ಬೆಳಗಾವಿ ಗ್ರಾಮೀಣದಲ್ಲಿ ಸಾಹುಕಾರರ ಆಪರೇಷನ್ ಸಕ್ಸಸ್ : ಹೆಬ್ಬಾಳಕರ್ ಕೋಟೆಯಲ್ಲಿ ರಣತಂತ್ರ
Team Udayavani, Dec 24, 2020, 12:56 PM IST
ಬೆಳಗಾವಿ: ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಗೋಕಾಕ ಸಾಹುಕಾರ, ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರು ಸದ್ದಿಲ್ಲದೆ ಮತ್ತೊಂದು ಆಪರೇಷನ್ ಮಾಡಿದ್ದು, ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಾರಿಹಾಳ ಗ್ರಾಮ ಪಂಚಾಯತಿಯ ಐವರು ಸದಸ್ಯರನ್ನು ಅವಿರೋಧವಾಗಿ ಆಯ್ಕೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿಂಡಲಗಾ, ಉಚಗಾಂವ, ಬೆಳಗುಂದಿ, ತುರಮರಿ ಸೇರಿದಂತೆ ಹಲವಾರು ಗ್ರಾಮಗಳಲ್ಲಿ ತಮ್ಮ ಪ್ರಾಬಲ್ಯ ಹೊಂದಿರುವ ಸಚಿವ ರಮೇಶ್ ಜಾರಕಿಹೊಳಿ, ಐವರು ಸದಸ್ಯರನ್ನು ಇಂದು ಮಾರಿಹಾಳ ಗ್ರಾಮ ಪಂಚಾಯತ್ ಗೆ ಅವಿರೋಧವಾಗಿ ಆಯ್ಕೆಮಾಡಿದ್ದಾರೆ.
ಆಯ್ಕೆಯಾದ ಬಸವರಾಜ ಮಾದಮ್ಮನವರ, ಮಲ್ಲವ್ವ ಕುಳ್ಳನ್ನವರ, ರೇಖಾ ತಳವಾರ, ಗಂಗವ್ವ ಅಮಾತಿ ಹಾಗೂ ತೌಸೀಫ ಫಣಿಬಂಧ ಅವರು ಸಚಿವ ರಮೇಶ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಧನ್ಯವಾದ ಅರ್ಪಿಸಿದರು.
ಇದನ್ನೂ ಓದಿ:ಜಿಲ್ಲಾ ಕೇಂದ್ರದ ಹೈಟೆಕ್ ಗ್ರಂಥಾಲಯ ಕಾಮಗಾರಿಗೆ ಗ್ರಹಣ
ಗ್ರಾಮ ಪಂಚಾಯತ್ ಚುನಾವಣೆಗಳಲ್ಲಿ ಗೆಲ್ಲುವ ಮೂಲಕ ಮುಂಬರುವ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಅಖಾಡ ಸಿದ್ದಗೊಳಿಸುತ್ತಿರುವ ಸಚಿವ ರಮೇಶ್ ಜಾರಕಿಹೊಳಿ, ಎದುರಾಳಿಗಳಲ್ಲಿ ನಡುಕ ಹುಟ್ಟಿಸಿದ್ದಾರೆ. ಗ್ರಾಮಪಂಚಾಯತ್ ಚುನಾವಣೆಗೆ ಬಹುತೇಕ ಅಭ್ಯರ್ಥಿಗಳು ಇವರ ಸಹಾಯದಿಂದಲೇ ಸ್ಪರ್ಧಿಸಿದ್ದು, ಫಲಿತಾಂಶ ಬಂದ ಬಳಿಕ ಇವರ ಪ್ರಾಬಲ್ಯ ಇನ್ನಷ್ಟು ಹಚ್ಚಾಗುವ ಸಾಧ್ಯತೆಗಳಿವೆ .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ