ಮೂಡಲಗಿ: ಲಿಂಗಾಯತ ಸಮಾಜದ ಹಿತ ಕಾಯುವ ಬಿಜೆಪಿ

ಕಾರಣಾಂತರಗಳಿಂದ ಈಗ ಕೆಲವರು ನನ್ನನ್ನು ಬಿಟ್ಟು ಬೇರೆ ಕಡೆ ಹೋಗಿದ್ದಾರೆ.

Team Udayavani, Mar 18, 2023, 2:40 PM IST

ಮೂಡಲಗಿ: ಲಿಂಗಾಯತ ಸಮಾಜದ ಹಿತ ಕಾಯುವ ಬಿಜೆಪಿ

ಮೂಡಲಗಿ: ವೀರಶೈವ ಲಿಂಗಾಯತ ಸಮಾಜದ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸುವ ಪಕ್ಷ ಬಿಜೆಪಿ ಎಂದು ಶಾಸಕ, ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನುಡಿದರು.

ಶುಕ್ರವಾರ ತಾಲೂಕಿನ ನಾಗನೂರ ಪಟ್ಟಣದ ಹೊರವಲಯದ ಮಹಾಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ಜರುಗಿದ ಅರಭಾವಿ ಮತಕ್ಷೇತ್ರದ ವೀರಶೈವ ಲಿಂಗಾಯತ ಸಮಾಜದ ಬೃಹತ್‌ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ವೀರಶೈವ ಲಿಂಗಾಯತ ಸಮಾಜ ಬಾಂಧವರು ಒಗ್ಗಟ್ಟಿನಿಂದ ಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಿ ಆಶೀರ್ವಾದ ಮಾಡಬೇಕು. ಬಿಜೆಪಿ ಲಿಂಗಾಯತ ಸಮಾಜದ ಹಿತ ಕಾಯಲಿದೆ ಎಂದು ಅವರು ತಿಳಿಸಿದರು.

2004ರಲ್ಲಿ ಶಾಸಕನಾಗಲು ನನ್ನ ಜೊತೆ ಸಾಕಷ್ಟು ಜನ ಕೈಜೋಡಿಸಿದ್ದಾರೆ. ಕಷ್ಟ ಕಾಲದಲ್ಲಿ ನಿಂತಿದ್ದಾರೆ. ಕಾರಣಾಂತರಗಳಿಂದ ಈಗ ಕೆಲವರು ನನ್ನನ್ನು ಬಿಟ್ಟು ಬೇರೆ ಕಡೆ ಹೋಗಿದ್ದಾರೆ. ಅವರನ್ನು ಯಾವುದೇ ಕಾರಣಕ್ಕೂ ತೆಗಳುವುದಿಲ್ಲ. ದೇವರು ಅಂತಹವರಿಗೆ ಒಳ್ಳೆಯದನ್ನು ಮಾಡಲಿ ಎಂದು ವಿರೋಧಿಗಳ ಹೆಸರು ಪ್ರಸ್ತಾಪಿಸದೇ ಮಾತನಾಡಿದರು.

ಅರಭಾವಿ ದುರದುಂಡೀಶ್ವರ ಮಠದ ಸಿದ್ದಲಿಂಗ ಸ್ವಾಮಿಗಳು, ಗೋಕಾಕದ ಶೂನ್ಯ ಸಂಪಾದನಾ ಮಠದ ಮುರುಘರಾಜೇಂದ್ರ ಸ್ವಾಮಿಗಳು, ಹುಣಶ್ಯಾಳ ಪಿ.ಜಿ.ಯ ನಿಜಗುಣ ದೇವರು, ಭಾಗೋಜಿಕೊಪ್ಪದ ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮಿಗಳು, ಸುಣಧೋಳಿಯ ಶಿವಾನಂದ ಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ಘಟಪ್ರಭಾ ಜೆಜಿಕೋ ಆಸ್ಪತ್ರೆಯ ಅಧ್ಯಕ್ಷ ಬಿ.ಆರ್‌.ಪಾಟೀಲ(ನಾಗನೂರ) ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಜಿ.ಪಂ ಮಾಜಿ ಅಧ್ಯಕ್ಷ ಬಸಗೌಡ ಪಾಟೀಲ, ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ, ಪ್ರಭಾ ಶುಗರ್‌ ಅಧ್ಯಕ್ಷ ಅಶೋಕ ಪಾಟೀಲ, ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷ ಬಿ.ಡಿ.ಪಾಟೀಲ, ಬಿಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ ಸುಭಾಷ ಢವಳೇಶ್ವರ, ನಿರ್ದೇಶಕ ನೀಲಕಂಠ ಕಪ್ಪಲಗುದ್ದಿ, ಬಸವಪ್ರಭು ನಿಡಗುಂದಿ, ಕೆಂಚನಗೌಡ ಪಾಟೀಲ, ಶಿವನಗೌಡ ಪಾಟೀಲ, ಸುಭಾಶ ಕುರಬೇಟ, ಶಿವಪ್ಪ ಹೊಸಮನಿ, ಎಸ್‌.ಎಲ್‌.ಹೊಸಮನಿ, ಬಸವನಗೌಡ ಪಾಟೀಲ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಸಮಾಜದ ಪ್ರಮುಖರು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಇದೇ ಸಂದರ್ಭದಲ್ಲಿ ಮನವಿ ಸಲ್ಲಿಸಿದರು. ನೀಲಪ್ಪ ಕೇವಟಿ ಸ್ವಾಗತಿಸಿದರು, ಸುಭಾಷ ಪಾಟೀಲ ಪ್ರಾಸ್ತಾವಿಕ ಮಾತನಾಡಿದರು, ಶೈಲಾ ಕೊಕ್ಕರಿ ನಿರೂಪಿಸಿದರು.

ಟಾಪ್ ನ್ಯೂಸ್

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.