ಕೇಂದ್ರ 5000 ಕೋಟಿ ಕೊಡಲಿ
•ಪ್ರವಾಹದಿಂದ 60 ಕೋಟಿ ಹಾನಿ•ಮುನ್ನೆಚ್ಚರಿಕೆಯಿದ್ದರೆ ತಗ್ಗುತ್ತಿತ್ತು ಹಾನಿ ಪ್ರಮಾಣ
Team Udayavani, Aug 11, 2019, 11:36 AM IST
ಸಂಕೇಶ್ವರ: ನಗರದ ಸಂತ್ರಸ್ತರನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭೇಟಿ ಮಾಡಿ ಅಹವಾಲು ಸ್ವೀಕರಿಸಿದರು.
ಬೆಳಗಾವಿ: ರಾಜ್ಯದಲ್ಲಿ ಭೀಕರ ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ತಕ್ಷಣ ಪರಿಹಾರ ಕಾರ್ಯಗಳಿಗಾಗಿ ಕೇಂದ್ರ ಸರಕಾರ 4 ರಿಂದ 5 ಸಾವಿರ ಕೋಟಿ ಬಿಡುಗಡೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಒತ್ತಾಯಿಸಿದರು.
ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಶನಿವಾರ ಸಂಜೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಉಂಟಾಗಿರುವ ಪ್ರಕೃತಿ ವಿಕೋಪದಿಂದ 50 ರಿಂದ 60 ಸಾವಿರ ಕೋಟಿ ರೂ ಹಾನಿಯಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸರಕಾರ ಗಮನಹರಿಸಬೇಕು ಎಂದರು.
ಪ್ರಧಾನಿ ಹಾಗೂ ಕೇಂದ್ರ ಗೃಹ ಸಚಿವರ ಸೂಚನೆ ಮೇರೆಗೆ ಪ್ರವಾಹ ಪೀಡಿತ ಪ್ರದೇಶಗಳ ಸಮೀಕ್ಷೆಗೆ ಬಂದಿರುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಅವರ ಸಲಹೆಯಂತೆ ಬಂದಿರುವ ಮುಖ್ಯಮಂತ್ರಿಗಳು ರಾಜ್ಯಕ್ಕೆ ಈ ಸಮಯದಲ್ಲಿ ಹೆಚ್ಚಿನ ಅನುದಾನ ತರಬೇಕು ಎಂದು ಹೇಳಿದರು.
ಕೇಂದ್ರ ಹಣಕಾಸು ಸಚಿವರು ಶನಿವಾರ ಬೆಳಗಾವಿಗೆ ಬಂದು ಎರಡು ಜಿಲ್ಲೆಗಳ Óಮೀಕ್ಷೆ ಮಾಡಿ ಹೋಗಿದ್ದಾರೆ. ಆದರೆ ಅವರಿಂದ ತುರ್ತು ಪರಿಹಾರವಾಗಿ ಯಾವುದೇ ಹಣಕಾಸು ನೆರವಿನ ಘೋಷಣೆ ಆಗಲಿಲ್ಲ. ನನಗೆ ಈ ಸರಕಾರದ ಮೇಲೆ ನಂಬಿಕೆ ಇಲ್ಲ. ಇದರಿಂದ ಪ್ರವಾಹ ಪೀಡಿತ ಪ್ರದೇಶಗಳ ಜನರಿಗೆ ಬಹಳ ನಿರಾಸೆಯಾಗಿದೆ ಎಂದರು.
ಯಡಿಯೂರಪ್ಪ ಅವರು ಬಹಳ ಶ್ರಮಪಟ್ಟು ಮುಖ್ಯಮಂತ್ರಿಗಳಾಗಿದ್ದಾರೆ. ಈ ಹಂತದಲ್ಲಿ ಅವರಿಗೆ ಬಹಳ ತಾಳ್ಮೆ ಬೇಕು. ಏಕಾಂಗಿ ಸರಕಾರವಾಗಿರುವ ಅವರ ಮೇಲೆ ರಾಜ್ಯದ ಜನರ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಅಧಿಕಾರಿಗಳ ಮೇಲೆ ರೇಗಾಡಿದರೆ ಕೆಲಸ ಆಗುವುದಿಲ್ಲ. ಬದಲಾಗಿ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಬೇಕು ಎಂದು ಕಿವಿಮಾತು ಹೇಳಿದರು.
ನಾನು 14 ತಿಂಗಳ ಕಾಲ ಅಧಿಕಾರ ನಡೆಸಿದ ವೇಳೆ ಎಲ್ಲ ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಆಡಳಿತ ನಡೆಸಿದ್ದರಿಂದಲೇ ಇವತ್ತು ಯಡಿಯೂರಪ್ಪ ಅವರಿಗೆ ಯಾವುದೇ ಸಮಸ್ಯೆ ಆಗಿಲ್ಲ. ಜನರಿಗೆ ನಮ್ಮದು ಸುರಕ್ಷಿತ ಸರಕಾರ ಎಂಬ ವಿಶ್ವಾಸವನ್ನು ಮೊದಲು ಮೂಡಿಸಲಿ. ನಾವು ಅಸಹಾಯಕತೆ ತೋರಿಸಿದರೆ ಜನರು ಏನು ಮಾಡಬೇಕು. ಸಮರೋಪಾದಿಯಲ್ಲಿ ಪರಿಹಾರ ಕಾರ್ಯಗಳಾಗಲು ತಕ್ಷಣ ಕೆಲ ತೀರ್ಮಾನಗಳನ್ನು ತೆಗೆದುಕೊಳ್ಳಬೇಕು ಎಂದು ಕುಮಾರಸ್ವಾಮಿ ಆಗ್ರಹಪಡಿಸಿದರು.
ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಅಧಿಕಾರಿಗಳು ಶ್ರಮವಹಿಸಿ ಕೆಲಸ ಮಾಡುತ್ತಿದ್ದಾರೆ. ಇದು ಸರಕಾರಕ್ಕೆ ದೊಡ್ಡ ಸವಾಲು. ಮೊದಲೇ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದರೆ ದೊಡ್ಡ ಪ್ರಮಾಣದ ಹಾನಿ ಕಡಿಮೆ ಮಾಡುವ ಅವಕಾಶ ಇತ್ತು ಎಂದು ಕುಮಾರಸ್ವಾಮಿ ಹೇಳಿದರು.
ಬೆಂಬಲ ನೀಡಿದ ಕ್ಷೇತ್ರಕ್ಕೆ ಗಮನ ಕೊಡದ ಸಿಎಂ: ಎಚ್ಡಿಕೆ ವ್ಯಂಗ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ