ಇ-ಪಾಸ್‌ ಇಲ್ಲದೇ ರಾಜ್ಯ ಪ್ರವೇಶವಿಲ್ಲ

ಗಡಿ ಚೆಕ್‌ಪೋಸ್ಟ್‌ನಲ್ಲಿ ಆದೇಶ ಪಾಲನೆಗೆ ಸೂಚನೆ

Team Udayavani, May 31, 2020, 2:17 PM IST

ಇ-ಪಾಸ್‌ ಇಲ್ಲದೇ ರಾಜ್ಯ ಪ್ರವೇಶವಿಲ್ಲ

ಬೆಳಗಾವಿ: ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುತ್ತಿರುವ ಜನರಲ್ಲಿ ಅತೀ ಹೆಚ್ಚು ಕೋವಿಡ್ ಸೋಂಕು ಪ್ರಕರಣಗಳು ಕಂಡುಬಂದಿದ್ದು, ಇದು ಇನ್ನೂ ಹೆಚ್ಚಳವಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಪ್ರವೇಶಕ್ಕೆ ಇ-ಪಾಸ್‌ ನೀಡಿಕೆಯನ್ನು ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ. ಮುಂಬರುವ ದಿನಗಳಲ್ಲಿ ಇ-ಪಾಸ್‌ ಇಲ್ಲದೇ ಬರುತ್ತಿರುವವರನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು.

ನಿಪ್ಪಾಣಿ ತಾಲೂಕಿನ ಕುಗನೊಳ್ಳಿ ಬಳಿ ಇರುವ ಅಂತಾರಾಜ್ಯ ಚೆಕ್‌ಪೋಸ್ಟ್‌ ಗೆ ಶನಿವಾರ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಅಧಿಕಾರಿಗಳ ಸಭೆ ನಡೆಸಿದ ಅವರು, ಸರ್ಕಾರದ ಮಾರ್ಗಸೂಚಿಯ ಪ್ರಕಾರ ಎಲ್ಲರನ್ನೂ ಕಡ್ಡಾಯವಾಗಿ ತಪಾಸಣೆ ನಡೆಸಿ ಅಗತ್ಯವಿದ್ದರೆ ಕ್ವಾರಂಟೈನ್‌ ಮಾಡಬೇಕು ಎಂದು ನಿರ್ದೇಶನ ನೀಡಿದರು.

ಜಿಲ್ಲಾಡಳಿತ, ಪೊಲೀಸ್‌ ಹಾಗೂ ಆರೋಗ್ಯ ಇಲಾಖೆ ಸೇರಿದಂತೆ ಎಲ್ಲರೂ ಹಗಲಿರುಳು ಉತ್ತಮ ಕೆಲಸ ಮಾಡುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವರು, ಅಂತಾರಾಜ್ಯ ಗಡಿಯ ಚೆಕ್‌ಪೋಸ್ಟ್‌ನಲ್ಲಿ ಕೆಲಸ ಮಾಡುತ್ತಿರುವವರು ಯಾವುದೇ ಒತ್ತಡಕ್ಕೆ ಮಣಿಯದೇ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು.

ಆರೋಗ್ಯ ಸಿಬ್ಬಂದಿಯ ತಪಾಸಣೆ: ಕೋವಿಡ್ ನಿಯಂತ್ರಣ ಹಾಗೂ ಜನರ ತಪಾಸಣೆ ನಡೆಸುತ್ತಿರುವ ಆರೋಗ್ಯ ಸಿಬ್ಬಂದಿಯ ಗಂಟಲು ದ್ರವ ಮಾದರಿಯನ್ನು ಪರಿಶೀಲಿಸಿ ಎಲ್ಲರನ್ನು ಪರೀಕ್ಷೆಗೆ ಒಳಪಡಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಕೆಲಸದ ಅವಧಿಯನ್ನು ಎಂಟು ಗಂಟೆಗೆ ಸೀಮಿತಗೊಳಿಸಿ ಪಾಳೆ ಮಾಡಬೇಕು. ತಕ್ಷಣದಿಂದಲೇ ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿಯ ಆರೋಗ್ಯ ತಪಾಸಣೆ ನಡೆಸಬೇಕು ಎಂದು ಸೂಚನೆ ನೀಡಿದ ಸಚಿವರು, ಚೆಕ್‌ ಪೋಸ್ಟ್‌ನಲ್ಲಿ ಕಲ್ಪಿಸಲಾಗಿರುವ ಸಂಚಾರಿ ವಿಶ್ರಾಂತಿ ಗೃಹವನ್ನು ಪರಿಶೀಲಿಸಿದರು. ಇ-ಪಾಸ್‌ ಪರಿಶೀಲನೆ ಹಾಗೂ ಆರೋಗ್ಯ ತಪಾಸಣೆ ಕೌಂಟರ್‌ ಬಗ್ಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ವಿವರ ನೀಡಿದರು.

ಉಪವಿಭಾಗಾಧಿಕಾರಿ ರವೀಂದ್ರ ಕರಲಿಂಗಣ್ಣವರ ಅವರು ಚೆಕ್‌ಪೋಸ್ಟ್‌ನಲ್ಲಿ ಕ್ವಾರಂಟೈನ್‌ ಮುದ್ರೆ, ದಿನಾಂಕ ಮುದ್ರೆ

ಹಾಗೂ ಥರ್ಮಲ್‌ ಸ್ಕ್ಯಾನರ್‌ ವ್ಯವಸ್ಥೆ ಬಗ್ಗೆ ಮಾಹಿತಿ ನೀಡಿದರು. ರಿಪೋಟಿಂìಗ್‌ ಮಾದರಿಯನ್ನು ಆನ್‌ ಲೈನ್‌ ಮಾಡಿದರೆ ಸಾಕಷ್ಟು ಸಮಯದ ಉಳಿತಾಯವಾಗುತ್ತದೆ. ಅದೇ ರೀತಿ ಇ-ಪಾಸ್‌ ವಿತರಿಸಿದ ಬಳಿಕ ಅದರ ಬಗ್ಗೆ ಚೆಕ್‌ಪೋಸ್ಟ್‌ಗೆ ಮಾಹಿತಿ ನೀಡಿದರೆ ಪ್ರಯಾಣಿಕರ ತಪಾಸಣೆ ಸುಲಭವಾಗಲಿದೆ ಎಂದು ಅಪರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಮರನಾಥ್‌ ರೆಡ್ಡಿ ಮನವಿ ಮಾಡಿದರು.

ವಿಧಾನ ಪರಿಷತ್‌ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಡಿಸಿ ಡಾ| ಎಸ್‌. ಬಿ.ಬೊಮ್ಮನಹಳ್ಳಿ, ರಾಘವೇಂದ್ರ ಸುಹಾಸ್‌, ಬಿ.ಎಸ್‌. ಲೋಕೇಶ್‌ ಕುಮಾರ ಇದ್ದರು.

ಕೋವಿಡ್‌-19 ನಿಯಂತ್ರಣದಲ್ಲಿ ಗಡಿ ಭಾಗದ ಚೆಕ್‌ಪೋಸ್ಟ್‌ ಪಾತ್ರ ಬಹಳ ಪ್ರಮುಖವಾಗಿದೆ. ಸೇವಾ ಸಿಂಧು ಮೂಲಕ ಇ-ಪಾಸ್‌ ಪಡೆದುಕೊಂಡು ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರ ಆರೋಗ್ಯ ತಪಾಸಣೆ ಮೂಲಕ ಅತ್ಯುತ್ತಮ ಕೆಲಸ ಮಾಡಲಾಗುತ್ತಿದೆ. ಆದರೆ ಮಹಾರಾಷ್ಟ್ರದಿಂದ ಬರುವ ಜನರಿಂದ ಸೋಂಕು ಪ್ರಕರಣ ಹೆಚ್ಚಾಗಿರುವ ಕಾರಣ ಕಳೆದ ವಾರದಿಂದ ಇ-ಪಾಸ್‌ ನೀಡುವುದನ್ನು ಸ್ಥಗಿತಗೊಳಿಸಲಾಗಿದೆ. ಮುಂದೆ ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ಕಾರ್ಯ ನಿರ್ವಹಿಸಲಾಗುವುದು. – ಬಸವರಾಜ ಬೊಮ್ಮಾಯಿ, ಗೃಹ ಸಚಿವ

ಟಾಪ್ ನ್ಯೂಸ್

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೆಟ್ಟರ್ ನಾಮಪತ್ರ ಸಲ್ಲಿಕೆ

Nomination: ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್, ಬಿಎಸ್ ವೈ, ಗೋವಾ ಸಿಎಂ ಭಾಗಿ

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.