ಅಧಿಕಾರ ಇಲ್ಲದಿದ್ದಾಗ ಬೆಂಕಿ ಹಾಕೋದು; ಇದ್ದಾಗ ಭ್ರಷ್ಟಾಚಾರ ಮಾಡೋದು ‘ಕೈ’ ಕೆಲಸ: ಕಟೀಲ್ ಕಿಡಿ
Team Udayavani, Sep 29, 2020, 12:11 PM IST
ಬೆಳಗಾವಿ: ಕಾಂಗ್ರೆಸ್ ಅಧಿಕಾರ ಇಲ್ಲದಿದ್ದಾಗ ಬೆಂಕಿ ಹಾಕುವ ಕೆಲಸ, ಅಧಿಕಾರ ಇದ್ದಾಗ ಭ್ರಷ್ಟಾಚಾರ ಮಾಡುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕಿಡಿಕಾರಿದರು.
ಇತ್ತೀಚೆಗೆ ನಿಧನರಾದ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರ ಮನೆಗೆ ಮಂಗಳವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ಸಿಎಂ ಯಡಿಯೂರಪ್ಪ ಡೋಂಗಿ ರಾಜಕಾರಣಿ ಅಂತಾ ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಸಿದ್ದರಾಮಯ್ಯ ಮಾಜಿ ಸಿಎಂ ಆಗಿ ಗೌರವದಿಂದ ನಡೆದುಕೊಳ್ಳಬೇಕು. ಸಿದ್ದರಾಮಯ್ಯ ಸಿಎಂ ಇದ್ದಾಗ ಮೂರು ಸಾವಿರ ಜನ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು’ ಎಂದರು.
ಇದನ್ನೂ ಓದಿ:ಬೆಂಗಳೂರು ಉಗ್ರರ ಕೇಂದ್ರ ಎಂಬ ಬಿಜೆಪಿಯ ಅಪ್ರಬುದ್ಧರ ಹೇಳಿಕೆ ಬೆಂಗಳೂರಿಗೆ ಮಾಡಿದ ಅಪಮಾನ: HDK
‘ಸಿದ್ದರಾಮಯ್ಯ ಮಾನ ಮರ್ಯಾದೆ ಇದ್ದರೆ ಮನೆಯಲ್ಲಿ ಕುಳಿತುಕೊಳ್ಳಬೇಕು. ಸಿದ್ದರಾಮಯ್ಯಗೆ ಯೋಗ್ಯತೆ ಏನಿದೆ. ರೈತರು ಆತ್ಮಹತ್ಯೆ ಮಾಡಿಕೊಂಡರೇ ಮನೆಗೆ ಹೋಗಲಿಲ್ಲ. ನಮ್ಮ ರಾಜ್ಯದಲ್ಲಿ ವೀರಪ್ಪನ್ ನಂತಹ ಹತ್ತಾರು ಹಂತಕರನ್ನು ಕಂಡಿದ್ದೇವೆ. ಅದೇ ರೀತಿಯಲ್ಲಿ ಕಾಂಗ್ರೆಸ್ ನವರು ಆಡಳಿತ ನಡೆಸಿದವರು’ ಎಂದು ನಳೀನ್ ಕಿಡಿಕಾರಿದರು.
‘ಟಿಪ್ಪು ಜಯಂತಿ ಹೆಸರಲ್ಲಿ ಗಲಭೆ ಸೃಷ್ಟಿಸಿ, ಲಿಂಗಾಯತ ವೀರಶೈವ ಅಂತಾ ಸಮಾಜ ಒಡೆದರು. ಅಧಿಕಾರವನ್ನು ಉಳಿಸಬೇಕು ಅಂತಾ ಬ್ರಿಟಿಷರಿಗಿಂತ ಕಟ್ಟ ಕಡೆಯದಾಗಿ ಸಮಾಜವನ್ನು ಒಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ. ಇಂತಹ ಕೆಟ್ಟ ಸಿಎಂ ಬೇಡ ಅಂತಾ ಮೈಸೂರಿನಲ್ಲಿ ಮನೆಗೆ ಕಳುಹಿಸಿದ್ದಾರೆ. ಎಲ್ಲೇಲ್ಲೋ ನಿಂತು ಗೆಲ್ಲುವ ಪರಿಸ್ಥಿತಿ ಒಬ್ಬ ಮುಖ್ಯಮಂತ್ರಿಗೆ ಬಂದಿದೆ ಜನ ತಿರಸ್ಕಾರ ಮಾಡಿದ್ದಾರೆ’ ಎಂದರು.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
MUST WATCH
ಹೊಸ ಸೇರ್ಪಡೆ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…