ರಾಜೇಗೌಡ ಅವರು ಸದನದ ಬಾವಿಗಿಳಿದು ಉಪವಾಸ ಧರಣಿ ನಡೆಸುತ್ತಿದ್ದರಿಂದ ಮಧ್ಯಪ್ರವೇಶ ಮಾಡಿದ ಮುಖ್ಯಮಂತ್ರಿ ಈ ಭರವಸೆ ನೀಡಿದರು.

ಮುಖ್ಯಮಂತ್ರಿಯವರ ಹೇಳಿಕೆ ಅನಂತರ ಬೆಳಗ್ಗೆಯಿಂದ ನಡೆಸುತ್ತಿದ್ದ ಧರಣಿಯನ್ನು ಶಾಸಕ ರಾಜೇಗೌಡ ಹಾಗೂ ಡಾ| ರಂಗನಾಥ್‌ ವಾಪಸ್‌ ಪಡೆದುಕೊಂಡರು. ಈ ಮೂಲಕ ಶಾಸಕರ ಹಕ್ಕುಚ್ಯುತಿ ವಿಚಾರ ಸುಖಾಂತ್ಯ ಕಂಡಿತು.

ಇದಕ್ಕೂ ಮೊದಲು ಬೆಳಗ್ಗೆ ಸದನದಲ್ಲಿ ಈ ವಿಷಯ ಪ್ರಸ್ತಾವಿಸಿದ ರಾಜೇಗೌಡ, ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕರು ಎಂದು ಸೋತ ಅಭ್ಯರ್ಥಿ ಜೀವರಾಜ್‌ ಹೆಸರನ್ನು ಸರಕಾರದ ಆದೇಶದಲ್ಲಿ ನಮೂದಿಸಲಾಗಿದೆ. ಇದರಿಂದ ನನ್ನ ಹಕ್ಕುಚ್ಯುತಿ ಆಗಿದೆ. ನಾನು ಶಾಸಕ ಹೌದೋ, ಅಲ್ಲವೋ ಅನ್ನುವುದು ತೀರ್ಮಾನ ಆಗಿಲ್ಲ. ನನಗಾಗಿರುವ ಅನ್ಯಾಯ ಸರಿಪಡಿಸದಿದ್ದರೆ ಸದನದಲ್ಲಿ ಉಪವಾಸ ಕುಳಿತುಕೊಳ್ಳುತ್ತೇನೆಂದು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ನ್ಯಾಯ ಕೊಡಬೇಕೆಂದು ಧರಣಿ ನಡೆಸಿದರು. ಇದಕ್ಕೆ ಶಾಸಕ ರಂಗನಾಥ್‌ ಸಾಥ್‌ ನೀಡಿದ್ದರು.

ಪ್ರಜಾಪ್ರಭುತ್ವ ವಿರೋಧಿ ನಡೆ
ಹಕ್ಕುಚ್ಯುತಿ ಪ್ರಸ್ತಾಪಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬೆಂಬಲಿಸಿ, ಇದೊಂದು ಪ್ರಜಾಪ್ರಭುತ್ವ ವಿರೋಧಿ ನಡೆ ಹಾಗೂ ಕೆಟ್ಟ ಸಂಪ್ರದಾಯ ಎಂದರು.

ಸರಕಾರದ ಪರ ಉತ್ತರಿಸಿದ ಕಾನೂನು ಸಚಿವ ಮಾಧುಸ್ವಾಮಿ, ಈ ವಿಚಾರ ಹಕ್ಕುಚ್ಯುತಿ ವ್ಯಾಪ್ತಿಗೆ ಬರುವುದಿಲ್ಲ. ಆದರೆ, ಶಾಸಕರ ಹಕ್ಕುಗಳನ್ನು ರಕ್ಷಿಸಲು ಸರಕಾರ ಬದ್ಧವಾಗಿದೆ ಎಂದರು. ರಾಜೇಗೌಡರು ಕೊಟ್ಟಿರುವ ಪ್ರಸ್ತಾವನೆಯಲ್ಲಿ ಹಕ್ಕುಚ್ಯುತಿ ಆಗಿರುವ ಬಗ್ಗೆ ದಾಖಲೆಗಳನ್ನು ಕೊಟ್ಟಿಲ್ಲ. ಹಾಗಾಗಿ, ಹಕ್ಕುಚ್ಯುತಿ ಪ್ರಸ್ತಾವ ನಿರಾಕರಿಸಲಾಗಿದೆ ಎಂದು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರಕಟಿಸಿದರು. ಇದಕ್ಕೆ ಅಸಮಾಧಾನಗೊಂಡ ರಾಜೇಗೌಡ ಹಾಗೂ ರಂಗನಾಥ್‌ ಸದನದ ಬಾವಿಗಿಳಿದು ಧರಣಿ ನಡೆಸಿದರು. ಶಾಸಕರ ಹಕ್ಕುಚ್ಯುತಿ ವಿಚಾರವನ್ನು ಕಲಾಪ ಸಲಹಾ ಸಮಿತಿ (ಬಿಎಸಿ) ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡೋಣ ಎಂದು ಸ್ಪೀಕರ್‌ ಹೇಳಿದರು.

ನನ್ನ ಕ್ಷೇತ್ರದಲ್ಲಿ ಬಿಜೆಪಿಯ ಜೀವರಾಜ್‌ ಹೆಸರಲ್ಲಿ ಅನುದಾನ ಬಿಡುಗಡೆ ಮಾಡಲಾಗುತ್ತಿದೆ. ಅಭಿವೃದ್ಧಿ ಕಾಮಗಾರಿಗಳ ಭೂಮಿ ಪೂಜೆ, ಗುದ್ದಲಿ ಪೂಜೆ, ಉದ್ಘಾಟನೆಗೆ ನನ್ನನ್ನು ಆಹ್ವಾನಿಸುತ್ತಿಲ್ಲ. ಇದರಿಂದ ನನ್ನ ಹಕ್ಕುಚ್ಯುತಿ ಆಗಿದೆ. ನಾನು ಶಾಸಕ ಹೌದೋ, ಅಲ್ಲವೋ ಎನ್ನುವುದು ತೀರ್ಮಾನ ಆಗಿಲ್ಲ. ನನಗಾಗಿರುವ ಅನ್ಯಾಯ ಸರಿಪಡಿಸದಿದ್ದರೆ ಸದನದಲ್ಲಿ ಉಪವಾಸ ಕುಳಿತುಕೊಳ್ಳುತ್ತೇನೆ.
– ಟಿ.ಡಿ. ರಾಜೇಗೌಡ, ಕಾಂಗ್ರೆಸ್‌ ಸದಸ್ಯ

ಗೆದ್ದ ಶಾಸಕರನ್ನು ಬಿಟ್ಟು ಸೋತ ಅಭ್ಯರ್ಥಿಗೆ ಸರಕಾರದಿಂದ ಅನುದಾನ ಬಿಡುಗಡೆ ಮಾಡುವುದು ಸರಿಯಲ್ಲ. ಗೆದ್ದ ಶಾಸಕರು ಸದನದಲ್ಲಿ ಬಜೆಟ್‌ ಅನುಮೋದಿಸುತ್ತಾರೆ. ಹೀಗಿದ್ದಾಗ, ಸೋತವರಿಗೆ ಹಣ ಬಿಡುಗಡೆ ಮಾಡುವುದು ಯಾವ ನ್ಯಾಯ? ಸರಕಾರ ಇದನ್ನು ಪ್ರತಿಷ್ಠೆಯಾಗಿ ತೆಗೆದುಕೊಳ್ಳಬಾರದು. ಇದು ನೇರವಾಗಿ ಹಕ್ಕುಚ್ಯುತಿಗೆ ಬರದಿದ್ದರೂ, ಸರಕಾರದ ಈ ನಡೆ ಶಾಸಕರ ಹಕ್ಕುಚ್ಯುತಿಗೆ ಸರಿಸಮಾನವಾಗಿದೆ.

ನಾಳೆ ಅಧಿವೇಶನ ಮುಕ್ತಾಯ?
ಬೆಳಗಾವಿ: ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ವಿಧಾನ ಮಂಡಲ ಅಧಿವೇಶನ ನಿಗದಿತ ದಿನಕ್ಕಿಂತ ಒಂದು ದಿನ ಮೊದಲೇ ಮುಕ್ತಾಯಗೊಳ್ಳಲಿದೆಯೇ? ಇಂತಹ ಸುದ್ದಿ ಸುವರ್ಣ ವಿಧಾನಸೌಧ ಮೊಗಸಾಲೆಯಲ್ಲಿ ಕೇಳಿಬರುತ್ತಿದೆ. ಮಂಗಳವಾರ ಮಧ್ಯಾಹ್ನ ನಡೆದ ವಿಧಾನಪರಿ ಷತ್‌ ಕಲಾಪ ವ್ಯವಹಾರಗಳ ಸಲಹಾ ಸಮಿತಿ ಸಭೆಯಲ್ಲಿ ಗುರುವಾರವೇ ಕಲಾಪ ಮುಕ್ತಾಯಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ.- ಸಿದ್ದರಾಮಯ್ಯ, ವಿಪಕ್ಷ ನಾಯಕ

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.