ಆನ್‌ಲೈನ್‌ ಬೋಧನೆ; ಗ್ರಾಮೀಣ ವಿದ್ಯಾರ್ಥಿಗಳ ಪರದಾಟ


Team Udayavani, May 7, 2020, 4:24 PM IST

ಆನ್‌ಲೈನ್‌ ಬೋಧನೆ; ಗ್ರಾಮೀಣ ವಿದ್ಯಾರ್ಥಿಗಳ ಪರದಾಟ

ಅಥಣಿ: ಕೋವಿಡ್ 19 ವೈರಸ್‌ ಹಾವಳಿಯಿಂದ ಕರ್ನಾಟಕದಾದ್ಯಂತ ಲಾಕ್‌ಡೌನ್‌ ಜಾರಿಯಿಂದಾಗಿ ಬಹುತೇಕ ವಿಶ್ವವಿದ್ಯಾಲಯಗಳು ಈಗ ಅನಿವಾರ್ಯವಾಗಿ ಆನ್‌ಲೆ„ನ್‌ ತರಗತಿಗಳ ಮೊರೆ ಹೋಗಿವೆ. ಆದರೆ ಗ್ರಾಮೀಣ ಪ್ರದೇಶದ ಹಲವಾರು ವಿದ್ಯಾರ್ಥಿಗಳು ಇಂಟರ್‌ನೆಟ್‌, ಡಾಟಾ ಕೊರತೆಯಿಂದ ಆನಲೆ„ನ್‌ ತರಗತಿಗಳ ಪ್ರಯೋಜನ ಪಡೆಯದೆ ಪರದಾಡುವಂತಾಗಿದೆ.

ಕೋವಿಡ್ 19 ವೈರಸ್‌ ಹರಡದಂತೆ ರಾಜ್ಯದಲ್ಲಿ ಮುಂಜಾಗ್ರತಾ ಕ್ರಮವಾಗಿ ಲಾಕ್‌ಡೌನ್‌ ಜಾರಿ ಮಾಡಿರುವುದರಿಂದ ಎಲ್ಲಾ ಕಾಲೇಜುಗಳಿಗೆ ರಜೆ ನೀಡಲಾಗಿದ್ದು ವಿದ್ಯಾರ್ಥಿಗಳಿಗೆ ಆ್ಯಪ್‌ ಮೂಲಕ ಪ್ರಾಧ್ಯಾಪಕರು ಬೋಧನೆ ಮಾಡುತ್ತಿದ್ದಾರೆ. ಆದರೆ ಇದರ ಲಾಭ ಗ್ರಾಮೀಣ ಪ್ರದೇಶದಲ್ಲಿನ ಸಾವಿರಾರು ವಿದ್ಯಾರ್ಥಿಗಳಿಗೆ ಸಿಗುತ್ತಿಲ್ಲ. ಸ್ಮಾರ್ಟ್‌ ಫೋನ್‌ ಇದ್ದರೂ ಇಂಟರ್‌ನೆಟ್‌ ಸಮಸ್ಯೆಯಿಂದಾಗಿ ಸಾವಿರಾರು ವಿದ್ಯಾರ್ಥಿಗಳು ಸರಿಯಾದ ಬೋಧನೆ ಪಡೆಯದೆ ಚಿಂತಾಕ್ರಾಂತರಾಗಿದ್ದಾರೆ.

ಒಂದು ಕಡೆ ಇಂಟರ್‌ನೆಟ್‌ ಸಮಸ್ಯೆಯಾದರೆ ಇನ್ನೊಂದು ಕಡೆ ಜೂನ್‌ ತಿಂಗಳಿನಲ್ಲಿ ಪದವಿ ಸ್ನಾತಕೋತರ ಅಂತಿಮ ಹಾಗೂ ಇತರೇ ತರಗತಿಗಳ ವಾರ್ಷಿಕ ಪರೀಕ್ಷೆ ನಡೆಸುವುದಾಗಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಿಂದ ಮಾಹಿತಿ ಬಂದಿರುವುದರಿಂದ ವಿದ್ಯಾರ್ಥಿಗಳಲ್ಲಿ ಕೊರೊನಾ ವೈರಸ್‌ಗಿಂತ ಪರೀಕ್ಷೆ ಬರೆಯುವ ಭಯ ಹೆಚ್ಚಾಗಿದೆ.

ಮುಖ್ಯವಾಗಿ ಅಥಣಿ ತಾಲೂಕಿನಲ್ಲಿ ಬಿ.ಎ, ಬಿ.ಕಾಮ್‌, ಬಿ.ಎಸ್ಸಿ, ಬಿ.ಬಿ.ಎ, ಬಿ.ಸಿ.ಎ, ಬಿ.ಎಡ್‌, ಎಮ್‌.ಎ, ಎಮ್‌.ಕಾಮ್‌, ಸೇರಿದಂತೆ ಇತರೆ ಕೋರ್ಸ್ ಗಳ ಕಾಲೇಜುಗಳಿದ್ದು ಸುಮಾರು ಒಂಭತ್ತು ಸಾವಿರಕ್ಕಿಂತಲೂ ಅಧಿಕ ವಿವಿಧ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿದ್ದಾರೆ. ಅದರಲ್ಲಿ ಸುಮಾರು ಶೇ.70 ರಷ್ಟು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿದ್ದಾರೆ. ಇವರೆಲ್ಲರಿಗೂ ಈಗ ಆನಲೈನ್‌ ನಲ್ಲಿ ಆಡಿಯೋ, ವಿಡಿಯೋ ಮೂಲಕ ಪಾಠ ಮಾಡಲಾಗುತ್ತಿದೆ. ಇದಲ್ಲದೆ ಪ್ರಾಧ್ಯಾಪಕರು ವಾಟ್ಸ್‌ ಆ್ಯಪ್‌ ಮೂಲಕ ನೋಟ್ಸ್‌ ನೀಡುತ್ತಿದ್ದಾರೆ. ಆದರೆ ವಾಣಿಜ್ಯ ಹಾಗೂ ವಿಜ್ಞಾನ ವಿಭಾಗದ ಪ್ರಾಯೋಗಿಕ (ಪ್ರಾಕ್ಟಿಕಲ್‌) ಅಧ್ಯಾಯಗಳು ಸರಿಯಾಗಿ ಅರ್ಥವಾಗುತ್ತಿಲ್ಲ ಎಂಬುದು ವಿದ್ಯಾರ್ಥಿಗಳ ಆತಂಕ. ಲಾಕ್‌ಡೌನ್‌ ಆದೇಶ ಜಾರಿಯಲ್ಲಿರುವುದರಿಂದ ಅನಿವಾರ್ಯವಾಗಿ ಆನ್‌ಲೈನ್‌ ಬೊಧನೆ ಆರಂಭಿಸಲಾಗಿದೆ.

ಈಗಾಗಲೇ ಬಹುತೇಕ ಶಿಕ್ಷಣ ಸಂಸ್ಥೆಗಳು ಈ ರೀತಿಯ ಬೋಧನೆಗೆ ಚಾಲನೆ ನೀಡಿವೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ನೆಟ್‌ ವರ್ಕ್‌, ಡಾಟಾ ಸಮಸ್ಯೆ ಇರುವುದು ನಿಜ. ಆದರೆ ಈಗ ವಿದ್ಯಾರ್ಥಿಗಳು ಹೊಂದಾಣಿಕೆ ಮಾಡಿಕೊಂಡು ಆನ್‌ಲೈನ್‌ ತರಗತಿಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂಬುದು ರಾಚವಿ ಕುಲಪತಿಗಳ ಹೇಳಿಕೆ.

ಹಲವಾರು ಸಮಸ್ಯೆಗಳ ನಡುವೆ ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕಾಗಿ ಉನ್ನತ ಹಂತದ ಅಧಿಕಾರಿಗಳು ಚರ್ಚಿಸಿ ಸೂಕ್ತ ನಿರ್ಣಯಗಳನ್ನು ತೆಗೆದುಕೊಂಡು ನಮ್ಮ ಆತಂಕ ದೂರ ಮಾಡಬೇಕು. -ಮಹಾದೇವ ರೋಕಡಿ, ಪಾಲಕರು, ಅಥಣಿ

ನಮ್ಮ ಹಳ್ಳಿಯಲ್ಲಿ ಸರಿಯಾದ ನೆಟ್‌ವರ್ಕ್‌ ಇಲ್ಲ. ಅನಿವಾರ್ಯವಾಗಿ ಮೊಬೆ„ಲ್‌ನ್ನು ಗಂಟೆಗಟ್ಟಲೇ ಕೈಯಲ್ಲಿ ಹಿಡಿದು ಕುಳಿತು ಕೊಳ್ಳಬೇಕಾಗುವುದರಿಂದ ಬಾಕಿ ಕೆಲಸಗಳನ್ನು ಮಾಡಲಾಗುತ್ತಿಲ್ಲ. -ಪ್ರಶಾಂತ ತೇಲಿ, ವಿದ್ಯಾರ್ಥಿ, ಚಮಕೇರಿ

ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಬೋಧನೆ ಮಾಡಬೇಕು ಎಂಬ ಕೇಂದ್ರ ಸರ್ಕಾರದ ನಿರ್ದೇಶನದಂತೆ ಈಗಾಗಲೇ ತರಗತಿಗಳು ಆರಂಭಗೊಂಡಿವೆ. ಮೊದಲು ವಿದ್ಯಾರ್ಥಿಗಳಿಗೆ ಸಮಸ್ಯೆ ಆಗಿತ್ತು. ಆದರೆ ಈಗ ಶೇ. 70ರಿಂದ 80ರಷ್ಟು ಈ ಆನ್‌ಲೈನ್‌ ಪ್ರಕ್ರಿಯೆ ಚೆನ್ನಾಗಿ ನಡೆದಿದೆ. -ಪ್ರೊ| ಎಂ. ರಾಮಚಂದ್ರಗೌಡ, ಕುಲಪತಿ ರಾಣಿ ಚನ್ನಮ್ಮ ವಿವಿ

 

­-ಸಂತೋಷ ರಾ ಬಡಕಂಬಿ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.