ಬಿಜೆಪಿಯ ಲಕ್ಷ್ಮಣ ಸವದಿ ವಿರುದ್ಧ ಮೋಟಗಿಮಠ ಶ್ರೀ ಸ್ಪರ್ಧೆ


Team Udayavani, Jan 17, 2018, 9:45 AM IST

17-12.jpg

ಬೆಳಗಾವಿ: ಸ್ವಾಮೀಜಿಗಳ ರಾಜಕೀಯ ಪ್ರವೇಶಕ್ಕೆ ವೇದಿಕೆಯಾಗಿದ್ದ ಬಿಜೆಪಿ ಪ್ರಮೇಯ ಈಗ ಕಾಂಗ್ರೆಸ್‌ಗೂ ವ್ಯಾಪಿಸಿದೆ. ಬೆಳಗಾವಿ ಜಿಲ್ಲೆ ಅಥಣಿ ಕ್ಷೇತ್ರದಲ್ಲಿ ಬಿಜೆಪಿಯ ಲಕ್ಷ್ಮಣ ಸವದಿ ವಿರುದ್ಧ ಕಾಂಗ್ರೆಸ್‌ನಿಂದ ಲಿಂಗಾಯತ ಸಮಾಜದ ಪ್ರಭಾವಿ ಸ್ವಾಮೀಜಿ ಮೋಟಗಿ ಮಠದ ಪ್ರಭು ಚನ್ನಬಸವ ಶ್ರೀಗಳು ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ.

ಅಥಣಿ ಕ್ಷೇತ್ರದ ಹಾಲಿ ಶಾಸಕ, ಮಾಜಿ ಸಚಿವ ಲಕ್ಷ್ಮಣ ಸವದಿ ಈ ಭಾಗದ ಪ್ರಭಾವಿ ನಾಯಕ. ಇದು ಬಿಜೆಪಿಯ ಭದ್ರಕೋಟೆಯೂ ಹೌದು. ಸವದಿ ಅವರ ವೈಯಕ್ತಿಕ ವರ್ಚಸ್ಸಿನ ಮುಂದೆ ಕಾಂಗ್ರೆಸ್‌ಗೆ ಇಲ್ಲಿ ಎದ್ದು ನಿಲ್ಲುವುದು  ದುಸ್ತರ. ಸದನದಲ್ಲಿ ನೀಲಿ ಚಿತ್ರ ನೋಡಿದ ಆರೋಪ ಮಧ್ಯೆಯೂ ಸವದಿ ಕಳೆದ ಬಾರಿ ಗೆದ್ದಿದ್ದರು. ಈ ಹಿನ್ನೆಲೆಯಲ್ಲಿ ಖಚಿತವಾಗಿ ಗೆಲ್ಲುವ ಅಭ್ಯರ್ಥಿಗಳ ಹುಡುಕಾಟದಲ್ಲಿರುವ ಕಾಂಗ್ರೆಸ್‌ ಈಗ ಪ್ರಭಾವಿ ಮಠಾಧೀಶರ ಮೇಲೆ ಕಣ್ಣು ಹಾಕಿದೆ. ಈ ಮೂಲಕ ತನ್ನ ಪಾರಂಪರಿಕ ಮತ ಬ್ಯಾಂಕ್‌ ಜತೆಗೆ ಲಿಂಗಾಯತ ಸಮಾಜದ ಮತ ಸೆಳೆಯುವ ತಂತ್ರ ರೂಪಿಸಿದೆ. ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಸ್ವಾಮೀಜಿ ಅವರೊಂದಿಗೆ ಈಗಾಗಲೇ ಎರಡು ಸುತ್ತಿನ ಮಾತು ಕತೆ ನಡೆಸಿದ್ದಾರೆ. ಶ್ರೀಗಳು ಸಹ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಅಲ್ಲದೇ ಎಐಸಿಸಿ ಕಾರ್ಯದರ್ಶಿ ಸತೀಶ ಜಾರಕಿಹೊಳಿ ಅವರೊಂದಿಗೂ ಸ್ವಾಮೀಜಿ ಉತ್ತಮ ಬಾಂಧವ್ಯ ಹೊಂದಿದ್ದಾರೆ.

ಸ್ವಾಮೀಜಿ ಏನಂತಾರೆ?: ಈ ಎಲ್ಲ ಬೆಳವಣಿಗೆಗಳ  ಕುರಿತು “ಉದಯವಾಣಿ’ ಜತೆ ಮಾತನಾಡಿದ ಮೋಟಗಿಮಠದ ಚನ್ನಬಸವ ಸ್ವಾಮೀಜಿ, ಇದು ಇಂದು, ನಿನ್ನೆ ನಡೆದ ಬೆಳವಣಿಗೆ ಅಲ್ಲ. 10 ತಿಂಗಳಿಂದ ಸ್ಪರ್ಧೆಗಾಗಿ ನನ್ನ ಮೇಲೆ ಒತ್ತಾಯ ಬರುತ್ತಲೇ ಇದೆ. ದಿನ ನಿತ್ಯ ಸಾವಿರಾರು ಜನ ಹಾಗೂ ರಾಜಕಾರಣಿಗಳು ನೀವು ರಾಜಕೀಯಕ್ಕೆ ಬರಬೇಕು. ಅಥಣಿ ಕ್ಷೇತ್ರದಿಂದ ಸ್ಪರ್ಧಿಸಬೇಕೆಂದು ಕೇಳುತ್ತಲೇ ಇದ್ದಾರೆ. ಪ್ರತಿಯೊಬ್ಬರೂ ಬದಲಾವಣೆ ಬಯಸಿದ್ದಾರೆ. ಅದಕ್ಕೆಂದೇ ನನ್ನನ್ನು ಕರೆದಿದ್ದಾರೆ ಎಂದರು. ಕೇವಲ ಉತ್ತರ ಭಾರತದಲ್ಲಿ ಸ್ವಾಮೀಜಿಗಳು ರಾಜಕಾರಣಕ್ಕೆ ಬರುವುದಲ್ಲ. ದಕ್ಷಿಣ ಭಾರತದಲ್ಲೂ ಈ ಪ್ರಯೋಗ ಆಗಬೇಕು. ಅಂತಹ ಪ್ರಯೋಗಕ್ಕೆ ನೀವು ಮುನ್ನುಡಿ ಬರೆಯಬೇಕೆಂದು ಒತ್ತಾಯ ಮಾಡಿದ್ದಾರೆ. ಮಠಾಧೀಶರು ರಾಜಕಾರಣಕ್ಕೆ ಹೋಗಬಾರದೆಂಬ ಅಭಿಪ್ರಾಯ ನನ್ನದಲ್ಲ. ಜನಸೇವೆಗೆ ಹಲವು ದಾರಿಗಳಿವೆ. ಅದರಲ್ಲಿ ರಾಜಕಾರಣವೂ ಒಂದು. ಜನರ ಒತ್ತಾಯದ ಜೊತೆಗೆ ರಾಜ್ಯ ಹಾಗೂ ಜಿಲ್ಲೆಯ ಪ್ರಭಾವಿ ಕಾಂಗ್ರೆಸ್‌ ನಾಯಕರು ನನ್ನ ಜತೆ ಸಂಪರ್ಕದಲ್ಲಿದ್ದಾರೆ. ನಮ್ಮ ವಿಚಾರ ಹಾಗೂ ಅಭಿಪ್ರಾಯ ಕಾಂಗ್ರೆಸ್‌ ಜತೆ ಹೊಂದಿಕೆಯಾದರೆ ಸ್ಪರ್ಧಿಸುತ್ತೇನೆ ಎಂದರು.

ಸ್ವಾಮೀಜಿಯೇ ಏಕೆ?: ಲಿಂಗಾಯತ ಪಂಚಮ ಸಾಲಿ ಸಮಾಜದ ಮತದಾರರು ಇಲ್ಲಿ ನಿರ್ಣಾಯಕರು. ಹೀಗಾಗಿ ಕಾಂಗ್ರೆಸ್‌ ಈ ಸಮಾಜದ ಪ್ರಭಾವಿ ಸ್ವಾಮೀಜಿ ಅವರನ್ನೇ ಕಣಕ್ಕಿಳಿಸಲು ನಿರ್ಧರಿಸಿ ಅದಕ್ಕಾಗಿ ತೆರೆಮರೆಯ ಕಾರ್ಯಚಟು ವಟಿಕೆ ನಡೆಸಿದೆ. ಹಿಂದುಳಿದ ವರ್ಗದವರ ಜತೆ ಲಿಂಗಾಯತರು ಕೈ ಜೋಡಿಸಿದರೆ ಗೆಲುವು ಸುಲಭ ಎಂಬುದು ಕಾಂಗ್ರೆಸ್‌ ಲೆಕ್ಕಾಚಾರ. 

ಜಿದ್ದಿಗೆ ಬಿದ್ದ ಜಾರಕಿಹೊಳಿ ಸಹೋದರರು!
ಜಿಲ್ಲಾ ಸಹಕಾರಿ ಬ್ಯಾಂಕ್‌ ರಾಜಕಾರಣದಲ್ಲಿ ಮೊದಲಿಂದಲೂ ಶಾಸಕ ಲಕ್ಷ್ಮಣ ಸವದಿ ಅವರೊಂದಿಗೆ ಮುನಿಸಿಕೊಂಡಿರುವ ಜಾರಕಿಹೊಳಿ ಸಹೋದರರಿಗೆ ಈ ಚುನಾವಣೆ ಪ್ರತಿಷ್ಠೆಯ ವಿಷಯ. ಶಾಸಕ ಸವದಿಗೆ ಸೋಲುಣಿಸಲೇಬೇಕೆಂಬ ಹಠಕ್ಕೆ ಬಿದ್ದಿರುವ ಜಾರಕಿಹೊಳಿ ಬ್ರದರ್ಸ್‌ ಇದಕ್ಕಾಗಿ ಮೋಟಗಿಮಠದ ಸ್ವಾಮೀಜಿಗೆ ಗಾಳ ಹಾಕಿದ್ದಾರೆ. ಇದುವರೆಗೆ ನಡೆದಿರುವ ಮಾತುಕತೆ ಫಲಪ್ರದವಾಗಿದ್ದೇ ಆದರೆ ಬೆಳಗಾವಿ ಜಿಲ್ಲೆ ಮೊದಲ ಬಾರಿಗೆ ಪ್ರಭಾವಿ ಕಾವಿಧಾರಿಯೊಬ್ಬರನ್ನು ಚುನಾವಣಾ ಅಖಾಡದಲ್ಲಿ ಕಾಣಲಿದೆ.

ಮೋಟಗಿಮಠದ ಸ್ವಾಮೀಜಿಗೆ ಚುನಾವಣೆಯಲ್ಲಿ ಸ್ಪರ್ಧಿಸುವ ಆಸಕ್ತಿಯಿದೆ. ಈ ನಿಟ್ಟಿನಲ್ಲಿ ಮಾತುಕತೆ ಸಹ ನಡೆದಿದೆ. ಕ್ಷೇತ್ರದಲ್ಲಿ ಲಿಂಗಾಯತರು ಹೆಚ್ಚಿರುವುದರಿಂದ ಸ್ವಾಮೀಜಿ ಸ್ಪರ್ಧೆ ಅನುಕೂಲವಾಗಲಿದೆ. ಕಾಂಗ್ರೆಸ್‌ಗೆ ಇದು ಪ್ಲಸ್‌ ಪಾಯಿಂಟ್‌.
 ●ವಿನಯ ನಾವಲಗಟ್ಟಿ, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ

ಕೇಶವ ಆದಿ

ಟಾಪ್ ನ್ಯೂಸ್

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.