ಸಂಚಾರಕ್ಕೆ ಸಿದ್ಧ ನಿಪ್ಪಾಣಿ-ಮುಧೋಳ ರಸ್ತೆ

•ರಾಜ್ಯ ಹೆದ್ದಾರಿಯಲ್ಲಿ ಟೋಲ್ಗೇಟ್ ಅಳವಡಿಕೆ •ಆ. 15ರಿಂದ ಶುಲ್ಕ ವಸೂಲಿ ಪ್ರಕ್ರಿಯೆ ಆರಂಭ

Team Udayavani, Jul 26, 2019, 8:42 AM IST

bg-tdy-2

ಚಿಕ್ಕೋಡಿ: ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿಯ ಚಿಕ್ಕೋಡಿ ಸಮೀಪದ ಚಿಂಚಣಿ ಬಳಿ ಟೋಲ್ಗೇಟ್ ಕಾಮಗಾರಿ ನಡೆದಿದೆ.

ಚಿಕ್ಕೋಡಿ: ಕೆ-ಶಿಪ್‌ದಿಂದ ನಿರ್ಮಾಣವಾದ ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿ ರಸ್ತೆಯ ಬಳಕೆದಾರರಿಗೆ ಮುಕ್ತವಾಗುತ್ತಿದ್ದು, ಪ್ರಯಾಣಿಕರು ಆಗಸ್ಟ್‌ 15ರಿಂದ ಟೋಲ್ ಶುಲ್ಕ ಪಾವತಿಸಿ ಸಂಚಾರ ಮಾಡಬೇಕಾಗಿದೆ.

ನಿಪ್ಪಾಣಿ-ಮುಧೋಳ 109 ಕಿಮೀ ರಾಜ್ಯ ಹೆದ್ದಾರಿಯು ದ್ವಿಪಥ ರಸ್ತೆಯಾಗಿ ನಿರ್ಮಾಣವಾಗಿದೆ. ಪ್ರಯಾಣಿಕರಿಗೆ ಉತ್ತಮ ರಸ್ತೆಗಳು ಬೇಕು ಎಂದಾಗ ಬಳಕೆದಾರರು ಶುಲ್ಕ ಕಟ್ಟಿ ರಸ್ತೆಯಲ್ಲಿ ಸಂಚಾರ ಮಾಡುವುದು ಅನಿವಾರ್ಯ ಎನ್ನುವಂತಾಗಿದೆ. ಹೆದ್ದಾರಿಯ ಎರಡು ಕಡೆಗಳಲ್ಲಿ ಟೋಲ್ಗೇಟ್ ಕಾಮಗಾರಿ ಈಗಾಗಲೇ ಭರದಿಂದ ನಡೆದಿದೆ.

ಎರಡು ಕಡೆ ಟೋಲ್ಗೇಟ್: ಹೆದ್ದಾರಿಯ ಚಿಂಚಣಿ ಮತ್ತು ಕಬ್ಬೂರ ಹತ್ತಿರ ಎರಡು ಕಡೆಗಳಲ್ಲಿ ಟೋಲ್ ಗೇಟ್ ಕಾಮಗಾರಿ ಆರಂಭವಾಗಿದೆ. ನಿಪ್ಪಾಣಿ ಕಡೆಯಿಂದ ಮುಧೋಳ ಕಡೆಗೆ ಸಂಚಾರ ಮಾಡುವ ವಾಹನ ಸವಾರರು ಚಿಂಚಣಿ ಬಳಿ ಟೋಲ್ ಶುಲ್ಕ ಪಾವತಿಸಿ ಅಲ್ಲಿಂದ ಕಬ್ಬೂರ ಹತ್ತಿರ ಟೋಲ್ ಶುಲ್ಕ ಪಾವತಿಸಿ ಪ್ರಯಾಣಿಸಬಹುದಾಗಿದೆ. ಮುಧೋಳ ಕಡೆಯಿಂದ ನಿಪ್ಪಾಣಿ ಕಡೆಗೆ ಬರುವ ವಾಹನ ಸವಾರರು ಕಬ್ಬೂರ ಟೋಲ್ಗೇಟ್ ಹಾಗೂ ಚಿಂಚಣಿ ಟೋಲ್ ಗೇಟ್ ಬಳಿ ಟೋಲ್ ಶುಲ್ಕ ಪಾವತಿಸಬಹುದಾಗಿದೆ.

ಕೆ-ಶಿಪ್‌ ಹಾಗೂ ಕೆಆರ್‌ಡಿಸಿಎಲ್ ಸಂಸ್ಥೆಯು ವಿಶ್ವಬ್ಯಾಂಕ್‌ ಹಾಗೂ ಎಡಿಬಿಯಿಂದ ಸಾಲ ಪಡೆದು ರಾಜ್ಯದ ವಿವಿಧ ಕಡೆಗಳಲ್ಲಿ 3800 ಕಿ.ಮೀ ರಸ್ತೆ ನಿರ್ಮಿಸಿದೆ. ಈ ಎಲ್ಲ ರಸ್ತೆಗಳಿಗೆ ಟೋಲ್ ಸಂಗ್ರಹ ಮಾಡಲು ರಾಜ್ಯ ಸರ್ಕಾರ 2015ರಲ್ಲಿ ಟೋಲ್ ಸಂಗ್ರಹ ನಿಯಮಾವಳಿ ರಚನೆ ಮಾಡಿದೆ. ಹೀಗಾಗಿ ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದಿಂದ ಮುಧೋಳ-ನಿಪ್ಪಾಣಿ ರಾಜ್ಯ ಹೆದ್ದಾರಿ ಮೇಲೆ ಟೋಲ್ಗೇಟ್ ಕಾಮಗಾರಿ ಆರಂಭಿಸಿದೆ. 2017ರಲ್ಲಿ ಟೋಲ್ ಸಂಗ್ರಹಕ್ಕೆ ಟೆಂಡರ್‌ ಕರೆದಿದ್ದು, ವಿನಯಾ ಲಾಡ್‌ ಎಂಟರಪ್ರೖಸಿಸ್‌ ಸಂಸ್ಥೆಯು ಟೋಲ್ ಸಂಗ್ರಹ ಮಾಡಲು ಟೆಂಡರ್‌ ಪಡೆದುಕೊಂಡಿದೆ.

ಈಗಾಗಲೇ ಟೋಲ್ ಸಂಗ್ರಹಕ್ಕೆ ಸಿದ್ಧತೆ ಮಾಡಿಕೊಂಡಿರುವ ರಾಜ್ಯ ಸರ್ಕಾರ ಯಾವ ವಾಹನಗಳಿಗೆ ಎಷ್ಟೆಷ್ಟು ಹಣ ಪಾವತಿಸಬೇಕೆಂಬುದನ್ನು ದರ ದೃಢಪಡಿಸಿಲ್ಲ, ಆಗಸ್ಟ್‌ ಮೊದಲ ವಾರದಲ್ಲಿ ನಾಮಫಲಕದ ಮೂಲಕ ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ ಜನರಿಗೆ ಮಾಹಿತಿ ಪ್ರದರ್ಶಿಸಲಿದೆ.

ಸ್ಥಳೀಯರಿಗೆ ರಿಯಾಯತಿ ಪಾಸ್‌: ರಾಜ್ಯ ಹೆದ್ದಾರಿ ಮೇಲೆ ಟೋಲ್ ಕಟ್ಟಿ ಪ್ರಯಾಣ ಮಾಡುವ ವಾಹನ ಸವಾರರಿಗೆ ದೊಡ್ಡ ತಲೆನೋವಾಗಿದೆ. ಈಗಾಗಲೇ ಜಿಲ್ಲಾ ಸ್ಥಾನಮಾನ ಹೊಂದಿರುವ ಚಿಕ್ಕೋಡಿ ನಗರದ ವಾಹನ ಸವಾರರು ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ನಿಪ್ಪಾಣಿ ಕಡೆಗೆ ಪ್ರಯಾಣ ಬೆಳೆಸುತ್ತಾರೆ. ಇದರಿಂದ ಟೋಲ್ಶುಲ್ಕ್ ಹೊರೆಯಾಗುವುದರಲ್ಲಿ ಯಾವುದೇ ಸಂದೇಹವಿಲ್ಲ, ಇದರಿಂದ ಸ್ವಂತ ವಾಹನ ಹೊಂದಿರುವ ಮಾಲೀಕರಿಗೆ ಸರ್ಕಾರ ರಿಯಾಯಿತಿ ಪಾಸ್‌ ನೀಡುವ ವ್ಯವಸ್ಥೆ ಮಾಡಿಕೊಡಬಹುದು ಎನ್ನುತ್ತಾರೆ ಕೆಆರ್‌ಡಿಸಿಎಲ್ ಅಧಿಕಾರಿಗಳು.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೆಟ್ಟರ್ ನಾಮಪತ್ರ ಸಲ್ಲಿಕೆ

Nomination: ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್, ಬಿಎಸ್ ವೈ, ಗೋವಾ ಸಿಎಂ ಭಾಗಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.