ಮಾಂಸ ವ್ಯಾಪಾರಸ್ಥರ ಬದುಕಿಗೆ ನೋಟಿಸ್‌ ಬರೆ


Team Udayavani, Sep 14, 2019, 11:19 AM IST

bg-tdy-2

ಬೆಳಗಾವಿ: ಮಾಂಸದ ಅಂಗಡಿಗೆ ಬೀಗ ಹಾಕಿರುವುದು.

ಬೆಳಗಾವಿ: ತಲೆ ತಲಾಂತರದಿಂದ ಮಾಂಸದ ಅಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದ ಕುರಿ, ಕೋಳಿ, ಆಡು, ಮೇಕೆ ಮಾಂಸದ ಅಂಗಡಿಗಳನ್ನು ಮುಚ್ಚುವಂತೆ ಬಂದಿರುವ ನೋಟಿಸ್‌ ಈಗ ವ್ಯಾಪಾರಸ್ಥರ ಉದ್ಯೋಗಕ್ಕೆ ಬರೆ ಎಳೆದಿದ್ದು, ವ್ಯಾಪಾರಿಗಳು ಚಿಂತಾಕ್ರಾಂತರಾಗಿದ್ದಾರೆ.

ಬೆಳಗಾವಿ ತಾಲೂಕಿನ ಸಾಂಬ್ರಾ ವಿಮಾನ ನಿಲ್ದಾಣ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಮಾಂಸ ಮಾರಾಟದಿಂದ ಪಕ್ಷಿಗಳ ಹಾರಾಟದ ಹೆಚ್ಚಿದ್ದು ವಾಯು ಸಂಚಾರಕ್ಕೆ ಅಡ್ಡಿಯುಂಟು ಮಾಡಬಹುದು ಎಂದು ಸುಮಾರು 10 ಕಿಮೀ ವ್ಯಾಪ್ತಿಯ ಕುರಿ, ಮೇಕೆ, ಆಡು, ಕೋಳಿ ಮಾಂಸದ ಅಂಗಡಿಗಳನ್ನು ಬಂದ್‌ ಮಾಡುವಂತೆ ಆದೇಶ ಬಂದಿದೆ.

ಈಗ ಉದ್ಯೋಗ ಕಳೆದುಕೊಳ್ಳುವ ಭೀತಿ ಮಾಂಸದ ವ್ಯಾಪಾರಿಗಳನ್ನು ಕಾಡುತ್ತಿದೆ. ಬ್ರಿಟಿಷರ ಕಾಲದಿಂದಲೂ ಈ ಭಾಗದಲ್ಲಿ ಉದ್ಯೋಗ ನಡೆಸಿಕೊಂಡು ಬದುಕು ಸಾಗಿಸುತ್ತಿರುವ ವ್ಯಾಪಾರಿಗಳು ಮುಂದೆ ಹೋಗುವುದಾದರೂ ಎಲ್ಲಿ ಎಂಬ ಪ್ರಶ್ನೆ ಅವರನ್ನು ಕಾಡುತ್ತಿದೆ.

ಸಾಂಬ್ರಾದಲ್ಲಿ ವಾಯು ಸೇನೆ ತರಬೇತಿ ಕೇಂದ್ರ ಹಾಗೂ ವಿಮಾನ ನಿಲ್ದಾಣ ಜೊತೆಯಾಗಿಯೇ ಇವೆ. ಅನೇಕ ವರ್ಷಗಳಿಂದ ಈ ಭಾಗದಲ್ಲಿ ವಿಮಾನ ಹಾರಾಟ ಇದೆ. ಈಗ ಕೆಲವು ತಿಂಗಳುಗಳಿಂದ ಉಡಾನ್‌ 3ರ ಯೋಜನೆಯಡಿ ಮೂರ್‍ನಾಲ್ಕು ವಿಮಾನ ಹಾರಾಟ ಸೇವೆ ಶುರುವಾಗಿವೆ. ವಿಮಾನ ಹಾರಾಟದ ವೇಳೆ ಪಕ್ಷಿಗಳ ಪ್ರಾಣಹಾನಿ ಹಾಗೂ ವಿಮಾನ ಸಂಚಾರಕ್ಕೆ ಅಡಚಣೆ ಆಗುತ್ತಿದೆ ಎಂಬ ಉದ್ದೇಶದಿಂದ ವಿಮಾನ ನಿಲ್ದಾಣ ಪ್ರಾಧಿಕಾರ ಮಾಂಸ ಅಂಗಡಿಗಳನ್ನೇ ನಿಷೇಧಿಸುವ ಮೂಲಕ ಆದೇಶ ಹೊರಡಿಸಿದ್ದರಿಂದ ವ್ಯಾಪಾರಿಗಳ ಬದುಕು ಅತಂತ್ರವಾಗಿದೆ.

ಸಾರ್ವಜನಿಕವಾಗಿ ಹಾಗೂ ವಿಮಾನ ಹಾರಾಟದ ವೇಳೆ ಯಾವುದೇ ಸಮಸ್ಯೆ ಇಲ್ಲದೇ ಈ ಭಾಗದಲ್ಲಿ ವ್ಯಾಪಾರ ಮಾಡಿ ಜೀವನ ನಡೆಸುತ್ತಿದ್ದ ಸುಮಾರು 20ಕ್ಕೂ ಹೆಚ್ಚು ಕುಟುಂಬಗಳ ಪಾಲಿಗೆ ಈ ಆದೇಶ ಭೂತದಂತೆ ಕಾಡುತ್ತಿದೆ. ಸುಮಾರು ಒಂದು ವಾರದಿಂದ ಅಂಗಡಿಗಳನ್ನು ಬಂದ್‌ ಮಾಡಿ ಕಚೇರಿಗಳನ್ನು ಅಲೆದಾಡುತ್ತಿದ್ದಾರೆ. ಹೇಗಾದರೂ ಮಾಡಿ ಅಂಗಡಿ ಆರಂಭಿಸುವಂತೆ ಅಧಿಕಾರಿಗಳ ಬಳಿ ಬೇಡಿಕೊಳ್ಳುತ್ತಿದ್ದಾರೆ.

ಮಾಂಸದ ತ್ಯಾಜ್ಯ ಹಾಗೂ ಕಸವನ್ನು ರಸ್ತೆ ಮೇಲೆ ಚೆಲ್ಲಾಡದೇ ನೇರವಾಗಿ ವಾಹನದಲ್ಲಿ ಹಾಕಿ ದೂರದ ತುರಮುರಿ ಕಸ ವಿಲೇವಾರಿ ಘಟಕಕ್ಕೆ ಸ್ಥಳಾಂತರ ಮಾಡಲಾಗುವುದು. ಅಂಗಡಿ ಆರಂಭಿಸಲು ಅನುಮತಿ ನೀಡುವಂತೆ ಮಾಂಸ ವ್ಯಾಪಾರಿಗಳ ಒತ್ತಾಯವಾಗಿದೆ.

ಒಂದು ವೇಳೆ ಅಂಗಡಿಗಳು ಬಂದ್‌ ಮಾಡಿ ಬಿಟ್ಟರೆ ಈ ಭಾಗದ ಜನರು ಸುಮಾರು 15-20 ಕಿ.ಮೀ. ದೂರದ ಬೆಳಗಾವಿ ನಗರಕ್ಕೆ ಹೋಗಿ ಮಾಂಸ ಖರೀದಿಸಬೇಕಾಗುತ್ತದೆ. ವಾರಕ್ಕೊಮ್ಮೆ ಮಾಂಸ ತಿನ್ನುವವರ ಸಂಖ್ಯೆ ಜಾಸ್ತಿ ಇರುವುದರಿಂದ ಅಷ್ಟು ದೂರದವರೆಗೆ ಹೋಗಿ ಖರೀದಿ ಮಾಡುವುದು ಅಸಾಧ್ಯ. ಜಿಲ್ಲಾಡಳಿತ ಸಾರ್ವಜನಿಕರು ಹಾಗೂ ವ್ಯಾಪಾರಸ್ಥರ ಹಿತದೃಷ್ಟಿಯಿಂದ ವ್ಯಾಪಾರ ನಡೆಸಲು ಅನುಕೂಲ ಮಾಡಿಕೊಡಬೇಕು ಎನ್ನುತ್ತಾರೆ ಕಾಂಗ್ರೆಸ್‌ ಮುಖಂಡ ನಾಗೇಶ ದೇಸಾಯಿ.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಂದ ಅಂಗಡಿಕಾರರಿಗೆ ನೋಟಿಸ್‌ ಬಂದಾಗಿನಿಂದ ಬಹುತೇಕ ಎಲ್ಲ ಅಂಗಡಿಗಳಿಗೆ ಬೀಗ ಬಿದ್ದಿದೆ. ಒಂದು ವೇಳೆ ಅಂಗಡಿಗಳನ್ನು ಬಂದ್‌ ಮಾಡುವುದೇ ಇದ್ದರೆ ವ್ಯಾಪಾರಿಗಳಿಗೆ ಬದುಕಲು ನೌಕರಿ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

2-news

Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್‌‌ ಚೆಲ್ಲಾಪಿಲ್ಲಿ

Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ

Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

Online Bitcoin Gambling Enterprises: An Overview to Betting with Cryptocurrency

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.