ಉತ್ತರ ಕರ್ನಾಟಕ ಅಭಿವೃದ್ಧಿಗೆ ಹೆಚ್ಚು ಒತ್ತು: ಸಚಿವ ಲಕ್ಷ್ಮಣ ಸವದಿ
Team Udayavani, Aug 31, 2019, 10:58 AM IST
ಬೈಲಹೊಂಗಲ: ಚನ್ನಮ್ಮ ಸಮಾಧಿಗೆ ಭೇಟಿ ನೀಡಿದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಕಿತ್ತೂರ ಚನ್ನಮ್ಮ ಮೂರ್ತಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಬೈಲಹೊಂಗಲ: ಸಿಕ್ಕ ಅವಕಾಶವನ್ನು ಬಳಸಿಕೊಂಡು ಮುಖ್ಯಮಂತ್ರಿ ಯಡಿಯೂರಪ್ಪವರ ಕೈ ಬಲಪಡಿಸುವ ಮೂಲಕ ಉತ್ತರ ಕರ್ನಾಟಕದಲ್ಲಿ ಪಕ್ಷವನ್ನು ಇನ್ನಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.
ಶುಕ್ರವಾರ ಪಟ್ಟಣದಲ್ಲಿ ಶಾಸಕ ಮಹಾಂತೇಶ ದೊಡಗೌಡರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಕ್ಷದ ವರಿಷ್ಠರು ನನ್ನ ಮೇಲೆ ಭರವಸೆ ಇಟ್ಟು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರನ್ನಾಗಿ ಮಾಡಿದ್ದಾರೆ. ಅವರ ಭರವಸೆಯನ್ನು ಈಡೇರಿಸಿ, ಉಕ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುವುದು ಎಂದು ತಿಳಿಸಿದರು.
ಈ ಹಿಂದೆ ಇನ್ನೊಂದು ಹತ್ತೆಂಟು ಸೀಟ್ ಬರದ ಕಾರಣ ಬಿಜೆಪಿ ಪಕ್ಷ ಅಧಿಕಾರದಿಂದ ಅವಕಾಶ ವಂಚಿತವಾಗಿತ್ತು. ಇದೀಗ ಅದು ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಬಿಜೆಪಿ ಪಕ್ಷ ವಿಶೇಷವಾದ ಪಕ್ಷವಾಗಿದೆ ಎಂದರು.
ಈ ಬಾರಿ ಕರ್ನಾಟಕದಲ್ಲಿ ಅತ್ಯಂತ ಭೀಕರವಾದ ಮಹಾಪೂರ ಬಂದು ಒಂದು ಕಡೆ ಅತಿವೃಷ್ಟಿಯಾಗಿ ಲಕ್ಷಾಂತರ ಜನರು ತೊಂದರೆಗೊಳಗಾಗಿದ್ದಾರೆ. ಹೀಗಾಗಿ ಸೆ. 2ರಂದು ಶಾಸಕ ಮಹಾಂತೇಶ ದೊಡಗೌಡರ ಜನ್ಮದಿನವನ್ನು ಅದ್ಧೂರಿಯಾಗಿ ಆಚರಿಸುವ ಬದಲಿಗೆ ಆ ಹಣವನ್ನು ಅವರ ಅಭಿಮಾನಿಗಳು ನೆರೆ ಸಂತಸ್ತರಿಗೆ ಉಪಯೋಗ ಆಗಲಿ ಎಂದು ಹೇಳಿ 5 ಲಕ್ಷ ರೂ. ಮುಖ್ಯಮಂತ್ರಿ ಪರಿಹಾರ ನಿಧಿಗೆ ಕೊಟ್ಟಿರುವುದು ಒಳ್ಳೆಯ ನಿರ್ಣಯವಾಗಿದೆ ಎಂದರು.
ನೆರೆ ಸಂತ್ರಸ್ತರಿಗೆ ಇಂಥ ಸಂದರ್ಭದಲ್ಲಿ ಹಣಕಾಸಿನ ನೆರವು ಕೂಡ ಅವಶ್ಯವಾಗಿರುತ್ತದೆ. ಅದ್ಧೂರಿ ಕಾರ್ಯಕ್ರಮ, ಜನ್ಮದಿನ ಆಚರಿಸಿಕೊಳ್ಳುವ ಬದಲಿಗೆ ಅದೇ ಹಣವನ್ನು ನೆರೆ ಪರಿಹಾರ ನಿಧಿಗೆ ಬಳಸುವುದು ಸೂಕ್ತವಾಗಿದೆ ಎಂದರು.
ಇದಕ್ಕೂ ಮೊದಲು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಕಿತ್ತೂರ ರಾಣಿ ಚನ್ನಮ್ಮನ ಸಮಾಧಿಗೆ ನಮಿಸಿ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಈ ವೇಳೆ ಶಾಸಕ ಮಹಾಂತೇಶ ದೊಡಗೌಡರ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ವಿಶ್ವನಾಥ ಪಾಟೀಲ, ಮಾಜಿ ಶಾಸಕ ಜಗದೀಶ ಮೆಟಗುಡ್ಡ, ಜಿಪಂ ಮಾಜಿ ಅಧ್ಯಕ್ಷ ಎಸ್.ಎಫ್.ದೊಡಗೌಡರ, ಬಿ.ಎಫ್.ಕೊಳದೂರ, ಗುರು ಮೆಟಗುಡ್ಡ, ಶ್ರೀಕರ ಕುಲಕರ್ಣಿ, ಪ್ರಕಾಶ ಮೂಗಬಸವ, ಕುಮಾರಗೌಡ ಪಾಟೀಲ, ವಿಜಯ ಮೆಟಗುಡ್ಡ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…