ತಡರಾತ್ರಿ ಲಾರಿಗೆ ಹಿಂದಿನಿಂದ ಬಂದ ಬೈಕ್ ಡಿಕ್ಕಿ: ಮೂವರ ದುರ್ಮರಣ
Team Udayavani, Dec 8, 2019, 11:47 AM IST
ಬೆಳಗಾವಿ: ನಿಂತಿದ್ದ ಲಾರಿಗೆ ಹಿಂದಿನಿಂದ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಖಾನಾಪುರ ತಾಲೂಕಿನ ನಂದಿಹಳ್ಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಇಲ್ಲಿನ ಕೇದನೂರು ಗ್ರಾಮದ ಕಲ್ಮೇಶ್ವರ ಗಲ್ಲಿಯ ನಿವಾಸಿಗಳಾದ ಸಂಜು ರಾಜಾಯಿ (29) ಸಂಭಾಜಿಗಲ್ಲಿಯ ಪ್ರಕಾಶ ಚಡಣಿ (27) ಪ್ರಭುದೇವಗಲ್ಲಿಯ ಅಡಿವೆಪ್ಪಾ ಗುಜ್ಜನವರ (39) ಮೃತಪಟ್ಟವರು.
ಮೂವರು ನಿನ್ನೆ ತಡರಾತ್ರಿ ಭತ್ತದ ಒಕ್ಕಲು ಮುಗಿಸಿ ಒಂದೇ ಬೈಕ್ ನಲ್ಲಿ ಮನೆಗೆ ಬರುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಭರಡೆ ಡಾಬಾ ಬಳಿ ರಸ್ತೆ ಬದಿಯಲ್ಲಿ ಲಾರಿ ನಿಂತಿತ್ತು. ಲಾರಿ ನಿಂತಿರುವುದು ಬೈಕ್ ಸವಾರರಿಗೆ ಕಾಣಿಸದೆ ಅಪಘಾತ ಸಂಭವಿಸಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
ಬೆಳಗಾವಿ ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ