ನರೇಗಾ ಸಾಧನೆ; ಲೋಂಡಾ ಗ್ರಾಪಂ ತಾಲೂಕಿಗೆ ಪ್ರಥಮ

ನಿಗದಿತ ಗುರಿಯ ಶೇ. 158.83 ಸಾಧನೆ

Team Udayavani, Apr 5, 2022, 3:20 PM IST

14

ಬೆಳಗಾವಿ: ಖಾನಾಪುರ ತಾಲೂಕಿನ ಲೋಂಡಾ ಗ್ರಾಮ ಪಂಚಾಯಿತಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ 40,074 ಮಾನವ ದಿನಗಳನ್ನು ಸೃಜಿಸಿದ್ದು, ನಿಗದಿತ ಗುರಿಯ ಪೈಕಿ ಶೇ. 158.83 ಸಾಧನೆಗೈದು ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದೆ ಎಂದು ಲೋಂಡಾ ಪಿಡಿಒ ಬಾಲರಾಜ್‌ ಭಜಂತ್ರಿ ತಿಳಿಸಿದರು.

ಲೋಂಡಾ ಗ್ರಾ.ಪಂ ಸಭಾಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಆರ್ಥಿಕ ವರ್ಷದಲ್ಲೂ ಲೋಂಡಾ ಗ್ರಾ.ಪಂ ತನ್ನ ವಾರ್ಷಿಕ ಗುರಿ 21,439 ಮಾನವ ದಿನಗಳ ಪೈಕಿ ಒಟ್ಟು 35,665 ಮಾನವ ದಿನಗಳನ್ನು ಸƒಜಿಸಿತ್ತು. ಈ ಭಾಗವನ್ನು ಅತಿವೃಷ್ಟಿ ಪೀಡಿತ ಎಂದು ಘೋಷಿಸಿದ್ದರಿಂದ ಕೂಲಿಕಾರರಿಗೆ ಪ್ರತಿ ವರ್ಷಕ್ಕೆ ಈ ಹಿಂದೆ ಇದ್ದ ಮಾನವದಿನಗಳನ್ನು 100ರಿಂದ 150ಕ್ಕೆ ಏರಿಸಿದ್ದು, ಇದರ ಪ್ರಯೋಜನವನ್ನು ಗ್ರಾಮದ 200 ಕೂಲಿಕಾರರು ಪಡೆದಿದ್ದಾರೆ ಎಂದರು.

ಪ್ರತಿ ಕೂಲಿಕಾರರಿಗೆ 299 ರೂ. ಕೂಲಿ ಪಾವತಿಸಲಾಗುತ್ತಿದೆ. ಗ್ರಾಮದಿಂದ 5 ಕಿ.ಮೀ. ಗಿಂತ ಹೆಚ್ಚಿನ ದೂರ ಕ್ರಮಿಸಿ ಕೆಲಸ ಮಾಡುವವರಿಗೆ 318 ರೂ. ಕೂಲಿ ನೀಡಲಾಗುತ್ತಿದೆ. ನರೇಗಾ ಯೋಜನೆಯಡಿ ಕೆರೆ ಮತ್ತು ಕಾಲುವೆಗಳ ಹೂಳೆತ್ತಲಾಗಿದೆ. ಅರಣ್ಯದಲ್ಲಿ ಹೊಸ ಕೆರೆಗಳ, ಕೃಷಿ ಹೊಂಡ, ಬದು, ತೆರೆದ ಬಾವಿಗಳ ನಿರ್ಮಾಣ, ರೈತರ ಹೊಲಗಳಲ್ಲಿ ದನ ಹಾಗೂ ಕುರಿಗಳ ಕೊಟ್ಟಿಗೆ, ಹರಿಗಾಲುವೆ ಮತ್ತು ಹೊಲಗಾಲುವೆಗಳ ನಿರ್ಮಾಣ, ಮಣ್ಣು ಮತ್ತು ತೇವಾಂಶ ಸಂರಕ್ಷಣೆಯ ಕಾಮಗಾರಿಗಳು, ಸಾಮಾಜಿಕ ಅರಣ್ಯೀಕರಣ, ಕಾಡಿನ ಗಡಿಯಲ್ಲಿ ಕಂದಕ ನಿರ್ಮಾಣ (ಸಿಪಿಟಿ) ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದರು.

ಈ ವರ್ಷ ಹೊಸದಾಗಿ 67 ಕುಟುಂಬಗಳು ಸೇರಿದಂತೆ ಗ್ರಾಪಂನಲ್ಲಿ ಒಟ್ಟು 822 ಕೂಲಿಕಾರರು ಹೆಸರು ನೋಂದಾಯಿಸಿಕೊಂಡಿದ್ದಾರೆ. ಶೇ. 70ರಷ್ಟು ಮಹಿಳಾ ಕೂಲಿಕಾರರು ಕೆಲಸ ನಿರ್ವಹಿಸುತ್ತಿದ್ದಾರೆ. ಗ್ರಾಮದಲ್ಲಿ ನರೇಗಾ ಯೋಜನೆಯ ಸಮರ್ಪಕ ಅನುಷ್ಠಾನದಲ್ಲಿ ಗ್ರಾ.ಪಂ ಅಧ್ಯಕ್ಷರು, ಸದಸ್ಯರು, ಗ್ರಾಮಸ್ಥರು ಮತ್ತು ಅಧಿಕಾರಿಗಳು ಸಹಕರಿಸಿದ್ದಾರೆ ಎಂದು ಮಾಹಿತಿ ನೀಡಿದರು.

ಲೋಂಡಾ ಗ್ರಾ.ಪಂ ಅಧ್ಯಕ್ಷೆ ಶೆವರಿನ್‌ ಡಯಾಜ್‌ ಮಾತನಾಡಿ, ರಾಜ್ಯದ ಪ್ರಮುಖ ರೈಲ್ವೆ ಜಂಕ್ಷನ್‌ ಎಂದು ಲೋಂಡಾ ಗುರುತಿಸಿಕೊಂಡಿದೆ. ಇಲ್ಲಿ ಮುಂಚೆ ಇದ್ದ ಕೈಗಾರಿಕೆಗಳು ಮತ್ತು ಉದ್ಯಮಗಳು ಈಗ ಬಂದ್‌ ಆಗಿವೆ.

ಲಾಕ್‌ ಡೌನ್‌ ಸಂದರ್ಭದಲ್ಲಿ ರೈಲುಗಳ ಸಂಚಾರ ಸ್ಥಗಿತಗೊಂಡಿದ್ದರಿಂದ ಇಲ್ಲಿಯ ಜನರು ಕೆಲಸ ಕಳೆದುಕೊಂಡಿದ್ದರು. ಅವರನ್ನು ಶಿಕ್ಷಣ ಮತ್ತು ಸಂವಹನ ಚಟುವಟಿಕೆ (ಐಇಸಿ) ಮೂಲಕ ನರೇಗಾದತ್ತ ಆಕರ್ಷಿಸಲಾಗಿದೆ. ಯೋಜನೆಯ ಪ್ರಯೋಜನ ಕುರಿತು ಜನಜಾಗೃತಿ ಮೂಡಿಸಿದ್ದರಿಂದ ಇಂದು ಕೆಲ ಗ್ರಾ.ಪಂ ಸದಸ್ಯರೂ ಸೇರಿದಂತೆ ನೂರಾರು ಕೂಲಿಕಾರರು ಕೂಲಿ ಕೆಲಸಕ್ಕೆ ಹಾಜರಾಗಿ ಆಕರ್ಷಕ ಕೂಲಿ ಪಡೆದು ಆರ್ಥಿಕವಾಗಿ ಸಬಲರಾಗಿ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಬಹುತೇಕ ಕೂಲಿಕಾರರು ಪದವಿ, ಸ್ನಾತಕೋತ್ತರ ಮತ್ತು ಇಂಜಿನಿಯರಿಂಗ್‌ ಪದವಿ, ಡಿಪ್ಲೊಮಾ ಓದಿದವರಿದ್ದಾರೆ. ವಿವಿಧ ಕಲೆಗಳನ್ನು ಕರಗತ ಮಾಡಿಕೊಂಡ ಕುಶಲಕರ್ಮಿಗಳೂ ಇದ್ದಾರೆ ಎಂದರು.

ಗ್ರಾ.ಪಂ ಉಪಾಧ್ಯಕ್ಷ ಸಂದೀಪ್‌ ಸೋಜ್‌, ನೀಲಕಂಠ ಉಸಪಕರ, ಕುಮಾರ ಪಾಟೀಲ, ಊರ್ಮಿಳಾ ಮಿರಾಶಿ, ಸಂಜನಾ ಪಾಳೇಕರ, ವೈಶಾಲಿ ಕಾಂಬಳೆ, ವಿಲಾಸ ಮಾಂಗಳೇಕರ, ಶಿವಾನಂದ ಖೋತ, ಶಾಂತಾ ಖಂಡೋರೆ, ಯಶವಂತ ಗಾವಡೆ, ಯಲ್ಲಪ್ಪ ನಾಯಿಕ, ರಫೀಕ್‌ ಕಿತ್ತೂರ ಇದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

2-news

Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್‌‌ ಚೆಲ್ಲಾಪಿಲ್ಲಿ

Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ

Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.