ಹಾಲಿಗೆ ಪ್ರೋತ್ಸಾಹಧನ ಹೆಚ್ಚಿಸುವ ಪ್ರಸ್ತಾವ ಇಲ್ಲ:ಸಚಿವ ಸೋಮಶೇಖರ್
Team Udayavani, Dec 20, 2022, 9:25 PM IST
ಸುವರ್ಣವಿಧಾನಸೌಧ: ಹಾಲು ಉತ್ಪಾದಕ ರೈತರಿಗೆ ಪ್ರಸ್ತುತ ನೀಡುತ್ತಿರುವ 5 ರೂ. ಪ್ರೋತ್ಸಾಹ ಧನವನ್ನು ಏರಿಕೆ ಮಾಡುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಸ್ಪಷ್ಟಪಡಿಸಿದ್ದಾರೆ.
ಮಂಗಳವಾರ ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ನ ದಿನೇಶ್ ಗೂಳಿಗೌಡ ಅವರ ಪ್ರಶ್ನೆಗೆ ಉತ್ತರಿಸಿರುವ ಅವರು, ಸದ್ಯಕ್ಕೆ ಹಾಲಿ ಎಲ್ಲ ರೈತರಿಗೆ ನಿಗದಿ ಮಾಡಿದ ದರದಂತೆ ಪ್ರತಿ ಲೀಟರ್ಗೆ ಐದು ರೂ. ನೀಡಲಾಗುತ್ತಿದೆ. ಸಾಮಾನ್ಯ ವರ್ಗದ ಹೈನುಗಾರಿಕೆ ಸೆಪ್ಟೆಂಬರ್, ಅಕ್ಟೋಬರ್ ಮತ್ತು ನವೆಂಬರ್ 2022ರಲ್ಲಿ ಹಾಲಿ ಪ್ರೋತ್ಸಾಹ ಧನ 339.00 ಕೋಟಿ ರೂ. ಬಾಕಿಯಿದೆ. ನವೆಂಬರ್ ತಿಂಗಳಲ್ಲಿ ಪ.ಜಾತಿ ವರ್ಗದ ಹೈನುಗಾರರಿಗೆ 5.00 ಕೋಟಿ ಮತ್ತು ಪ.ಪಂಗಡ ವರ್ಗದ ಹೈನುಗಾರರಿಗೆ 3.00 ಕೋಟಿ ಪಾವತಿ ಬಾಕಿಯಿದೆ. ಮಂಡ್ಯ ಜಿಲ್ಲೆಯಲ್ಲಿ ಸೆಪ್ಟೆಂಬರ್, ಅಕ್ಟೋಬರ್ ಮತ್ತು ನವೆಂಬರ್ ತಿಂಗಳಿನಲ್ಲಿ ರೈತರಿಗೆ 36.55 ಕೋಟಿ ರೂ.ಬಾಕಿ ಪ್ರೋತ್ಸಾಹಧನ ನೀಡಬೇಕಿದೆ ಎಂದು ಹೇಳಿದ್ದಾರೆ.
ಒಕ್ಕೂಟದ ವ್ಯಾಪ್ತಿಯ ಒಟ್ಟು 1276 ಹಾಲು ಉತ್ಪಾದಕರ ಸಹಕಾರ ಸಂಘಗಳ ಪೈಕಿ 777 ಹಾಲು ಉತ್ಪಾದಕರ ಸಹಕಾರ ಸಂಘಗಳು ಸಂತ ಕಟ್ಟಡ ಹೊಂದಿದ್ದು, ಉಳಿದ 499 ಸಂಘಗಳು ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ಮಂಡ್ಯ ಹಾಲು ಒಕ್ಕೂಟವು 2022-23ನೇ ಸಾಲಿನಲ್ಲಿ ನ.- 2022ರಲ್ಲಿ ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ಸರಾಸರಿ 8,99,048 ಲೀಟರ್ಹಾಲನ್ನು ರೈತರಿಂದ ಖರೀದಿಸಲಾಗಿದೆ ಎಂದು ಉತ್ತರ ನೀಡಿದ್ದಾರೆ.
aಶೀಘ್ರವಾಗಿ ಪ್ರೋತ್ಸಾಹ ಧನವನ್ನು ನೇರವಾಗಿ ಹಾಲು ಉತ್ಪಾದಕರ ಆಧಾರ್ ಜೋಡಣೆ ಬ್ಯಾಂಕ್ ಖಾತೆಗೆ ಪಾವತಿಸಲು ಕ್ರಮ. ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ