ವಿದ್ಯುತ್ ಕಾಯ್ದೆ ತಿದ್ದುಪಡಿಗೆ ವಿರೋಧ
Team Udayavani, Jun 2, 2020, 10:29 AM IST
ಮೂಡಲಗಿ: ಕೇಂದ್ರ ಸರಕಾರವು 2003ರ ವಿದ್ಯುತ್ ಕಾಯ್ದೆಗೆ ತಿದ್ದುಪಡಿ ಮತ್ತು ವಿದ್ಯುತ್ ಕ್ಷೇತ್ರದ ವಿತರಣಾ ವ್ಯವಸ್ಥೆಯನ್ನು ಖಾಸಗಿಕರಣ ಮಾಡಲು ಮುಂದಾಗಿರುವುದನ್ನು ವಿರೋಧಿಸಿ ಇಲ್ಲಿಯ ಹೆಸ್ಕಾಂ ನೌಕರರು ಕೈಗೆ ಕಪ್ಪು ಪಟ್ಟಿ ಧರಿಸಿ ಸಾಂಕೇತಿಕ ಪ್ರತಿಭಟನೆ ನಡೆಸಿದರು.
ಸೋಮವಾರ ಹೆಸ್ಕಾಂ ಕಚೇರಿ ಆವರಣದಲ್ಲಿ ಸೇರಿದ ಹೆಸ್ಕಾಂ ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಖಾಸಗೀಕರಣದಿಂದ ನಮಗೆ, ರಾಜ್ಯ ಸರಕಾರಕ್ಕೆ ಹಾಗೂ ಎಲ್ಲ ರೈತಾಪಿ ವರ್ಗಕ್ಕೂ ತೊಂದರೆ ಆಗಲಿದೆ. ಆದ್ದರಿಂದ ಕೇಂದ್ರ ಸರಕಾರ ಖಾಸಗೀಕರಣ ಮತ್ತು ತಿದ್ದುಪಡಿ ಕಾಯ್ದೆಯನ್ನು ಕೈ ಬಿಡಬೇಕೆಂದು ಆಗ್ರಹಿಸಿದರು. ಗ್ರಾಮೀಣ ಶಾಖಾಧಿ ಕಾರಿ ಆರ್.ಡಿ. ಪಿಡಾಯಿ, ಸಿಬ್ಬಂದಿ ಮೆಹಬೂಬ ಶೇಖಬಡೆ ಮಾತನಾಡಿದರು. ಪಟ್ಟಣ ಶಾಖಾಧಿಕಾರಿ ಪಿ.ಅರ್. ಯಡಹಳ್ಳಿ, ಸಿಬ್ಬಂದಿಗಳಾದ ಎಸ್.ಡಿ. ದ್ಯಾಮಪ್ಪಗೋಳ, ಎಸ್.ಐ.ನದಾಫ, ಎಸ್.ಎಸ್.ಕೊಣ್ಣೂರ, ಬಿ.ಜಿ.ಪಾಟೀಲ, ನಾಗೇಶ ಬಂಗೆನ್ನವರ, ಶಂಕರ ಮರಗನ್ನ ವರ, ಎಸ್.ಎಸ್.ಮುಗುಳಖೋಡ, ಆರ್.ಎ.ಶೇಡಬಾಳ, ಎನ್.ಎ.ಕತ್ತಿ, ಜೆ.ಎಸ್.ಪುಣೇದ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್ ಚೆಲ್ಲಾಪಿಲ್ಲಿ
Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ