ಕೀಟ ನಿರ್ವಹಣೆಗೆ ಆನ್ಲೈನ್ ತರಬೇತಿ
Team Udayavani, Jun 1, 2020, 12:21 PM IST
ಮೂಡಲಗಿ: ಅರಭಾವಿಯ ಜಿಲ್ಲಾ ಕೃಷಿ ಕೇಂದ್ರದಿಂದ ಜೂ.1ರಂದು ಬೆಳಿಗ್ಗೆ 11ಕ್ಕೆ ಮುಂಗಾರು ಬೆಳೆಗಳಲ್ಲಿ ಸಮಗ್ರ ಕೀಟ ನಿರ್ವಹಣೆ ಹಾಗೂ ಮಿಡತೆಗಳ ನಿರ್ವಹಣೆಯ ಕ್ರಮಗಳ ಕುರಿತು ಬಾಗಲಕೋಟೆ ತೋಟಗಾರಿಕೆ ವಿವಿ ಕೀಟಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ| ರಾಮನಗೌಡ ಎಚ್. ಉಪನ್ಯಾಸ ನೀಡುವರು.
ಮಧ್ಯಾಹ್ನ 12ಕ್ಕೆ ಮುಂಗಾರು ಬೆಳೆಗಳಲ್ಲಿ ಬೀಜೋಪಚಾರ ಹಾಗೂ ಅದರ ಮಹತ್ವ ಕುರಿತು ಅರಬಾವಿಯ ತೋಟಗಾರಿಕೆ ಮಹಾವಿದ್ಯಾಲಯದ ಬೀಜ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ದಿಲೀಪ ಮಸೂತಿ ಉಪನ್ಯಾಸ ನೀಡುವರು. ಆನ್ಲೈನ್ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಲು ಜೂಮ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಬೇಕು. ಇಲಾಖೆಯ ಸಂಪರ್ಕದಲ್ಲಿರುವ ರೈತರಿಗೆ ಆನ್ಲೈನ್ ಸಂಪರ್ಕವನ್ನು ಕಲ್ಪಿಸಿಕೊಡಲಾಗುವುದು. ಅಧಿಕ ಮಾಹಿತಿಗಾಗಿ ಮೊ.8147276159 ಸಂಪರ್ಕಿಸಲು ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಜಿಲಾನಿ ಮೋಕಾಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ