ಗಮನಿಸಿ: ಧಾರಾಕಾರ ಮಳೆಗೆ ರಾಮದುರ್ಗಕ್ಕೆ ಬಸ್ ಸಂಚಾರ ಬಂದ್
Team Udayavani, Oct 21, 2019, 11:20 AM IST
ಬೆಳಗಾವಿ: ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಅನೇಕ ರಸ್ತೆ ಸಂಪರ್ಕಗಳು ಕಡಿತಗೊಂಡಿದ್ದು, ಈ ಹಿನ್ನೆಲೆಯಲ್ಲಿ ರಾಮದುರ್ಗಕ್ಕೆ ಹೋಗುವ ಎಲ್ಲ ಮಾರ್ಗಗಳ ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಸಂಚಾರ ತಡೆ ಹಿಡಿಯಲಾಗಿದೆ.
ಜಿಲ್ಲೆಯಲ್ಲಿ ಈಗ ಮತ್ತೊಮ್ಮೆಪ್ರವಾಹ ಸ್ಥಿತಿ ಎದುರಾಗಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ. ಇನ್ನೂ ಮೂರು ದಿನಗಳ ಸತತ ಮಳೆ ಆಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಧಾರವಾಡ ಜಿಲ್ಲೆಯಲ್ಲಿಯೂ ಅತೀ ಹೆಚ್ಚು ಮಳೆ ಆಗುತ್ತಿರುವುದರಿಂದ ರಾಮದುರ್ಗಕ್ಕೆ ಸಾಗುವ ವಾಹನಗಳನ್ನು ಬಂದ್ ಮಾಡಲಾಗಿದೆ.
ಬೆಳಗಾವಿಯಿಂದ ರಾಮದುರ್ಗ, ರಾಮದುರ್ಗದಿಂದ ಕೊಣ್ಣೂರ, ರಾಮದುರ್ಗದಿಂದ ಕಟಕೋಳ, ಕಟಕೋಳದಿಂದ ಮುನವಳ್ಳಿ, ರಾಮದುರ್ಗದಿಂದ ಮೂಲಂಗಿ, ಸುರೇಬಾನದಿಂದ ಕುಳಗೇರಿಗೆ ಸಾಗುವ ಎಲ್ಲ ಮಾರ್ಗಗಳ ಬಸ್ ಸಂಚಾರವನ್ನು ಬಂದ್ ಮಾಡಿರುವುದಾಗಿ ವಿಭಾಗೀಯ ನಿಯಂತ್ರಾಧಿಕಾರಿ ಎಂ.ಆರ್. ಮುಂಜಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ