ಸಾಲ ತುಂಬಿದರೂ ನೋಟಿಸ್
Team Udayavani, Jan 22, 2020, 4:14 PM IST
ಗೋಕಾಕ: ಟ್ರ್ಯಾಕ್ಟರ್ ಮೇಲೆ ಪಡೆದಿದ್ದ ಸಾಲ ಪಾವತಿಯಾಗಿದ್ದರೂ ಸಾಲ ಬಾಕಿ ಇದೆ ಎಂದು ನೋಟಿಸ್ ನೀಡಿದ ಬ್ಯಾಂಕಿನ ಕ್ರಮ ಖಂಡಿಸಿ ರೈತ ಸಂಘದವರು ಬ್ಯಾಂಕಿನ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಿದರು.
ನಗರದ ಸಿಂಡಿಕೇಟ್ ಬ್ಯಾಂಕಿನ ಮುಂದೆ ಜಮಾಯಿಸಿದ ರೈತ ಸಂಘದ ಕಾರ್ಯಕರ್ತರು ಬ್ಯಾಂಕಿನ ವಿರುದ್ಧ ಘೋಷಣೆ ಕೂಗಿ, ಬ್ಯಾಂಕ್ ಅಧಿಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯಲ್ಲಿ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಭೀಮಶಿ ಗದಾಡಿ ಮಾತನಾಡಿ, ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಮಹೇಶ ಹೊರಟ್ಟಿ ಎಂಬ ರೈತ 2005ರಲ್ಲಿ ಟ್ರ್ಯಾಕ್ಟರ್ ಮೇಲೆ ಸಾಲ ಪಡೆದು ಮರಳಿ ಸಾಲ ಪಾವತಿ ವಿಳಂಬವಾಗಿದ್ದರಿಂದ ಬ್ಯಾಂಕಿನವರು ಟ್ರ್ಯಾಕ್ಟರ್ ಹಾಗೂ ಟ್ರೇಲರ್ ಜಪ್ತಿ ಮಾಡಿ 2008ರಲ್ಲಿ ಬಹಿರಂಗ ಹರಾಜಿನಲ್ಲಿ ಮಾರಾಟ ಮಾಡಿ ಸಾಲ ಪಾವತಿಸಿಕೊಂಡು ಬಾಕಿ ಹಣವನ್ನು ರೈತನ ಖಾತೆಗೆ ಜಮೆ ಮಾಡಿದ್ದಾರೆ. ಆದರೆ ಕಳೆದ ಡಿ. 19ರಂದು ರೈತನಿಗೆ ಬಾಕಿ ಸಾಲವಿದ್ದು, ಬೃಹತ್ ಸಿಂಡ್ ಅದಾಲತ್ (ರಿಕವರಿ ಕ್ಯಾಂಪ್)ನಲ್ಲಿ ಒಂದೇ ಕಂತಿನ ರಿಯಾಯತಿಯಲ್ಲಿ ತುಂಬಲು ಅನುಕೂಲವಿದೆ ಎಂದು ಬ್ಯಾಂಕಿನವರು ರೈತನಿಗೆ ನೋಟಿಸ್ ನೀಡಿದ್ದು ಖಂಡನೀಯವಾಗಿದೆ ಎಂದರು.
ರೈತ ಮಹೇಶ ಹೊರಟ್ಟಿ ಮಾತನಾಡಿ, ಬ್ಯಾಂಕಿನಲ್ಲಿ 4.90 ಲಕ್ಷ ರೂ. ಟ್ರ್ಯಾಕ್ಟರ್ ಮೇಲೆ ಸಾಲ ಪಡೆದಿದ್ದೆ, ಬ್ಯಾಂಕಿನವರು ಟ್ರ್ಯಾಕ್ಟರ್ ಜತೆ ಟ್ರೇಲರ್ ಕೂಡಾ ಜಪ್ತಿ ಮಾಡಿ, 2008ರಲ್ಲಿ ಬಹಿರಂಗ ಹರಾಜಿನಲ್ಲಿ ಟ್ರ್ಯಾಕ್ಟರ್ ಮತ್ತು ಟ್ರೇಲರ್ ಮಾರಾಟ ಮಾಡಿ ಸಾಲ ತುಂಬಿಕೊಂಡು ಉಳಿದ ಹಣವನ್ನು ನಮ್ಮ ಖಾತೆಗೆ ಜಮಾ ಮಾಡಿದ್ದರು. ಈಗ ನನ್ನ ಹೆಸರಿನಲ್ಲಿ ಸಾಲವಿದೆ ಎಂದು ನೋಟಿಸ್ ನೀಡಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತ ಪಡಿಸಿದರು.
ಪ್ರತಿಭಟನೆಯಲ್ಲಿ ತಾಲೂಕಾಧ್ಯಕ್ಷ ಮುತ್ತೆಪ್ಪ ಬಾಗನ್ನವರ, ಮುಖಂಡರಾದಮಹಾದೇವ ಗೋಡೇರ, ಶಂಕರ ಮದಿಹಳ್ಳಿ, ಪ್ರಕಾಶ ಹಾಲನ್ನವರ, ಶಿವು ಪಾಟೀಲ, ಮುತ್ತೆಪ್ಪ ಮದಿಹಳ್ಳಿ, ಹೊಳೆಪ್ಪ ಉದ್ಯಾಗೋಳ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
MUST WATCH
ಹೊಸ ಸೇರ್ಪಡೆ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ