ಏನು ಮಾಡಿದರೂ ವಿಪಕ್ಷ ಅಧಿಕಾರಕ್ಕೆ ಬರದು: ಸಿಎಂ ಬೊಮ್ಮಾಯಿ
Team Udayavani, Dec 2, 2022, 10:51 PM IST
ರಾಮದುರ್ಗ: ರಾಜ್ಯ ಬಿಜೆಪಿ ಸರಕಾರ ಮಾಡುತ್ತಿರುವ ಅಭಿವೃದ್ಧಿಯನ್ನು ಸಹಿಸದ ಕಾಂಗ್ರೆಸ್, ಏನಾ ದರೂ ವಿಷಯವನ್ನಿಟ್ಟುಕೊಂಡು ಟೀಕಿ ಸುವ ಮೂಲಕ ಸರಕಾರ ಕೈಗೊಂಡ ಅಭಿವೃದ್ಧಿಯನ್ನು ಮರೆಮಾಚಲು ಮುಂದಾಗುತ್ತಿದೆ. ಇದಕ್ಕೆ ನಾವು ಸೊಪ್ಪು ಹಾಕುವ ಮಾತೇ ಇಲ್ಲ. ರಾಜ್ಯದ ಅಭಿವೃದ್ಧಿಯೊಂದೇ ಗುರಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ತಾಲೂಕಿನ ಸಾಲಹಳ್ಳಿ ಗ್ರಾಮದಲ್ಲಿ ತಾಲೂಕಿನ ವಿವಿಧ ಇಲಾಖೆಗಳ 671.28 ಕೋಟಿ ರೂ. ಅನುದಾನದ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ವಿವೇಕ ಹೆಸರಿನಲ್ಲಿ 8 ಸಾವಿರ ಶಾಲಾ ಕೊಠಡಿಗಳನ್ನು ನಿರ್ಮಿಸಿ ಮಕ್ಕಳಿಗೆ ಸುಸಜ್ಜಿತ ಕೊಠಡಿ ಗಳೊಂದಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಕಾರ್ಯಕ್ಕೆ ಮುಂದಾದರೆ ಇದರಲ್ಲಿಯೂ ತಪ್ಪು ಹುಡುಕುವ ಕೆಲಸವನ್ನು ವಿಪಕ್ಷ ನಾಯಕರು ಮಾಡುತ್ತಿದ್ದಾರೆ. ಇವರು ಏನೇ ಮಾಡಿದರೂ ನಾವು ಮಾಡುವ ಕೆಲಸವನ್ನು ನಿಲ್ಲಿಸುವುದಿಲ್ಲ ಎಂದರು.
ಸಾಮಾಜಿಕ ನ್ಯಾಯದ ಹೆಸರಲ್ಲಿ ಹಲವು ಸರಕಾರಗಳು ಬಂದು ಹೋದವೇ ಹೊರತು ಯಾರಿಂದಲೂ ಸಾಮಾಜಿಕ ನ್ಯಾಯ ಒದಗಿಸಲಾಗದೆ ಭಾಷಣಕ್ಕಷ್ಟೇ ಸೀಮಿತವಾದವು. ಆದರೆ ಬಿಜೆಪಿ ಸರಕಾರ ಬಂದ ಮೇಲೆ ಸರ್ವರಿಗೂ ಶಿಕ್ಷಣ, ಉದ್ಯೋಗ ನೀಡುವ ಕೆಲಸ ವನ್ನು ಮಾಡಿ ಸಾಮಾಜಿಕ ನ್ಯಾಯ ದೊರಕಿಸುವ ಕೆಲಸ ಮಾಡಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಆರ್ ಟಿಐ ಕಾರ್ಯಕರ್ತ ಸಾಯಿದತ್ತ ನಿಧನ
ಹಾಲಿ ಶಾಸಕರಿಗೆ ಟಿಕೆಟ್ ಪಕ್ಕಾ: ಆಕಾಂಕ್ಷಿಗಳಲ್ಲಿ ತಳಮಳ
ಹಿರಿಯ-ಕಿರಿಯ ಶಾಲೆಗಳ ವಿಲೀನ ಹತ್ತಿರದಲ್ಲಿರುವ ಶಾಲೆಗಳನ್ನು ಒಂದೆಡೆ ಸೇರಿಸಿ
ದಾವಣಗೆರೆಯಲ್ಲಿ ಕೇಸರಿ ಮಹಾಸಂಗಮ: ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ನಿರ್ಧಾರ
ರಾಜ್ಯಕ್ಕೆ ಬಂಪರ್: ಬಜೆಟ್ನಲ್ಲಿ ನೈಋತ್ಯ ರೈಲ್ವೇಗೆ 9,200 ಕೋ.ರೂ. ಅನುದಾನ
MUST WATCH
ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು
ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ
ಹೊಸ ಸೇರ್ಪಡೆ
ಮೋದಿ ಉತ್ತರಾಧಿಕಾರಿಯಾಗುತ್ತಾರಾ ಯು.ಪಿ ಸಿಎಂ?: ಯೋಗಿ ಆದಿತ್ಯನಾಥ್ ಹೇಳುವುದೇನು?
ದೇಶದ ಮೊದಲ ಪ್ರಕರಣ: ಮಗುವಿನ ನಿರೀಕ್ಷೆಯಲ್ಲಿ ತೃತೀಯ ಲಿಂಗಿ ದಂಪತಿ
ಅಫ್ರಿದಿ ಮಗಳನ್ನು ವರಿಸಿದ ಶಾಹೀನ್ ಅಫ್ರಿದಿ: ಅದ್ಧೂರಿ ವಿವಾಹಕ್ಕೆ ಸಾಕ್ಷಿಯಾದ ಸಹ ಆಟಗಾರರು
ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಆರ್ ಟಿಐ ಕಾರ್ಯಕರ್ತ ಸಾಯಿದತ್ತ ನಿಧನ
ಹಾಕಿ ಕೋಚ್ ಹುದ್ದೆಗೆ ವಿದೇಶಿಯರ ರೇಸ್