Monkey ಕಾಯಿಲೆಗೆ ಹೊಸ ಲಸಿಕೆ: ದಿನೇಶ್ ಗುಂಡೂರಾವ್
Team Udayavani, Dec 11, 2023, 9:07 PM IST
ಸುವರ್ಣವಿಧಾನಸೌಧ: ರಾಜ್ಯದ ಮಲೆನಾಡು ಹಾಗೂ ಕರಾವಳಿ ಪ್ರದೇಶದಲ್ಲಿ ಕಾಣಿಸಿಕೊಳ್ಳುವ ಮಂಗನ ಕಾಯಿಲೆ(ಕೆಎಫ್ಡಿ)ಬಗ್ಗೆ ಪ್ರಸ್ತುತ ನೀಡುತ್ತಿರುವ ಲಸಿಕೆಯಿಂದ ರೋಗ ನಿಯಂತ್ರಣ ಸಾಧ್ಯವಾಗಿಲ್ಲವಾದ್ದರಿಂದ ಅದನ್ನು ಕೈ ಬಿಟ್ಟು ಹೊಸ ಲಸಿಕೆ ತಯಾರಿಸುವ ನಿಟ್ಟಿನಲ್ಲಿ ಸರಕಾರ ಯತ್ನಕ್ಕೆ ಮುಂದಾಗಿದೆ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಹೇಳಿದರು.
ವಿಧಾನಪರಿಷತ್ತು ಕಲಾಪದ ಶೂನ್ಯ ವೇಳೆಯಲ್ಲಿ ಬಿಜೆಪಿ ಸದಸ್ಯ ಡಿ.ಎಸ್.ಅರುಣ ಅವರ ವಿಷಯ ಪ್ರಸ್ತಾಪಕ್ಕೆ ಉತ್ತರಿಸಿದ ಸಚಿವರು, ಮಂಗನ ಕಾಯಿಲೆಗೆ ಪ್ರಸ್ತುತ ನೀಡುತ್ತಿರುವ ಲಸಿಕೆಯಿಂದ ರೋಗ ನಿಯಂತ್ರಣ ಸಾಧ್ಯವಿಲ್ಲ ಎಂಬ ವರದಿ ಹಿನ್ನೆಲೆಯಲ್ಲಿ ಅದನ್ನು ಕೈ ಬಿಡಲಾಗಿದೆ.
ಹೊಸ ಲಸಿಕೆ ತಯಾರಿಕೆ ನಿಟ್ಟಿನಲ್ಲಿ ಐಸಿಎಂಆರ್ ಜತೆ ಚರ್ಚೆ ನಡೆಸಲಾಗಿದೆ. ಆದರೆ, ಹೊಸ ಲಸಿಕೆ ತಯಾರಿಕೆಗೆ ಕಂಪನಿಗಳು ಮುಂದೆ ಬರುತ್ತಿಲ್ಲ. ಈ ಲಸಿಕೆ ಹೆಚ್ಚು ಬಳಕೆ ಇಲ್ಲದ್ದರಿಂದ ಸಂಶೋಧನೆಗೆ ಹೆಚ್ಚು ವೆಚ್ಚ ತಗುಲಲಿದೆ ಎಂದು ಕಂಪೆನಿಗಳು ಉತ್ಪಾದನೆಗೆ ಹಿಂದೇಟು ಹಾಕುತ್ತಿವೆ.
ಹೊಸ ಲಸಿಕೆ ನಿಟ್ಟಿನಲ್ಲಿ ಐಸಿಎಂಆರ್ ಜತೆ ಚರ್ಚೆ ಹಾಗೂ ಒತ್ತಡ ಹಿನ್ನೆಲೆಯಲ್ಲಿ ಇದೀಗ ಒಂದು ಕಂಪೆನಿ ಲಸಿಕೆ ತಯಾರಿಸಲು ಮುಂದೆ ಬಂದಿದೆ. ಹೊಸ ಲಸಿಕೆ ಸಂಶೋಧನೆಗೆ ಅಗತ್ಯವಿರುವ ಹಣದ ನೆರವು ನೀಡಲು ಸರಕಾರ ಸಿದ್ಧವಾಗಿದೆ. ಆದರೆ, ತಯಾರಿಕೆಯಾಗುವ ಹೊಸ ಲಸಿಕೆ ಯಶಸ್ಸಿನ ಬಗ್ಗೆ ಈಗಲೇ ಹೇಳಲಾಗದು. ಮಂಗನ ಕಾಯಿಲೆ ಹಾಗೂ ಲಸಿಕೆ ತಯಾರಿಕೆಯಲ್ಲಿ ಸರಕಾರ ನಿರ್ಲಕ್ಷ್ಯ ತೋರಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
MUST WATCH
ಹೊಸ ಸೇರ್ಪಡೆ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ