ಮುಂದಿನ ದಿನಗಳಲ್ಲಿ ಅಭಿವೃದ್ಧಿಗೆ ಹೆಚ್ಚಿನ ಅನುದಾನ: ಜೊಲ್ಲೆ


Team Udayavani, Mar 13, 2021, 3:48 PM IST

ಮುಂದಿನ ದಿನಗಳಲ್ಲಿ ಅಭಿವೃದ್ಧಿಗೆ ಹೆಚ್ಚಿನ ಅನುದಾನ: ಜೊಲ್ಲೆ

ಚಿಕ್ಕೋಡಿ: ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್‌ ಸಮಸ್ಯೆ, ರೈತರಿಗೆ ಸಿಗಬೇಕಾದ ವಿದ್ಯುತ್‌ ಪರಿವರ್ತಕಗಳು, ಗ್ರಾಮೀಣಪ್ರದೇಶದಲ್ಲಿ ಬಸ್‌ ವ್ಯವಸ್ಥೆ , ಗ್ರಾಮೀಣರಸ್ತೆಗಳ ಬೇಡಿಕೆ, ಆರೋಗ್ಯ ಸೇವೆ ಹೀಗೆಹತ್ತು ಹಲವು ಸಮಸ್ಯೆಗಳನ್ನು ಜನರಿಂದ ಆಲಿಸಿ ಸ್ಪಂ ದಿಸಿದ ಸಂಸದ ಅಣ್ಣಾಸಾಹೇಬಜೊಲ್ಲೆ ಅವರು ಶೀಘ್ರವಾಗಿ ಜನರ ಸಮಸ್ಯೆ ಇತ್ಯರ್ಥವಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಶುಕ್ರವಾರ ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಚಿಕ್ಕೋಡಿ ಲೋಕಸಭೆಯ ಚಿಕ್ಕೋಡಿ-ಸದಲಗಾ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಜನಸಂಪರ್ಕಸಭೆಯಲ್ಲಿ ಸಾರ್ವಜನಿಕರ ಹಲವಾರುಸಮಸ್ಯೆಗಳಿಗೆ ಸಂಸದ ಅಣ್ಣಾಸಾಹೇಬಜೊಲ್ಲೆ ಸಕಾರಾತ್ಮಕ ಸ್ಪಂದಿ ಸಿ ಜನರಿಂದ ಅರ್ಜಿ ಸ್ವೀಕರಿಸಿದರು.

ಚಿಕ್ಕೋಡಿ ತಾಲೂಕಿನ ಶಮನೇವಾಡಿ-ಬೇಡಕಿಹಾಳ ಗ್ರಾಮಗಳಿಗೆ ಹೋಗುವಸಾರ್ವಜನಿಕರಿಗೆ ಬಸ್‌ ವ್ಯವಸ್ಥೆ ಇಲ್ಲವಾಗಿದೆ. ಪ್ರತಿದಿನ ಸಾಕಷ್ಟು ಬಸ್‌ ಸಂಚಾರ ಮಾಡಿದರೂ ಸಹ ಬೇಡಕಿಹಾಳ ಕ್ರಾಸ್‌ದಲ್ಲಿ ನಿಲ್ಲಿಸಿಇಚಲಕರಂಜಿಗೆ ಹೋಗುತ್ತವೆ. ಇದರಿಂದಶಮನೇವಾಡಿ ಹಾಗೂ ಬೇಡಕಿಹಾಳ ಗ್ರಾಮದಜನರಿಗೆ ಬಸ್‌ ಸೇವೆ ಸಿಗುತ್ತಿಲ್ಲ, ಸಂಸದರು ಗಮನ ಹರಿಸಬೇಕು ಎಂದು ಶಮನೇವಾಡಿಗ್ರಾಮದ ಜನರು ಸಂಸದರ ಬಳಿ ಬೇಡಿಕೆಇಟ್ಟರು. ತಾಲೂಕಿನ ವಾಳಕಿ, ಪಟ್ಟಣಕುಡಿ ಮುಂತಾದ ಕಡೆಗಳಲ್ಲಿ ಗ್ರಾಮೀಣ ಪ್ರದೇಶದಜನರಿಗೆ ಆರೋಗ್ಯ ಸೇವೆ ಮರೀಚಿಕೆಯಾಗಿದೆ.ಹಲವು ರೋಗಿಗಳಿಗೆ ಔಷಧ ಸಿಗುತ್ತಿಲ್ಲ,ವೈದ್ಯರ ಕೊರತೆ ಇದೆ ಎಂದು ವಾಳಕಿ ಗ್ರಾಮಸ್ಥರು ಮನವಿ ಮಾಡಿದರು.

ಮಾಂಜರಿ, ಇಂಗಳಿ, ಯಡೂರ, ಕಲ್ಲೋಳಸೇರಿದಂತೆ ಕೃಷ್ಣಾ ನದಿ ವ್ಯಾಪ್ತಿಯ ರೈತರಜಮೀನುಗಳಿಗೆ ಸವಳು-ಜವಳು ಸಮಸ್ಯೆಕಾಡುತ್ತಿದೆ. ಸಂಸದರು ವಿಶೇಷ ಅನುದಾನ ಒದಗಿಸಿ ಸವಳು ಜವಳು ಹೋಗಲಾಡಿಸಲು ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚನೆನೀಡಬೇಕೆಂದು ರೈತರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಮಾತನಾಡಿ, ಇಡೀ ರಾಜ್ಯದಲ್ಲಿ ಚಿಕ್ಕೋಡಿ ಲೋಕಸಭೆ ಕ್ಷೇತ್ರ ದೊಡ್ಡ ಕ್ಷೇತ್ರವಾಗಿದೆ. ಸಂಸದರಾಗಿ ಎರಡು ವರ್ಷಕಳೆದಿದೆ. ಕೊರೊನಾ ಮತ್ತು ಪ್ರವಾಹದಿಂದಸರ್ಕಾರದಿಂದ ಬರುವ ಅನುದಾನಕಡಿತವಾಗಿದೆ. ಹೀಗಾಗಿ ಅಭಿವೃದ್ಧಿ ಕೆಲಸಗಳಿಗೆಸ್ವಲ್ಪಮಟ್ಟಿನ ಹಿನ್ನಡೆಯಾಗಿದೆ ಎಂದರು.ಓರ್ವ ಸಂಸದರಿಗೆ ಐದು ವರ್ಷದಲ್ಲಿ 25 ಕೋಟಿ ಅನುದಾನ ಒದಗಿ ಬರಲಿದೆ. ಕ್ಷೇತ್ರದಎಂಟು ವಿಧಾನಸಭೆ ಕ್ಷೇತ್ರಗಳಿಗೆ 25 ಲಕ್ಷರೂ ಹಂಚಿಕೆ ಮಾಡುತ್ತಿದ್ದೇನೆ. ಈಗ ಎರಡು ವರ್ಷದಲ್ಲಿ 5 ಕೋಟಿ ಅನುದಾನ ಬಂದಿದೆ.ಎಲ್ಲ ವಿಧಾನಸಭೆ ಕ್ಷೇತ್ರದಲ್ಲಿ 5 ಲಕ್ಷ ರೂ.ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ ನೀಡಿದ್ದೇನೆ ಎಂದರು.

ಮುಂಬರುವ ದಿನಗಳಲ್ಲಿ ಬಿಜೆಪಿ ಸರ್ಕಾರ ಹೆಚ್ಚಿನ ಅನುದಾನ ನೀಡುವ ಭರವಸೆ ಇದೆ. ಚಿಕ್ಕೋಡಿ ಲೋಕಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ನನೆಗುದಿಗೆ ಬಿದ್ದಿರುವ ಯೋಜನೆಗಳಿಗೆಅನುದಾನ ಸಿಗಲಿದೆ. ರಸಗೊಬ್ಬರಕ್ಕೆ ಸಬ್ಸಿಡಿನೀಡಲು ಸರ್ಕಾರ ಸಿದ್ಧತೆ ನಡೆಸಿದೆ. ಕೋವಿಡ್‌ನಂತಹ ಮಾರಕ ರೋಗ ದೂರವಾಗಲು ಸಾರ್ವಜನಿಕರು ಮುಂಜಾಗ್ರತೆ ವಹಿಸಬೇಕು ಎಂದರು.

ಧುರೀಣ ಜಗದೀಶ ಕವಟಗಿಮಠ, ಬಿಜೆಪಿ ಮಂಡಲ ಅಧ್ಯಕ್ಷ ಸಂಜು ಪಾಟೀಲ,ಬಿಜೆಪಿ ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷದುಂಡಪ್ಪ ಬೆಂಡವಾಡೆ, ವಿಶ್ವನಾಥ ಕಮತೆ,ಅಪ್ಪಾಸಾಹೇಬ ಚೌಗಲೆ, ಪುರಸಭೆಅಧ್ಯಕ್ಷ ಪ್ರವೀಣ ಕಾಂಬಳೆ, ಪುರಸಭೆಸದಸ್ಯರಾದ ನಾಗರಾಜ ಮೇದಾರ, ಸಿದ್ದಪ್ಪಡಂಗೇರ, ಬಾಬು ಮಿರ್ಜೆ, ವಿಶ್ವನಾಥಕಾಮಗೌಡ, ಶಕುಂತಲಾ ಡೋನವಾಡೆ, ಶಾಂಭವಿ ಅಶ್ವಥಪೂರ ಇದ್ದರು.

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.