ನೇತಾಜಿ ದೇಶ ಕಂಡ ಮಹಾನ್‌ ಕ್ರಾಂತಿಕಾರಿ

ಜನರನ್ನು ಸಂಘಟಿಸಿ ಸೈನ್ಯ ಕಟ್ಟಿ ಅದಕ್ಕೆ "ಅಜಾದ್‌ -ಹಿಂದ್‌-ಫೌಜ್‌' ಎಂದು ಹೆಸರಿಟ್ಟರು.

Team Udayavani, Jan 24, 2022, 5:49 PM IST

ನೇತಾಜಿ ದೇಶ ಕಂಡ ಮಹಾನ್‌ ಕ್ರಾಂತಿಕಾರಿ

ಬೆಳಗಾವಿ: ದೇಶವನ್ನು ಬ್ರಿಟಿಷರಿಂದ ಮುಕ್ತಗೊಳಿಸಲು ಮಹಾತ್ಮಾ ಗಾಂಧೀಜಿಯವರ ನೇತೃತ್ವದಲ್ಲಿ ಅಹಿಂಸಾ ಮಾರ್ಗದ ಹೋರಾಟ ನಡೆದರೆ, ನೇತಾಜಿ ಸುಭಾಷ ಚಂದ್ರ ಬೋಸ್‌ ಅವರು ಕ್ರಾಂತಿಕಾರಕ ಮಾರ್ಗ ಅನುಸರಿಸಿದರು.

ಅವರು ಜನರನ್ನು ಸಂಘಟಿಸಿ ಸೈನ್ಯ ಕಟ್ಟಿ ಅದಕ್ಕೆ “ಅಜಾದ್‌ -ಹಿಂದ್‌-ಫೌಜ್‌’ ಎಂದು ಹೆಸರಿಟ್ಟರು. ಅದೇ ಇಂದಿನ ಭಾರತೀಯ ರಾಷ್ಟ್ರೀಯ ಸೇನೆಯಾಗಿ ರೂಪಗೊಂಡಿತು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಕ್ತಾರಹುಸೇನ್‌ ಪಠಾಣ ಹೇಳಿದರು.

ನಗರದ ಹೊರವಲಯದ ಕಣಬರಗಿಯ ಸಮತಾ ಶಾಲೆಯಲ್ಲಿ ರವಿವಾರ ನಡೆದ ನೇತಾಜಿ, ಸುಭಾಷಚಂದ್ರ ಬೋಸ್‌ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ನೇತಾಜಿಯವರ 125ನೇ ಜನ್ಮದಿನದ ನಿಮಿತ್ತ ಕೇಂದ್ರ ಸರ್ಕಾರ ದೆಹಲಿಯ ಇಂಡಿಯಾ ಗೇಟ್‌ ಬಳಿ ನೇತಾಜಿಯವರ ಪುತ್ಥಳಿ ಸ್ಥಾಪಿಸುವ ನಿರ್ಧಾರ ಕೈಗೊಂಡಿದ್ದು ಸ್ವಾಗತಾರ್ಹ ಎಂದರು.

ಸಮಾಜ ಸೇವಕ ಸುರೇಶ ಯಾದವ ಮಾತನಾಡಿ, ದೇಶದ ಯುವಕರಿಗೆ ಸ್ಫೂರ್ತಿಯ ಸೆಲೆಯಾದ ನೇತಾಜಿ ಸುಭಾಷಚಂದ್ರ ಬೋಸ್‌ ಅವರು ಯುವಶಕ್ತಿಯನ್ನು ಸಂಘಟಿಸಿ ಸ್ವಾತಂತ್ರ್ಯ ಹೋರಾಟದಲ್ಲಿ ತೊಡಗಿಸುವಲ್ಲಿ ಯಶಸ್ವಿಯಾದರು. ಅಂತಹ ಮಹನೀಯರ ಜೀವನ ನಮಗೆ ಆದರ್ಶವಾಗಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಶಂಕರ ಬಾಗೇವಾಡಿ, ವೀರ ಸೇನಾನಿ ನೇತಾಜಿ ಬೋಸರು ಪುರುಷರೊಂದಿಗೆ ಸ್ತ್ರೀಯರನ್ನೂ ಸೈನ್ಯಕ್ಕೆ ಸೇರಿಸಿಕೊಂಡು ಅವರಿಗೆ ಯುದ್ಧಕಲೆ ಕಲಿಸಿದ ಸಮಾನತೆಯ ಹರಿಕಾರರು. ನಮ್ಮ ದೇಶದ ಸ್ವಾತಂತ್ರ್ಯೋತ್ಸವದ ಸಂಭ್ರಮ ನೋಡಲು ಅವರಿರಲಿಲ್ಲ ಎನ್ನುವ ನೋವು ನಮ್ಮಂತವರನ್ನು ನಿರಂತರ ಕಾಡುತ್ತಲೇ ಇರುತ್ತದೆ ಎಂದರು.

ಬೆಳಗಾವಿಯ ಸಂಕಲ್ಪ ಫೌಂಡೇಶನ್‌ ಸಂಸ್ಥಾಪಕ ನಾನಾಗೌಡ ಬಿರಾದಾರ, ಶಿಕ್ಷಕಿ ಜಯಶ್ರೀ ನಾಯಕ, ಪ್ರಾಂಶುಪಾಲೆ ತೇಜಸ್ವಿನಿ ಬಾಗೇವಾಡಿ, ಕಾರ್ಯದರ್ಶಿ ರೇಣುಕಾ ಮಜಲಟ್ಟಿ, ವಿಜಯಲಕ್ಷಿ ವಿ. ಮಲಿಕಜಾನ ಗದಗಿನ, ಶಾಂತಾ ಮೋದಿ, ಅರುಣಾ ಪಾಟೀಲ, ಪೂಜಾ ಪಾಟೀಲ, ತೇಜಸ್ವಿನಿ ನಾಯ್ಕರ್‌ ಉಪಸ್ಥಿತರಿದ್ದರು. ಲಕ್ಷಿ ಬುಡ್ರಾಗೋಳ ಸ್ವಾಗತಿಸಿದರು. ವೃಷಭ ಮುಚಂಡಿಕರ ನಿರೂಪಿಸಿದರು. ಚೇತನ ಗುತ್ತಿ ವಂದಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.