ಚನಮ್ನ ವಿವಿ ಸ್ಥಳಾಂತರಕ್ಕೆ ವಿರೋಧ
Team Udayavani, Oct 20, 2019, 1:04 PM IST
ಬೆಳಗಾವಿ: ಇಲ್ಲಿಯ ಭೂತರಾಮನಟ್ಟಿ ಗ್ರಾಮದಲ್ಲಿರುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಸ್ಥಳಾಂತರಕ್ಕೆ ವಿರೋಧಿ ಸಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಹೋರಾಟ ಸಮಿತಿ ಸದಸ್ಯರು, ಗ್ರಾಮಸ್ಥರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶನಿವಾರ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ಭೂತ ರಾಮನಟ್ಟಿಯಲ್ಲಿ 1990ರಲ್ಲಿ ಸ್ನಾತಕೋತ್ತರ ಕೇಂದ್ರ ಆರಂಭಿಸಲಾಗಿದೆ. ಬಳಿಕ 2011ರಲ್ಲಿ ಬಿ.ಎಸ್. ಯಡಿಯೂರಪ್ಪ ಅವರು ಇದನ್ನು ವಿಶ್ವವಿದ್ಯಾಲಯದ ಘೋಷಣೆ ಮಾಡಿದ್ದಾರೆ. ಕಳೆದ 10 ವರ್ಷಗಳಿಂದ ಭೂತರಾಮನಹಟ್ಟಿ ಗ್ರಾಮದ 178 ಎಕರೆ ಪ್ರದೇಶದಲ್ಲಿ ವಿಶ್ವವಿದ್ಯಾಲಯವಾಗಿ ಕಾರ್ಯನಿರ್ವಹಿಸುತ್ತಿದೆ. ಆದರೆ ವಿವಿ ಅಭಿವೃದ್ಧಿಗೆ ಅರಣ್ಯ ಇಲಾಖೆ ಸಹಕಾರ ನೀಡುತ್ತಿಲ್ಲ ಎಂಬ ಕಾರಣಕ್ಕೆ ಸ್ಥಳಾಂತರಕ್ಕೆ ಮುಂದಾಗಿರುವುದು ಸರಿಯಲ್ಲ ಎಂದು ಆರೋಪಿಸಿದರು.
ಈಗಿರುವ ಜಾಗದಲ್ಲಿಯೇ ವಿಶ್ವವಿದ್ಯಾಲಯ ಮುಂದುವರೆಸಬೇಕು. ವಿರೋಧದ ಮಧ್ಯೆಯೂ ವಿಶ್ವವಿದ್ಯಾಲಯ ಸ್ಥಳಾಂತರಕ್ಕೆ ಮುಂದಾದರೆ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಭೀಮಗೌಡ ಪಾಟೀಲ, ಈರಪ್ಪ ಪಾಟೀಲ, ಯಲ್ಲಪ್ಪಾ ಚೌಗಲಾ, ಪರಸಪ್ಪ ಪಾಟೀಲ, ಮಾರುತಿ ಪಾಟೀಲ, ಅಶೋಕ ಪಾಟೀಲ ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ