ಮೋದಿ ಮತ್ತೂಮ್ಮೆ: 15 ಸಾವಿರ ಕಿಮೀ ಬೈಕ್‌ ರ‍್ಯಾಲಿ


Team Udayavani, Jan 27, 2019, 12:30 AM IST

ban27011910medn.jpg

ಬೆಳಗಾವಿ: ನರೇಂದ್ರ ಮೋದಿ ಅವರನ್ನು ಮತ್ತೂಮ್ಮೆ ಪ್ರಧಾನಿಯನ್ನಾಗಿ ಮಾಡಲು ದೇಶಾದ್ಯಂತ ಸುಮಾರು 15 ಸಾವಿರ ಕಿಮೀವರೆಗೆ ಬೈಕ್‌ ರ‍್ಯಾಲಿ ನಡೆಸಿರುವ ತಮಿಳುನಾಡು ಚೆನ್ನೈನ ರಾಜಲಕ್ಷ್ಮೀ ಅವರನ್ನು ಶನಿವಾರ ನಗರದ ಚನ್ನಮ್ಮ ವೃತ್ತದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು.

ನಗರದ ಚನ್ನಮ್ಮ ವೃತ್ತದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಾಜಲಕ್ಷ್ಮೀ ಹಾಗೂ ತಂಡವನ್ನು ಸ್ವಾಗತಿಸಲಾಯಿತು. ಆರತಿ ಮಾಡಿ, ಶಾಲು ಹೊದಿಸಿ, ಹೂವಿನ ಹಾರ ಹಾಕಿ ಬರಮಾಡಿಕೊಳ್ಳಲಾಯಿತು. ಆಲ್‌ ಇಂಡಿಯಾ ಬುಲೆಟ್‌(ಬೈಕ್‌) ರ‍್ಯಾಲಿ ಆರಂಭಿಸಿರುವ ರಾಜಲಕ್ಷ್ಮೀ ಅವರು 8 ರಾಜ್ಯ, 155 ಜಿಲ್ಲೆಗಳನ್ನು ಸುತ್ತಲಿದ್ದು, ಸುಮಾರು 15,525 ಕಿಮೀವರೆಗೆ ರಾಯಲ್‌ ಎನ್‌μಲ್ಡ್‌ ಬೈಕ್‌ನಲ್ಲಿ ರ‍್ಯಾಲಿ ನಡೆಸಲಿದ್ದಾರೆ. ದೇಶದೆಲ್ಲೆಡೆ ನರೇಂದ್ರ ಮೋದಿ ಅವರು ಕೈಗೊಂಡ ಜನಪರ ಯೋಜನೆಗಳ ಪ್ರಚಾರ ನಡೆಸಿ, ಈ ಸಲವೂ ಮೋದಿ ಅವರನ್ನು ಪ್ರಧಾನಿ ಮಾಡಬೇಕಾದ ಅಗತ್ಯವಿದೆ ಎಂದು ಪ್ರಚಾರ ಆರಂಭಿಸಿದ್ದಾರೆ.

25 ಜನರ ತಂಡದೊಂದಿಗೆ ರ‍್ಯಾಲಿ ನಡೆಸಿರುವ ರಾಜಲಕ್ಷ್ಮೀ ಅವರು ಮೂಲತ: ಕರ್ನಾಟಕದವರು. ಸದ್ಯ ಚೆನ್ನೈನಲ್ಲಿ ವಾಸವಾಗಿದ್ದು, ಈಗ ದೇಶಾದ್ಯಂತ ಮೋದಿ ಪರವಾಗಿ ಪ್ರಚಾರ ನಡೆಸುತ್ತಿದ್ದಾರೆ. ಮೋದಿ ಮತ್ತೂಮ್ಮೆ ಎಂಬ ಘೋಷವಾಕ್ಯದೊಂದಿಗೆ ಬೈಕ್‌ನಲ್ಲಿ ಸುತ್ತುತ್ತಿರುವ ರಾಜಲಕ್ಷ್ಮೀ ಅವರಿಗೆ ಅದ್ಧೂರಿ ಸ್ವಾಗತ ಸಿಗುತ್ತಿದ್ದು, ಹುಬ್ಬಳ್ಳಿ ಮಾರ್ಗವಾಗಿ ಬೆಳಗಾವಿಗೆ ಬಂದ ಅವರು ಗೋವಾಕ್ಕೆ ತೆರಳಲಿದ್ದಾರೆ.

ಮೋದಿಗಾಗಿ ಬೈಕ್‌ ಏರಿರುವ ರಾಜಲಕ್ಷ್ಮೀ ಗೋವಾದಿಂದ ಮಹಾರಾಷ್ಟ್ರ, ರಾಜಸ್ಥಾನ, ಗುಜರಾತ್‌, ಮಧ್ಯಪ್ರದೇಶ, ಹರ್ಯಾಣ, ದೆಹಲಿಗೆ ತೆರಳಲಿದ್ದಾರೆ. ಒಟ್ಟು 56 ದಿನಗಳ ಕಾಲ ಈ ಪ್ರವಾಸ ಮಾರ್ಚ್‌ 11ರವರೆಗೆ ನಡೆಯಲಿದೆ. ಶನಿವಾರ ಬಾಗಲಕೋಟೆಯಲ್ಲಿ ರಾಜಲಕ್ಷ್ಮೀ ಅವರು 9 ಟನ್‌ ಭಾರದ ಲಾರಿಯನ್ನು ಹಗ್ಗದಿಂದ ಎಳೆದು ಗಮನ ಸೆಳೆದಿದ್ದರು. ಮೋದಿ ಅವರನ್ನು ಪ್ರಧಾನಿಯನ್ನಾಗಿ ಮಾಡಿ ದೇಶವನ್ನು ಸದೃಢಗೊಳಿಸುವುದೇ ನಮ್ಮ ಉದ್ದೇಶ ಎನ್ನುತ್ತಾರೆ ರ‍್ಯಾಲಿಯಲ್ಲಿ ಬಂದ ತಮಿಳುನಾಡಿನ ಬಿಜೆಪಿ ಮುಖಂಡ ರಾಮದಾಸ.

ಸಂಸದ ಸುರೇಶ ಅಂಗಡಿ, ನಗರ ಬಿಜೆಪಿ ಮಹಿಳಾ ಮೋರ್ಚಾ ಮುಖಂಡರಾದ ಲೀನಾ ಟೋಪಣ್ಣವರ, ಸವಿತಾ ಗುಡ್ಡಾಕಾಯಿ, ಕಾಂಚನ ಕೋರ್ಪಡೆ, ಸುವರ್ಣಾ ಪಾಟೀಲ, ಪ್ರಜ್ಞಾ ಶಿಂಧೆ, ಸಾರಿಕಾ ಪಾಟೀಲ, ಮಹಾದೇವಿ ಭಾವನೂ, ಸರೋಜಿನಿ ನಡುವಿನಹಳ್ಳಿ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.