ನರೇಗಾ ಕಾರ್ಮಿಕರಿಗೆ ಸಿಕ್ಕಿಲ್ಲ ಕೂಲಿ ಹಣ


Team Udayavani, Oct 25, 2020, 3:39 PM IST

bg-tdy-1

ಬೆಳಗಾವಿ: ಲಾಕ್‌ಡೌನ್‌ನಿಂದಾಗಿ ಕೆಲಸ ಕಳೆದುಕೊಂಡು ಉದ್ಯೋಗ ಖಾತ್ರಿಯಲ್ಲಿ ಕೂಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಕಳೆದ ಆರು ತಿಂಗಳಿಂದ ವೇತನ ನೀಡದೇ ಅನ್ಯಾಯ ಮಾಡಿರುವ ಸುಳೇಭಾವಿ ಗ್ರಾಪಂ ವಿರುದ್ಧ ಕಾರ್ಮಿಕರು ಕೆಲಸ ನಿಲ್ಲಿಸಿ ಶನಿವಾರ ಆಕ್ರೋಶ ವ್ಯಕ್ತಪಡಿಸಿದರು.

ಸುಳೇಭಾವಿ ಗ್ರಾಪಂನಲ್ಲಿ ನರೇಗಾ ಯೋಜನೆಯಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರು ಪಿಡಿಒ ಶ್ರೀದೇವಿ ಹಿರೇಮಠ ಹಾಗೂ ನರೇಗಾ ಅಧಿಕಾರಿಗಳಿಗೆ ಹಿಡಿಶಾಪ ಹಾಕಿ ಕೂಲಿ ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರು.

ನೇಕಾರಿಕೆ ಉದ್ಯೋಗ ಮಾಡುತ್ತಿದ್ದ ಅನೇಕ ನೇಕಾರರು ಲಾಕ್‌ಡೌನ್‌ದಿಂದಾಗಿ ಕೆಲಸ ಕಳೆದುಕೊಂಡು ನರೇಗಾ ಕೂಲಿ ಕೆಲಸಕ್ಕೆ ಅರ್ಜಿ ಹಾಕಿ ದುಡಿಯುತ್ತಿದ್ದಾರೆ. ಕಳೆದ ಆರೇಳು ತಿಂಗಳಿಂದ ದಿನಾಲೂ ಪಂಚಾಯಿತಿ ನಿಗದಿ ಪಡಿಸಿದ ಕೆಲಸ ಮಾಡುತ್ತಿದ್ದಾರೆ. ಆದರೆ ಪಿಡಿಒ ಹಿರೇಮಠ ಅವರ ಬೇಜವಾಬ್ದಾರಿ ಹಾಗೂ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಕೂಲಿ ವೇತನ ಸಿಕ್ಕಿಲ್ಲ. ಜೀವನ ನಿರ್ವಹಣೆ ಕಷ್ಟವಾಗಿದೆ ಎಂದು ಆರೋಪಿಸಿದರು.

ನೇಕಾರಿಕೆ ಉದ್ಯೋಗ ಸಂಪೂರ್ಣ ಕುಸಿದು ಬಿದ್ದಿದ್ದರಿಂದ ಕೂಲಿ ಕೆಲಸ ಮಾಡಿಯಾದರೂ ಬದುಕು ಸಾಗಿಸಬೇಕೆಂಬ ಕಾರ್ಮಿಕರ ಆಸೆಗೆ ಸುಳೇಭಾವಿ ಪಂಚಾಯಿತಿಯ ಅಧಿಕಾರಿಗಳು ತಣ್ಣೀರು ಎರಚಿದ್ದಾರೆ. ದುಡಿದ ಆರು ತಿಂಗಳ ವೇತನ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ಉದ್ಯೋಗ ಖಾತ್ರಿ ಕೆಲಸ ಬಂದ್‌ ಮಾಡುವುದಾಗಿ ಎಚ್ಚರಿಕೆ ನೀಡಿದರು.

ನರೇಗಾ ಕೂಲಿ ಕಾರ್ಮಿಕರಾದ ನಾಗಪ್ಪ ಹುಡೇದ, ಬಾಳಕೃಷ್ಣ ನಿಂಗನಗೌಡ, ಲಕ್ಷ್ಮಣ ಅಮಾತಿ, ಭೀಮಶಿ ಕೌತಗಾರ, ಟೋಪಣ್ಣ ಪಂಕು, ಗೀತಾ ಮೂಕನವರ, ಸೇವಂತಾ ಭೈರಪ್ಪನವರ, ಸಕ್ಕುಬಾಯಿ ಧರ್ಮೋಜಿ ಇನ್ನಿತರರಿದ್ದರು.

 ಇಸ್ಲಾಂಪುರ ಗ್ರಾಪಂಗೆ ಮುತ್ತಿಗೆ ಹಾಕಿ ಪ್ರತಿಭಟನೆ :

ಯಮಕನಮರಡಿ: ಹುಕ್ಕೇರಿ ತಾಲೂಕಿನ ಇಸ್ಲಾಂಪುರ ಗ್ರಾಪಂನಲ್ಲಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೂಲಿ ಕಾರ್ಮಿಕರಿಗೆ ಮೋಸ ಮಾಡಿ ಹಣ ಲಪಟಾಯಿಸುತ್ತಿದ್ದಾರೆ ಎಂದು ಆರೋಪಿಸಿ ಗ್ರಾಪಂಗೆ ಶನಿವಾರ ಕೂಲಿ ಕಾರ್ಮಿಕ ಮಹಿಳೆಯರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಕಟಾಬಳಿ, ಬೀರನಹೊಳಿ, ಜಾರಕಿಹೊಳಿ, ಹಳೆವಂಟಮೂರಿ, ಕಾಮಕಟ್ಟಿ, ಕಲ್ಲಟ್ಟಿ ಗ್ರಾಮದ ನೂರಾರು ಕೂಲಿ ಕಾರ್ಮಿಕರಿಗೆ ನ್ಯಾಯ ಒದಗಿಸಬೇಕೆಂದು ಗ್ರಾಪಂ ವಿರುದ್ಧ ಘೋಷಣೆ ಕೂಗಲಾಯಿತು. ಲಕ್ಷ್ಮೀ ಬಸರಗಿ, ಯಲ್ಲವ್ವಾ ಕಾಟೆ, ಮಹಾದೇವಿ ಕೋಪ್ರಿ, ಸತ್ಯಪ್ಪಾ ಬಾಲದಿಂಡಿ ಮಾತನಾಡಿ, ಇಸ್ಲಾಂಪುರ ಗ್ರಾಪಂ ವ್ಯಾಪ್ತಿಯ ಸುತ್ತಮುತ್ತಲಿನ ಹಳ್ಳಿಯ ಜನರು ಪ್ರತಿದಿನ

ಒಟ್ಟಾಗಿ ಕೂಲಿ ಕೆಲಸ ಮಾಡುತ್ತೇವೆ. ಆದರೆ ಕೂಲಿ ವೇತನ ನೀಡುವಲ್ಲಿ ತಾರತಮ್ಯ ಮಾಡಲಾಗುತ್ತಿದೆ. ಪ್ರಶ್ನಿಸಿದರೆ ಬಾಯಿಗೆ ಬಂದಂತೆ ಬಯ್ಯುತ್ತಾರೆ. ಕೆಲ ಜನರು ಕೂಲಿ ಮಾಡದೆ ಹಣ ಪಡೆಯುತ್ತಿದ್ದಾರೆ. ನಿಜವಾಗಿ ದುಡಿಯುವರಿಗೆ ನ್ಯಾಯ ಸಿಗಬೇಕೆಂದು ಒತ್ತಾಯಿಸಿದರು.

ಪಿಡಿಒ ಹಾಗೂ ಗಣಕಯಂತ್ರ ಸಿಬ್ಬಂದಿ ಮಧ್ಯಾಹ್ನ ಆದರೂ ಪಂಚಾಯತಿ ಕಡೆ ಸುಳಿಯಲಿಲ್ಲ. ಮಹಿಳೆಯರು ಬಿಸಿಲಿನಲ್ಲೇ ಪಂಚಾಯತಿ ಆವರಣದಲ್ಲಿ ಧರಣಿ ಕುಳಿತರು. ಪಿಡಿಒ ಮತ್ತು ಗಣಕಯಂತ್ರ ಸಿಬ್ಬಂದಿಯನ್ನು ವರ್ಗಾವಣೆ ಮಾಡಬೇಕೆಂದು ಆಗ್ರಹಿಸಿದರು. ಯಾವ ಒಬ್ಬ ಅಧಿಕಾರಿಯು ಸ್ಥಳಕ್ಕೆ ಸುಳಿಯದ್ದರಿಂದ ಬಡಕೂಲಿ ಕಾರ್ಮಿಕರು ಮನೆಯತ್ತ ಮುಖ ಮಾಡಿದರು. ಗ್ರಾಮದ ಮುಖಂಡ ಮಲ್ಲಪ್ಪಾ ಖೋತಗಿ ಮೊದಲಾದವರು ಪ್ರತಿಭಟನೆಯಲ್ಲಿದ್ದರು.

 

ಇಸ್ಲಾಂಪುರ ಗ್ರಾಪಂ ವ್ಯಾಪ್ತಿಯಲ್ಲಿ ಕೂಲಿ ಕಾರ್ಮಿಕರಿಗೆ ಆಗುತ್ತಿರುವ ಅನ್ಯಾಯ ಕುರಿತು ಈಗಾಗಲೇ ಹುಕ್ಕೇರಿ ತಾಪಂ ಇಒ ಹಾಗೂ ಬೆಳಗಾವಿ ಜಿಪಂ ಸಿಇಒಗೆ ಮನವಿ ನೀಡಿದ್ದೇವೆ. ಯಾವುದೇ ಪ್ರಯೋಜನ ಆಗಿಲ್ಲ. ಇಲ್ಲಿ ಇದ್ದ ಪಿಡಿಒ ಹಾಗೂ ಗಣಕಯಂತ್ರ ಸಿಬ್ಬಂದಿ ಕಾಣೆಯಾಗಿದ್ದಾರೆ. ಬಡಕೂಲಿ ಕಾರ್ಮಿಕರಿಗೆ ಅನ್ಯಾಯವಾಗಿದೆ. ಕೂಡಲೇ ಅಧಿಕಾರಿಗಳು ಬಡವರ ಗೊಳು ಕೇಳಬೇಕು. ಕವಿತಾ ಮುರುಕಟ್ಟೆ, ನರೇಗಾ ಕೂಲಿ ಕಾರ್ಮಿಕರ ಮುಖ್ಯಸ್ಥೆ

 

ಟಾಪ್ ನ್ಯೂಸ್

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

2-news

Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್‌‌ ಚೆಲ್ಲಾಪಿಲ್ಲಿ

Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ

Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.