ಪ್ರತಿಯೊಬ್ಬರು ಭಕ್ತಿ ಮಾರ್ಗ ಅನುಸರಿಸಲಿ
ಯಲ್ಲಾಲಿಂಗೇಶ್ವರರ ಪುಣ್ಯಾರಾಧನೆ ಕಾರ್ಯಕ್ರಮಶ್ರೀಮಠದ ಭಕ್ತರಿಂದ ಶ್ರೀಗೆ ತುಲಾಭಾರ ಸೇವೆ
Team Udayavani, Jan 23, 2020, 3:55 PM IST
ಮುಗಳಖೋಡ: ಜ್ಞಾನ, ಭಕ್ತಿ ಇವೆರಡು ಕೂಡಲಸಂಗಮವಾಗಿದ್ದು, ಮಾನವ ಬದುಕಿನಲ್ಲಿ ಗುರುವಿನ ಅನುಗ್ರಹ ಪಡೆದು ಭಕ್ತಿ ಮಾರ್ಗದಲ್ಲಿ ನಡೆಯಬೇಕು ಎಂದು ಡಾ.ಮುರುಘರಾಜೇಂದ್ರ ಸ್ವಾಮೀಜಿ ಹೇಳಿದರು.
ಸುಕ್ಷೇತ್ರ ಬೃಹನ್ಮಠದಲ್ಲಿ ಯಲ್ಲಾಲಿಂಗೇಶ್ವರ ಮಹಾರಾಜರ 34ನೇ ಪುಣ್ಯಾರಾಧನೆ ನಿಮಿತ್ತ ನಡೆದ ಯಲ್ಲಾಲಿಂಗೇಶ್ವರ, ಸಿದ್ಧಲಿಂಗೇಶ್ವರ ಹಾಗೂ ಸಿದ್ಧರಾಮೇಶ್ವರ ಕರ್ತೃ ಗದ್ದುಗೆಗೆ ಮಹಾಭಿಷೇಕ, ಶ್ರೀಗಳಿಗೆ ಪುಷ್ಪವೃಷ್ಟಿ, ಸಿಂಹಾಸನರೂಢ ಸುವರ್ಣ ಕಿರೀಟಧಾರಣೆ, ಪಾದಪೂಜೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮನುಷ್ಯ ಚಿಂತೆ ಮಾಡುವುದನ್ನು ಬಿಟ್ಟು ದೇವಸ್ಥಾನಗಳಲ್ಲಿ ಭಕ್ತಿಯಿಂದ ನಡೆದುಕೊಳ್ಳುವ ಕರ್ತವ್ಯ ಮೊದಲಾಗಬೇಕು. ಮನುಷ್ಯನ ಭಾವನೆಗಳನ್ನು ಪವಿತ್ರಗೊಳಿಸಿ ಅಂತರಂಗ ಶುದ್ಧೀಕರಿಸಲು ಸದ್ಗುರುವಿನ ಮಾರ್ಗದರ್ಶನ ಮುಖ್ಯವಾಗಿದೆ ಎಂದರು.
ಗುರುವಿನ ಮಾರ್ಗದರ್ಶನದಲ್ಲಿ ನಡೆದರೆ ಮಾತ್ರ ಜೀವನಕ್ಕೆ ಮುಕ್ತಿ ಸಿಗುತ್ತದೆ. ನಾವು ಜ್ಞಾನ ಮಾಡುವ ಕಾಲಕ್ಕೆ ಮನಸ್ಸು ಪರಿ ಶುದ್ಧವಾಗಿರಬೇಕು. ಮಹಾತ್ಮರ ವಚನಗಳು ನಮ್ಮನ್ನು ಸತ್ಯದ ಮಾರ್ಗಕ್ಕೆ ಒಯ್ಯುತ್ತವೆ. ಆದರೆ ಬದುಕಿನ ಬಹುತೇಕ ಘಟ್ಟಗಳು ಕಷ್ಟ-ಸುಖಗಳಿಂದ ಕೂಡಿರುತ್ತವೆ. ಸುಖ-ದುಃಖವನ್ನು ಸಮನಾಗಿ ಸ್ವೀಕರಿಸುವ ಧೈರ್ಯ ಹಾಗೂ ದಾರಿ ತೋರಲು ಗುರುವಿನ ಅಗತ್ಯತೆ ಪ್ರತಿಯೊಬ್ಬರಿಗೂ ಇದೆ ಎಂದರು. ಈ ವೇಳೆ ಜೇವರ್ಗಿ ಸುಭಾಷ ಗುತ್ತೇದಾರ, ಕುಡಚಿ ಶಾಸಕ ಪಿ.ರಾಜೀವ್, ಮಾಜಿ ಶಾಸಕ ಅಜಯಸಿಂಗ್, ರಾಜಣ್ಣ, ಪ್ರವಚನಕಾರರು, ಸಾಧು ಶರಣರು, ಸಂತರು, ಅನೇಕ ಭಕ್ತರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
MUST WATCH
ಹೊಸ ಸೇರ್ಪಡೆ
Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ