ನವರಾತ್ರಿ ಉತ್ಸವ ತಂದಿದೆ ನವಚೈತನ್ಯ

 ಅದ್ಧೂರಿ ಉತ್ಸವಕ್ಕಾಗಿ ಕ್ಷಣಗಣನೆ ; ಶಕ್ತಿ ದೇವತೆಗಳ ಆರಾಧನೆ-ದೀಪ ಹಚ್ಚುವ ಸಂಪ್ರದಾಯ

Team Udayavani, Sep 25, 2022, 12:23 PM IST

8

ಬೆಳಗಾವಿ: ಬಹುಸಂಸ್ಕೃತಿಯ ನಗರಿ ಬೆಳಗಾವಿಯಲ್ಲಿ ನವರಾತ್ರಿಗೆ ನವಚೈತನ್ಯ ಮೂಡುತ್ತಿದೆ. 9 ದಿನಗಳ ಕಾಲ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಭಕ್ತಿ-ಭಾವದಿಂದ ಆಚರಿಸಲ್ಪಡುವ ನವರಾತ್ರಿಯ ಅದ್ಧೂರಿ ಉತ್ಸವಕ್ಕೆ ಕ್ಷಣಗಣನೆ ಆರಂಭಗೊಂಡಿದೆ.

ಎರಡು ವರ್ಷಗಳ ಕೊರೊನಾ ನಂತರದಲ್ಲಿ ಈ ಬಾರಿ ಹೊಸ ಮೆರಗು, ನವೋಲ್ಲಾಸದೊಂದಿಗೆ ಅದ್ಧೂರಿ ಹಾಗೂ ವಿಜೃಂಭಣೆಯ ನವರಾತ್ರಿ ಉತ್ಸವಕ್ಕೆ ಬೆಳಗಾವಿ ಸಾಕ್ಷಿಯಾಗಲಿದೆ. ಬೆಳಗಾವಿಯಲ್ಲಿ ಗಣೇಶೋತ್ಸವದಂತೆ ದಸರಾ ಹಬ್ಬವೂ ಅದ್ಧೂರಿಯಿಂದ ಆಚರಿಸಲ್ಪಡುತ್ತದೆ.

ನವರಾತ್ರಿ ಉತ್ಸವದಲ್ಲಿ ಶಕ್ತಿ ದೇವತೆಗಳನ್ನು ಪೂಜಿಸುವುದು, ಆರಾಧಿಸುವುದು ವಿಶೇಷ. ಅದರಲ್ಲೂ ಬೆಳಗಾವಿಯ ಶಕ್ತಿ ಪೀಠಗಳಲ್ಲಿ ಒಂದಾದ ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನವಂತೂ ಭಕ್ತರ ಕಾಮಧೇನು-ಕಲ್ಪವೃಕ್ಷವಾಗಿದೆ. 9 ದಿನಗಳ ಕಾಲ ನವರಾತ್ರಿ ಸಂದರ್ಭದಲ್ಲಿ ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆದು, ದೀಪದಂತೆ ನಮ್ಮ ಬಾಳು ಬೆಳಗಲಿ ಎಂದು ದೀಪಕ್ಕೆ ಎಣ್ಣೆ ಹಾಕುವ ಪ್ರತೀತಿ ನಡೆದುಕೊಂಡು ಬಂದಿದೆ.

ನವರಾತ್ರಿ ಎಂದರೆ ದೇವಿಗೆ ವಿಶೇಷ ಪೂಜೆಯೊಂದಿಗೆ ಘಟಸ್ಥಾಪನೆ ಮಾಡಿ ದೀಪ ಹಚ್ಚುವ ಸಂಪ್ರದಾಯ ನಡೆದುಕೊಂಡು ಬಂದಿದೆ. ಸೋಮವಾರ ಸೆ. 26ರಂದು ಘಟಸ್ಥಾಪನೆ ಮಾಡಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಮಾಡಿ ದೀಪ ಹಾಕಲಾಗುತ್ತದೆ. 9 ದಿನಗಳ ಕಾಲ ಈ ದೀಪವನ್ನು ಅತಿ ಜೋಪಾನವಾಗಿ ಕಾಪಾಡಿಕೊಂಡು ಬರಲಾಗುತ್ತದೆ.

ಜಿಲ್ಲೆಯ ಎಲ್ಲ ದೇವಸ್ಥಾನಗಳಲ್ಲಿಯೂ ನಿತ್ಯ 9 ದಿನಗಳ ಕಾಲ ದೇವಿಯನ್ನು ವಿಧವಿಧ ರೂಪಗಳಿಂದ ಅಲಂಕಾರ ಮಾಡಲಾಗುತ್ತದೆ. 9 ದಿನಗಳ ಕಾಲ ಜಾಗರಣೆ, ಪುರಾಣ ಪಠಣ, ಭಜನೆ-ಕೀರ್ತನೆ ಇತ್ಯಾದಿ ಧಾರ್ಮಿಕ ಕಾರ್ಯಕ್ರಮಗಳು ನೆರವೇರುತ್ತವೆ. ದೇವಸ್ಥಾನಗಳನ್ನು ವಿದ್ಯುತ್‌ ದೀಪಗಳಿಂದ ಅಲಂಕಾರ ಮಾಡಲಾಗುತ್ತದೆ. ನಿತ್ಯವೂ ಒಂದೊಂದು ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.

ರಾಯಬಾಗ ತಾಲೂಕಿನ ಚಿಂಚಲಿ ಶ್ರೀ ಮಾಯಕ್ಕಾ ದೇವಿ, ಹುಕ್ಕೇರಿ ತಾಲೂಕಿನ ಬಡಕುಂದ್ರಿ ಹೊಳೆಮ್ಮ ದೇವಿ, ಸವದತ್ತಿ ತಾಲೂಕಿನ ಶಿರಸಂಗಿ ಕಾಳಿಕಾ ದೇವಿ, ಸುಳೇಭಾವಿ ಶ್ರೀ ಮಹಾಲಕ್ಷ್ಮೀ ದೇವಿ, ನಿಪ್ಪಾಣಿ ಬಳಿಯ ಮಮದಾಪುರ ಶ್ರೀ ಅಂಬಿಕಾ ದೇವಿ, ನಗರದ ಕಿಲ್ಲಾ ಕೋಟೆ ಕೆರೆ ಆವರಣದಲ್ಲಿರುವ ಶ್ರೀ ದುರ್ಗಾದೇವಿ, ಬಸವಣ ಗಲ್ಲಿಯ ಶ್ರೀ ಮಹಾಲಕ್ಷ್ಮೀ ದೇವಿ, ಶಹಾಪುರದ ಶ್ರೀ ಅಂಬಾಬಾಯಿ ಮಂದಿರ, ಶಹಾಪುರದ ಶ್ರೀ ಮಹಾಲಕ್ಷ್ಮೀ ಮಂದಿರ, ಶಹಾಪುರದ ಶ್ರೀ ಕಾಳಿಕಾ ಮಂದಿರ, ಶಹಾಪುರ ಶ್ರೀ ಬನಶಂಕರಿ ಮಂದಿರ, ವಡಗಾಂವಿ ಶ್ರೀ ಬನಶಂಕರಿ ದೇವಿ, ಅನಗೋಳ ಶ್ರೀ ಮಹಾಲಕ್ಷ್ಮೀ ಮಂದಿರ, ಕಿಲ್ಲಾ ದುರ್ಗಾದೇವಿ ಮಂದಿರ, ಬಸವಣ ಗಲ್ಲಿ ಕಾಳಿಕಾದೇವಿ, ಸಮಾದೇವಿ ಮಂದಿರ ಸೇರಿದಂತೆ ಎಲ್ಲ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಅಲಂಕಾರ ನೆರವೇರುತ್ತದೆ.

ದಾಂಡಿಯಾ ಝಲಕ್‌

ರಾಜಸ್ಥಾನ, ಗುಜರಾತ ಪ್ರಭಾವದಿಂದಾಗಿ ಬೆಳಗಾವಿಯಲ್ಲೂ ನವರಾತ್ರಿಗೆ ದಾಂಡಿಯಾ ಕಾಣಸಿಗುತ್ತದೆ. ಓಣಿ, ಗಲ್ಲಿ ಗಲ್ಲಿಗಳಲ್ಲಿ ದಾಂಡಿಯಾ ಕಾರ್ಯಕ್ರಮಗಳು ನೆರವೇರುತ್ತವೆ. ಸಂಗೀತಕ್ಕೆ ತಕ್ಕಂತೆ ಹೆಜ್ಜೆ ಹಾಕುತ್ತ ದಾಂಡಿಯಾ ಆಡುವುದೇ ಒಂದು ಸೊಬಗು. ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗುತ್ತದೆ. ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ, ವಿವಿಧ ಮಹಿಳಾ ಮಂಡಳಗಳು, ಮಹಿಳಾ ಕ್ಲಬ್‌ಗಳಿಂದ ದಾಂಡಿಯಾ ಕಾರ್ಯಕ್ರಮ ಆಯೋಜಿಸಲಾಗುತ್ತದೆ. ಈ ದಾಂಡಿಯಾ ಹಳ್ಳಿಗಳಲ್ಲೂ ಕಾಲಿಟ್ಟಿದ್ದು, ಈಗಿನಿಂದಲೇ ತಯಾರಿ ಶುರುವಾಗಿದೆ.

ಓಣಿ ಓಣಿಗಳಲ್ಲಿ ದುರ್ಗೆಯ ಪ್ರತಿಷ್ಠಾಪನೆ

ನವರಾತ್ರಿಗೆ ದುರ್ಗೆಯನ್ನು ಆರಾಧಿಸುವುದು ವಿಶೇಷ. ಅದರಂತೆ ಓಣಿಗಳಲ್ಲಿ, ವಾರ್ಡ್‌ಗಳಲ್ಲಿ, ಹಳ್ಳಿಗಳಲ್ಲಿ ಶ್ರೀ ದುರ್ಗಾದೇವಿ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗುತ್ತದೆ. ಪೆಂಡಾಲ್‌ಗ‌ಳನ್ನು ನಿರ್ಮಿಸಿ ದೇವಿಯನ್ನು ಪ್ರತಿಷ್ಠಾಪಿಸಿ 9 ದಿನ ಪೂಜೆ ಸಲ್ಲಿಸಲಾಗುತ್ತದೆ. ನಂತರ ವಿಜಯದಶಮಿಯಂದು ಮೆರವಣಿಗೆ ಮೂಲಕ ಮೂರ್ತಿಯನ್ನು ವಿಸರ್ಜನೆ ಮಾಡಲಾಗುತ್ತದೆ.

ಮಾರುಕಟ್ಟೆಯಲ್ಲಿ ಜನಜಂಗುಳಿ

ದೇವಿಯನ್ನು ಆರಾಧಿ ಸಲು ಪೂಜಾ ಸಾಮಗ್ರಿಗಳ ಖರೀದಿಗೆ ಜನರು ಮಾರುಕಟ್ಟೆಗೆ ಮುಗಿಬೀಳುವುದು ಸಹಜ. ಸೋಮವಾರ ಸೆ. 26ರಿಂದ ನಗರದ ಮಾರುಕಟ್ಟೆಯಲ್ಲಿ ಜನಜಂಗುಳಿ ಹೆಚ್ಚಾಗುವ ಸಾಧ್ಯತೆಯೂ ಇದೆ. ಹೂವು, ಹಣ್ಣು, ಪೂಜಾ ಸಾಮಗ್ರಿಗಳ ಖರೀದಿಗೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಆಯುಧ ಪೂಜೆ ಮತ್ತು ವಿಜಯದಶಮಿಯಂದು ಹೆಚ್ಚಿನ ವ್ಯಾಪಾರ ಆಗುತ್ತದೆ.

-ಭೈರೋಬಾ ಕಾಂಬಳೆ

ಟಾಪ್ ನ್ಯೂಸ್

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.