ನಿಲ್ಲದ ರೈತರ ಅಹೋರಾತ್ರಿ ಧರಣಿ
ರೈತರ ಹೋರಾಟಕ್ಕೆ ಶಾಸಕ ಕುಮಠಳ್ಳಿ ಬೆಂಬಲ•ಸ್ಥಳಕ್ಕೆ ಜಿಲ್ಲಾಧಿಕಾರಿ ಬರುವಂತೆ ಪಟ್ಟು
Team Udayavani, May 6, 2019, 3:31 PM IST
ಅಥಣಿ: ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಹರಿಸುವಂತೆ ಒತ್ತಾಯಿಸಿ ಅಥಣಿ ತಾಲೂಕಿನ ದರೂರ ಕೃಷ್ಣಾ ನದಿ ದಡದ ಮೇಲೆ ರೈತ ಸಂಘಟನೆ ನಡೆಯುತ್ತಿರುವ ಅಹೋರಾತ್ರಿ ಧರಣಿ 4ನೇ ದಿನಕ್ಕೆ ಕಾಲಿರಿಸಿತು.
ಅಹೋರಾತ್ರಿ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಅಥಣಿ ಶಾಸಕ ಮಹೇಶ ಕುಮಠಳ್ಳಿ ಬೆಂಬಲ ನೀಡಿ ಅವರು ಮಾತನಾಡಿ, ತಾಲೂಕಿನ ಅವರಖೋಡ ಗ್ರಾಮದ ಹತ್ತಿರ ಕೃಷ್ಣಾ ನದಿಗೆ ಅಡ್ಡಲಾಗಿ ಬ್ಯಾರೆಜ್ ನಿರ್ಮಾಣ ಮಾಡಿ ನೀರು ಸಂಗ್ರಹಿಸಿದಾಗ ಮಾತ್ರ ಅಥಣಿ ಮತಕ್ಷೇತ್ರದ ಜನ-ಜಾನುವಾರು ಹಾಗೂ ರೈತರ ಬವಣೆ ನೀಗಿಸಲು ಸಾಧ್ಯವಾಗುತ್ತದೆ ಎಂದರು.
ಪ್ರತಿ ವರ್ಷ ನೀರಿಗಾಗಿ ಹಾಹಾಕಾರ ಉಂಟಾಗಿ ಟ್ಯಾಂಕರ್ ಮೂಲಕ ನೀರನ್ನು ಒದಗಿತ್ತಾ ಬರಲಾಗುತ್ತಿದ್ದರೂ ಸಹ ಸಮರ್ಪಕ ನೀರಿನ ವ್ಯವಸ್ಥೆ ಆಗುತ್ತಿಲ್ಲ. ಆದ್ದರಿಂದ ಅವರಖೋಡ ಬಳಿ ಬ್ಯಾರೆಜ್ ನಿರ್ಮಾಣ ಮಾಡುವುದರಿಂದ ಅಥಣಿ ಪಟ್ಟಣದ 60 ಸಾವಿರ ಜನಸಂಖ್ಯೆ ಹಾಗೂ ತಾಲೂಕಿನ ಸುಮಾರು 35 ಗ್ರಾಮಗಳ ಜನ ವಸತಿಗಳಲ್ಲಿ ಸುಮಾರು 2 ಲಕ್ಷ ಜನರಿಗೆ ನೀರನ್ನು ಒದಗಿಸಬಹುದಾಗಿದೆ. ಸೋಮವಾರ ಬೆಳಗಾವಿಗೆ ಸಚಿವ ಡಿ.ಕೆ.ಶಿವಕುಮಾರ ಆಗಮಿಸಲಿದ್ದು, ಅವರ ಗಮನಕ್ಕು ತರುವುದಾಗಿ ತಿಳಿಸಿದರು.
ಈ ವೇಳೆ ರೈತ ಸಂಘದ ತಾಲೂಕಾಧ್ಯಕ್ಷ ಮಹಾದೇವ ಮಡಿವಾಳ ಮಾತನಾಡಿ, ಜಿಲ್ಲಾಧಿಕಾರಿಗಳು ರೈತರು ನಡೆಸುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಬಂದು ಕೃಷ್ಣಾ ನದಿಗೆ ನೀರನ್ನು ಹರಿಸುವ ಕುರಿತು ನಿಖರ ಮಾಹಿತಿ ನೀಡುವವರೆಗೂ ಧರಣಿ ಸತ್ಯಾಗ್ರಹವನ್ನು ನಾವು ಹಿಂದಕ್ಕೆ ಪಡೆಯುವುದಿಲ್ಲ ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಸತೀಷ ಕುಲಕರ್ಣಿ, ವಿನಯ ಪಾಟೀಲ ಕುಮಾರ ಮಡಿವಾಳ, ಮಹಾದೇವ ಕುಚನೂರ, ಮೋದಿನ ಮೋಳೆ, ಮುರೇಘಪ್ಪ ಬೂರಾಗ, ಹನುಮಂತ ನಾಯಿಕ ಸೇರಿದಂತೆ ಅನೇಕ ರೈತರು ಮತ್ತು ಗ್ರಾಮಸ್ಥರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ