ಮೂಡಲಗಿ, ಕುಲಗೋಡ, ಖಾನಟ್ಟಿ,ಬೆಟಗೇರಿಗೆ ಹೊಸ ವಿದ್ಯಾಲಯಗಳು ಮಂಜೂರು
ಶೈಕ್ಷಣಿಕ ವಲಯದಲ್ಲಿ ಕಾಲೇಜುಗಳ ಸಂಖ್ಯೆ 9ಕ್ಕೆ ಏರಿಕೆ
Team Udayavani, Sep 21, 2022, 10:12 PM IST
ಮೂಡಲಗಿ: ಅರಭಾವಿ ವಿಧಾನಸಭಾ ಕ್ಷೇತ್ರಕ್ಕೆ 2022-23 ನೇ ಸಾಲಿನಲ್ಲಿ 4 ಹೊಸ ಸರ್ಕಾರಿ ಪದವಿ ಪೂರ್ವ ಕಾಲೇಜುಗಳು ಮಂಜೂರು ಆಗಿವೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ.
ಮೂಡಲಗಿ ತಾಲೂಕಿನ ಮೂಡಲಗಿ, ಕುಲಗೋಡ, ಖಾನಟ್ಟಿ ಮತ್ತು ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮಗಳಿಗೆ ವಿದ್ಯಾರ್ಥಿಗಳ ಅನುಕೂಲಕ್ಕೋಸ್ಕರ ಹೊಸ ಪದವಿ ಪೂರ್ವ ಕಾಲೇಜುಗಳನ್ನು ಮಂಜೂರು ಮಾಡಿಸಲಾಗಿದೆ. ಇದರಿಂದ ಮೂಡಲಗಿ ವಲಯದಲ್ಲಿ ಕಾಲೇಜುಗಳ ಸಂಖ್ಯೆ 9ಕ್ಕೇರಿದೆ ಎಂದು ಅವರು ಹೇಳಿದ್ದಾರೆ.
ವಿದ್ಯಾರ್ಥಿಗಳ ಪದವಿ ಪೂರ್ವ ಶಿಕ್ಷಣ ಸಲುವಾಗಿ ಆಯಾ ಗ್ರಾಮಗಳ ಸಾರ್ವಜನಿಕರು ಮನವಿ ಮಾಡಿಕೊಂಡಿದ್ದರಿಂದ ಮೂಡಲಗಿ ಶೈಕ್ಷಣಿಕ ವಲಯದಲ್ಲಿ ಒಟ್ಟು 8 ಹೊಸ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯಗಳನ್ನು ಮಂಜೂರು ಮಾಡುವಂತೆ ಸಚಿವ ಬಿ.ಸಿ. ನಾಗೇಶ ಅವರಲ್ಲಿ ಮನವಿ ಮಾಡಿಕೊಳ್ಳಲಾಗಿತ್ತು. ನಮ್ಮ ಮನವಿಯ ಮೇರೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಬಿ.ಸಿ. ನಾಗೇಶ ಅವರು ಮೂಡಲಗಿ ಶೈಕ್ಷಣಿಕ ವಲಯಕ್ಕೆ ಸದ್ಯ 4 ಹೊಸ ಕಾಲೇಜುಗಳನ್ನು ಆರಂಭಿಸಲಿಕ್ಕೆ ಅನುಮತಿ ನೀಡಿದ್ದಾರೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.
ಇದರ ಜತೆಗೆ ಇನ್ನೂ 4 ಕಾಲೇಜುಗಳನ್ನು ಆರಂಭಿಸಲಿಕ್ಕೆ ಪ್ರಸ್ತಾವಣೆ ಸಲ್ಲಿಸಲಾಗಿದೆ. ಮೆಳವಂಕಿ, ದುರದುಂಡಿ, ಅವರಾದಿ ಮತ್ತು ಪಾಮಲದಿನ್ನಿ ಗ್ರಾಮಗಳಿಗೆ ಹೊಸ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯಗಳನ್ನು ಆರಂಭಿಸುವಂತೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ ಅವರನ್ನು ಕೋರಲಾಗಿದೆ ಎಂದು ಹೇಳಿದ್ದಾರೆ.
ಕ್ಷೇತ್ರಕ್ಕೆ ಹೊಸ ಕಾಲೇಜುಗಳನ್ನು ಮಂಜೂರು ಮಾಡಿಸಿರುವ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಬಿ.ಸಿ. ನಾಗೇಶ ಅವರಿಗೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಮೂಡಲಗಿ, ಕುಲಗೋಡ, ಖಾನಟ್ಟಿ ಮತ್ತು ಬೆಟಗೇರಿ ಗ್ರಾಮಗಳ ಮುಖಂಡರು ಮತ್ತು ಶಿಕ್ಷಣ ಪ್ರೇಮಿಗಳು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ
Belgavi; ಪ್ರಯಾಣಿಕರ ಲಗೇಜನ್ನು ಬೆಂಗಳೂರಿನಲ್ಲೇ ಬಿಟ್ಟು ಬಂದ ವಿಮಾನ!
MUST WATCH
ಹೊಸ ಸೇರ್ಪಡೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ