ಅರಟಾಳ ಗ್ರಾಪಂನಲ್ಲಿ ನರೇಗಾ ಸಭೆ
Team Udayavani, Feb 3, 2020, 12:59 PM IST
ಕೋಹಳ್ಳಿ: ನರೇಗಾ ಯೋಜನೆಯಲ್ಲಿ ಸಾಕಷ್ಟು ಕೆಲಸ ಮಾಡಲು ಅವಕಾಶವಿದೆ. ಗ್ರಾಮದ ಅಭಿವೃದ್ಧಿಪಡಿಸಲು ನರೇಗಾ ಯೋಜನೆ ಸಹಕಾರಿಯಾಗುತ್ತದೆ. ದುಡಿಯುವ ಜನರಿಗೆ ಕೆಲಸ ಒದಗಿಸುವುದು ಗ್ರಾಪಂ ವತಿಯಿಂದ ಕೆಲಸ ನೀಡಬೇಕು ಎಂದು ಸಾಮಾಜಿಕ ಪರಿಶೋಧನಾ ತಾಲೂಕು ಸಂಯೋಜಕ ಡಿ.ಎಫ್. ಮುಗಡ್ಲಿ ಹೇಳಿದರು.
ಅರಟಾಳ ಗ್ರಾಪಂ ಕಾರ್ಯಾಲಯದಲ್ಲಿ ನಡೆದ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಗ್ರಾಮಸಭೆಯಲ್ಲಿ ಮಾತನಾಡಿದ ಅವರು, ನರೇಗಾ ಯೋಜನೆಯಲ್ಲಿ ಕೆಲಸ ಪ್ರಾರಂಭಿಸಲು ಗ್ರಾಪಂ ಠರಾವು ಅತೀ ಮುಖ್ಯವಾಗಿದೆ. ಗ್ರಾಪಂ ವ್ಯಾಪ್ತಿಯಲ್ಲಿ ವಿವಿಧ ಇಲಾಖೆಯಿಂದ ನರೇಗಾ ಯೋಜನೆಯಲ್ಲಿ ಕಾಮಗಾರಿಗಳು ನಡೆದಿವೆ. ಇಲ್ಲಿ ಹೆಚ್ಚು ಕೂಲಿ ಕಾರ್ಮಿಕರು ದುಡಿಯುವವರು ಇದ್ದಾರೆ. ಇನ್ನು ಹೆಚ್ಚಿನ ಪ್ರಮಾಣದಲ್ಲಿ ಕಾರ್ಮಿಕರಿಗೆ ಕೆಲಸ ಕೊಡುವ ವ್ಯವಸ್ಥೆಯನ್ನು ಗ್ರಾಪಂ ವತಿಯಿಂದ ಮಾಡಬೇಕು ಎಂದರು.
ತಾಲೂಕು ಅಕ್ಷರ ದಾಸೋಹ ಅಧಿ ಕಾರಿ ಸರಿತಾ ಗಸ್ತಿ ಮಾತನಾಡಿದರು. ಗ್ರಾಪಂ ಅಧ್ಯಕ್ಷೆ ಶಾರಕ್ಕ ಗೌಡಪನ್ನವರ, ಪಿಡಿಒ ಎ ಜಿ. ಎಡಕೆ, ಕಾರ್ಯದರ್ಶಿ ಜಿತೇಂದ್ರ ಗದಾಡೆ, ಗ್ರಾಪಂ ಉಪಾಧ್ಯಕ್ಷ ಶಿವಾನಂದ ಹೊನಗೌಡ, ಸದಸ್ಯರಾದ ಸಿದ್ದು ಹಳ್ಳಿ, ಮಾಳಪ್ಪ ಕಾಂಬಳೆ, ಚಂದ್ರಪ್ಪ ನಾಟೀಕರ, ಮಾಲಾ ತೊಗರಿ, ಸೀಮಾ ಮುಧೋಳ, ಸುಶೀಲಾ ಜಂಬಗಿ, ಸಿದ್ದವ್ವ ಪೂಜಾರಿ, ಅಕ್ಕಾತಾಯಿ ಹಟ್ಟಿ, ಮಾಲಾ ಕಾಂಬಳೆ, ಎಂ.ಪಿ. ಪಾಟೀಲ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ