ಸರ್ಕಾರಿ ಸೌಲಭ್ಯ ಪಡೆಯಲು ಪ್ರೇರೇಪಿಸಿ
Team Udayavani, Sep 16, 2019, 11:20 AM IST
ಬೈಲಹೊಂಗಲ: ನೇಸರಗಿಯಲ್ಲಿ ರವಿವಾರ ಹಮ್ಮಿಕೊಂಡ ರೈತ ಸಂಪರ್ಕ ಕೇಂದ್ರದ ಕಟ್ಟಡ ಉದ್ಘಾಟನೆ ಹಾಗೂ ಕೃಷಿ ವಸ್ತು ಪ್ರದರ್ಶನ ಕಾರ್ಯಕ್ರಮಕ್ಕೆ ರೈತರನ್ನು ಆಹ್ವಾನಿಸಿಲ್ಲವೆಂದು ಆರೋಪಿಸಿ ಗ್ರಾಮಸ್ಥರು ಶಾಸಕರ ಸಮ್ಮುಖದಲ್ಲಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಬೈಲಹೊಂಗಲ: ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕೃಷಿ ವಸ್ತು ಪ್ರದರ್ಶನ ನಡೆಸಿರುವುದು ಸೂಕ್ತವಾಗಿದೆ. ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ರೈತರು ಬರುವಂತೆ ಪ್ರೇರೇಪಿಸಿ ಉತ್ತಮ ಕಾರ್ಯಕ್ರಮ ರೂಪಿಸಬೇಕೆಂದು ಶಾಸಕ ಮಹಾಂತೇಶ ದೊಡಗೌಡರ ಅಧಿಕಾರಿಗಳಿಗೆ ಸೂಚಿಸಿದರು.
ತಾಲೂಕಿನ ನೇಸರಗಿ ಚನ್ನವೃಷಬೇಂದ್ರ ದೇವರಕೊಂಡ ಅಜ್ಜನ ದೇವಸ್ಥಾನದಲ್ಲಿ ರವಿವಾರ ನಡೆದ ರೈತ ಸಂಪರ್ಕ ಕೇಂದ್ರ ನೂತನ ಕಟ್ಟಡ ಉದ್ಘಾಟನೆ, ಸಮಗ್ರ ಕೃಷಿ ಅಭಿಯಾನ ಸಮಾರೋಪ ಹಾಗೂ ಕೃಷಿ ವಸ್ತು ಪ್ರದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ನೇಸರಗಿ ಎಪಿಎಂಸಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಇಲ್ಲಿನ ಸರಕಾರಿ ಐಟಿಐ ಕೇಂದ್ರ ನಿರ್ಮಾಣಕ್ಕೆ ಕೆಲ ಅಡೆತಡೆಗಳು ಬಂದಿವೆ. ನೇಸರಗಿ ಗ್ರಾಮಸ್ಥರು ಇಲ್ಲಿಯೇ ಐಟಿಐ ಕಾಲೇಜು ಇರಲಿ ಎಂದು ಹೇಳಿದ್ದು, ಮುಂದಿನ ದಿನದಲ್ಲಿ ಸೂಕ್ತ ಜಾಗೆ ಪರಿಶೀಲಿಸಿ ಕಟ್ಟಡ ನಿರ್ಮಿಸಲಾಗುವುದು ಎಂದು ತಿಳಿಸಿದರು.
ಜಿಪಂ ಸದಸ್ಯರಾದ ನಿಂಗಪ್ಪ ಅರಕೇರಿ, ಜಿಪಂ ಮಾಜಿ ಅಧ್ಯಕ್ಷ ಎಸ್.ಎಫ್. ದೊಡಗೌಡರ ಮಾತನಾಡಿ, ರೈತರ ಸಮಸ್ಯೆಗಳಿಗೆ ಸ್ಪಂದಿಸಿ ಅನುಕೂಲ ಮಾಡುವ ನಿಟ್ಟಿನಲ್ಲಿ ಕೃಷಿ ಅಧಿಕಾರಿಗಳು ಬದ್ಧರಾಗಬೇಕು. ರೈತರು ಶ್ರಮಜೀವಿಗಳಾಗಿದ್ದು, ಅವರ ಕಷ್ಟ ನೀಗಿಸುವ ನಿಟ್ಟಿನಲ್ಲಿ ಸರಕಾರದಿಂದ ಬಂದ ಯೋಜನೆಗಳನ್ನು ತಿಳಿಸಿ ಆರ್ಥಿಕವಾಗಿ ಮುಂದೆ ಬರಲು ರೈತರ ಕೊಂಡಿಯಾಗಿ ಕೆಲಸ ಮಾಡಬೇಕೆಂದರು.
ಮಲ್ಲಾಪುರ ಚಿದಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಎಪಿಎಂಸಿ ತಾಪಂ ಅಧ್ಯಕ್ಷೆ ನೀಲವ್ವ ಫಕ್ಕೀರನ್ನವರ, ಉಪಾಧ್ಯಕ್ಷ ಮಲ್ಲನಾಯ್ಕ ಬಾಂವಿ, ಜಿಪಂ ಸದಸ್ಯೆಯರಾದ ರೋಹಿಣಿ ಪಾಟೀಲ, ಲಾವಣ್ಯ ಶಿಲ್ಲೇದಾರ, ದೇಶನೂರ ಗ್ರಾಪಂ ಅಧ್ಯಕ್ಷ ದೀಪಕಗೌಡ ಪಾಟೀಲ, ತಾಪಂ ಸದಸ್ಯೆ ಲಕ್ಷ್ತ್ರೀ ತಳವಾರ, ಅಶ್ವಿನಿ ಕುಂಕೂರ, ಪ್ರವೀಣ ಯಡಳ್ಳಿ, ಹೊಳೆವ್ವ ನಡುವಿನಮನಿ, ಕೆಂಚಪ್ಪ ಕಳ್ಳಿಬಡ್ಡಿ, ಬಾಳಪ್ಪ ಮಾಳಗಿ, ರಮೇಶ ರಾಯಪ್ಪಗೋಳ, ದೇಮಣ್ಣ ಗುಜನಟ್ಟಿ, ಮಲ್ಲೇಶ ಮಾಳನ್ನವರ, ಫಕ್ಕೀರಪ್ಪ ಸೊಮನ್ನವರ, ಸೋಮನಗೌಡ ಪಾಟೀಲ, ವಿನಾಯಕ ಮಾಸ್ತಮರಡಿ, ಪುಂಡಲೀಕ ಚಿಕ್ಕನಗೌಡರ, ಅಡಿವೆಪ್ಪ ಚಿಗರಿ, ಪ್ರಕಾಶ ತೊಟಗಿ, ಮಹಾಂತೇಶ ಕೂಲಿನವರ, ಸೋಮಶೇಖರ ಮಾಳನ್ನವರ, ದೇವೇಂದ್ರ ಮಾಳಗಿ, ಗಂಗಾಧರ ಗುಜನಟ್ಟಿ, ಮನೋಜ ಕೆಳಗೇರಿ, ವಿನೋದ ಯರಡಾಲ, ಮಂಜುನಾಥ ಹುಲಮನಿ, ಮಹಾಂತೇಶ ಸತ್ತಿಗೇರಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ