ಕೊಡ ನೀರಿಗೂ ನಿತ್ಯ ಪರದಾಟ
Team Udayavani, May 5, 2019, 2:24 PM IST
ಸಂಬರಗಿ: ಗಡಿ ಭಾಗದಲ್ಲಿ ತೀವ್ರ ಬರಗಾಲ ಎದುರಾಗಿರುವದರಿಂದ ಅನಂತಪುರ ಗ್ರಾಮದಲ್ಲಿ ಜನರು ನಿತ್ಯ ನೀರಿಗಾಗಿ ಶುದ್ಧ ಘಟಕಗಳ ಮುಂದೆ ನಾ ಮುಂದೆ ತಾ ಮೂಂದೆ ಸಾಲು ಸಾಲು ಕೊಡಗಳನ್ನಿಟ್ಟು ನೀರು ಪಡೆದುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ.
ಇಲ್ಲಿರುವ ಸಮಸ್ಯೆ ಹೋಗಲಾಡಿಸಲು ತಾಲೂಕು ಆಡಳಿತ ಗ್ರಾಮದಲ್ಲಿ 7 ಕೊಳವೆಬಾವಿ ಕೊರೆಯಿಸಿ ಗ್ರಾಮದ ನೀರಿನ ಸಮಸ್ಯೆ ಹೋಗಲಾಡಿಸಲು ಮುಂದಾಗಿದೆ. ಆದರೆ ವಿದ್ಯುತ್ ಸಮಸ್ಯೆಯಿಂದ ಸಮರ್ಪಕ ನೀರು ಸಿಗದೇ ಪರದಾಡುವಂತಾಗಿದೆ. ಅನಂತಪುರ ಗ್ರಾಪಂ ವ್ಯಾಪ್ತಿಯಲ್ಲಿ ಚಂದ್ರಪ್ಪವಾಡಿ ಹಾಗೂ ಅನಂತಪುರ ಗ್ರಾಮಗಳು ಬರುತ್ತಿದ್ದು, ಅನಂತಪುರ ಗ್ರಾಮ 10 ಸಾವಿರ ಜನಸಂಖ್ಯೆ ಹೊಂದಿದೆ. ಈ ಗ್ರಾಮದಲ್ಲಿ 3 ಶುದ್ಧ ಕುಡಿಯುವ ನೀರಿನ ಘಟಕಗಳಿದ್ದು, ಕುಡಿಯುವ ನೀರಿಗಾಗಿ ನಿತ್ಯ ಸರ್ಕಸ್ ಮಾಡುವ ಸ್ಥಿತಿ ಎದುರಾಗಿದೆ.
ಗ್ರಾಮದಲ್ಲಿ ನೀರಿನ ಸಮಸ್ಯೆ ಹೋಗಲಾಡಿಸಲು 7 ಕೊಳವೆಬಾವಿ ಹೊಸದಾಗಿ ಕೊರೆಸಲಾಗಿದ್ದರೂ ನಿತ್ಯ ಜನರು ಬಿಸಿಲಲ್ಲೇ ಸಾಲುಗಟ್ಟಲೇ ನಿಂತು ನೀರು ಪಡೆಯುತ್ತಿದ್ದಾರೆ. ತೋಟದ ವಸತಿಗಳಲ್ಲಿ ಕೊಳವೆಬಾವಿಗಳು ಬಿಸಿಲಿನ ಹೊಡೆತಕ್ಕೆ ಸಂಪೂರ್ಣ ಬತ್ತಿ ಹೋಗಿದ್ದು, ಜನ-ಜಾನುವಾರುಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ತೋಟದ ವಸತಿಗಳಿಗೆ ತಾಲೂಕಾ ಆಡಳಿತ ವತಿಯಿಂದ ಟ್ಯಾಂಕರ್ ಮುಖಾಂತರ ನೀರು ಸರಬರಾಜು ಮಾಡುತ್ತಿದ್ದು, ಇದು ಸಂಪೂರ್ಣವಾಗಿ ನೀರು ಪೂರೈಕೆಯಾಗುತ್ತಿಲ್ಲ. ಶೀಘ್ರವೇ ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಹಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಗ್ರಾಮದಲ್ಲಿ ಹೊಸದಾಗಿ 7 ಕೊಳವೆಬಾವಿ ಕೊರೆಸಲಾಗಿದ್ದು, ಆ ನೀರನ್ನು ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಜೋಡಿಸಲಾಗಿದೆ. ಒಂದು ವೇಳೆ ವಿದ್ಯುತ್ ಸಮಸ್ಯೆ ಎದುರಾದರೆ ನೀರಿನ ಟ್ಯಾಂಕರ್ ಮೂಲಕ ನೀರು ಪೂರೈಹಿಸಲಾಗುವುದು.
•ಗುಂಡು ಮಿರಜಕರ ಪಿಡಿಒ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!