ಸಾವಯವ ಕೃಷಿ ಸದೃಢ ಸಮಾಜಕ್ಕೆ ದಾರಿ

ಕ್ರಿಯಾಜೆನ್‌ ಸಂಸ್ಥೆ ಪ್ರತಿನಿಧಿ ಅವರ ಉತ್ಪನ್ನಗಳು ಹಾಗೂ ಬಳಕೆ ಬಗ್ಗೆ ಮಾಹಿತಿ ನೀಡಿದರು.

Team Udayavani, Feb 12, 2022, 3:35 PM IST

ಸಾವಯವ ಕೃಷಿ ಸದೃಢ ಸಮಾಜಕ್ಕೆ ದಾರಿ

ಚಿಕ್ಕೋಡಿ: ಮಾನವ ಸಂಕುಲದ ಉಳಿವಿಗೆ ಆಧುನಿಕ ಯಂತ್ರೋಪಕರಣಗಳ ಬಳಕೆಯೊಂದಿಗೆ ಸಾವಯವ ಕೃಷಿ ಪದ್ಧತಿ ಅಳವಡಿಸಿಕೊಳ್ಳುವ ಅನಿವಾರ್ಯತೆ ಮತ್ತು ಸದೃಢ ಸಮಾಜದ ನಿರ್ಮಾಣಕ್ಕೆ ಏಕೈಕ ದಾರಿಯಾಗಿದೆ ಎಂದು ರಾಜ್ಯಸಭೆ ಮಾಜಿ ಸದಸ್ಯ ಡಾ| ಪ್ರಭಾಕರ ಕೋರೆ ಹೇಳಿದರು.

ಚಿದಾನಂದ ಬಸಪ್ರಭು ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆ ನಿಯಮಿತ, ಚಿಕ್ಕೋಡಿ, ಮೇ| ಶಿವಶಕ್ತಿ ಶುಗರ್ಸ್‌ ಲಿ., ಯಡ್ರಾವ ಹಾಗೂ ಕ್ರಿಯಾಜೆನ್‌ ಸಂಸ್ಥೆ, ಕೃಷಿ ವಿಶ್ವವಿದ್ಯಾಲಯ ಬೆಂಗಳೂರು ಸಹಯೋಗದಲ್ಲಿ ಡಾ| ಪ್ರಭಾಕರ ಕೋರೆ, ಫಾರ್ಮ್ಹೌಸ್‌ನಲ್ಲಿ ಸಾವಯವ ಕಬ್ಬು ಬೆಳೆ ಕುರಿತು ಹಮ್ಮಿಕೊಂಡಿದ್ದ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.

ಚಿದಾನಂದ ಬಸಪ್ರಭು ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಭರತೇಶ ಬನವನೆ ಮಾತನಾಡಿ, ಸಾವಯವ ಕೃಷಿ ಮತ್ತು ರಾಸಾಯನಿಕ ಗೊಬ್ಬರ ಬಳಕೆ ಕೃಷಿಯಿಂದ ಬೆಳೆದ ಆಹಾರ ಧಾನ್ಯಗಳ ಸೇವನೆಯಿಂದ ಆಗುವ ಪರಿಣಾಮಗಳ ಬಗ್ಗೆ ಹಿರಿಯರು ಮತ್ತು ನಮ್ಮ ಆರೋಗ್ಯದ ಸ್ಥಿತಿ ಹೋಲಿಸಿ ಸಾವಯವ ಕೃಷಿ ಪದ್ಧತಿ ಮಹತ್ವ ತಿಳಿದುಕೊಳ್ಳಬಹುದು. ಬರುವ ದಿನಗಳಲ್ಲಿ ಕಾರ್ಖಾನೆಯಿಂದ ಸಾವಯವ ಕಬ್ಬು ಕೃಷಿಗೆ ಒತ್ತು ನೀಡಿ ರೈತರಿಗೆ ಬೇಕಾದ ಅಗತ್ಯ ಮಾಹಿತಿ ಒದಗಿಸಲು ಕಾರ್ಖಾನೆ ಈ ರೀತಿಯ ವಿಚಾರ ಸಂಕಿರಣ ಆಯೋಜಿಸುವ ಹಾಗೂ ಕಾರ್ಖಾನೆ ಕಬ್ಬು ಅಭಿವೃದ್ಧಿ ಸಿಬ್ಬಂದಿ ಮೂಲಕ ಮಾಹಿತಿ ನೀಡಲು ಕ್ರಮ ವಹಿಸುವುದಾಗಿ ತಿಳಿಸಿದರು.

ಸಾವಯವ ಕೃಷಿಕರು ಮತ್ತು ಕೃಷಿ ಪಂಡಿತ ಪುರಸ್ಕೃತ ಶೇಗುಣಸಿ ಕಲ್ಮೇಶ ಯಲ್ಲಡಗಿ ಉಪನ್ಯಾಸಕರಾಗಿ ಮಾತನಾಡಿ, ಸಾವಯವ ಕೃಷಿ ಪದ್ಧತಿಯಲ್ಲಿ ಎರೆಹುಳು ಗೊಬ್ಬರ, ಘನಜೀವಾಮೃತ ಮತ್ತು ಇತರ ಉಪಯೋಗದ ಬಗ್ಗೆ ಹಾಗೂ ಬೇಡಕಿಹಾಳ ಗ್ರಾಮದ ಸುರೇಶ ದೇಸಾಯಿ ಸಾವಯವ ಕೃಷಿ ಮಾಡುವ ವಿಧಾನ ಹಾಗೂ ಅದರಿಂದ ಉತ್ಪಾದಿಸುವ ಆಹಾರ ಧಾನ್ಯಗಳಿಗೆ ವಿಶೇಷ ಮಾರುಕಟ್ಟೆ ಲಭ್ಯವಾಗಿಸುವ ಅವಶ್ಯಕತೆ ಇರುವ ಬಗ್ಗೆ ವಿವರಿಸಿದರು.

ಪ್ರಗತಿಪರ ರೈತರಾದ ರುದ್ರಕುಮಾರ ಹಾಲಪ್ಪನವರ ಎಕರೆಗೆ 100 ಟನ್‌ ಇಳುವರಿ ಪಡೆಯಲು ಕಬ್ಬು ಬೆಳೆ ನಾಟಿ ಮಹತ್ವ ಮತ್ತು ನಿರ್ವಹಣೆ ಬಗ್ಗೆ ವಿವರಿಸಿದರು. ಬೆಲ್ಲದ ಸ್ವರಾಜ, ಬಾಗಲಕೋಟೆ ತಯಾರಿಸಿದ ಹೊಸ ಕೃಷಿ ಉಳುಮೆ ಯಂತ್ರದ ಪ್ರಾತ್ಯಕ್ಷಿಕೆ ತೋರಿಸಿ ಬಿಜಿನೆಸ್‌ ಹೆಡ್‌ ಪ್ರಶಾಂತ ಗಾಲಿಮಠ ಅದರ ಉಪಯೋಗದ ಮಾಹಿತಿ ನೀಡಿದರು.

ಚಿಕ್ಕೋಡಿ ಅರಣ್ಯ ವಲಯ ಅಧಿಕಾರಿ ಪ್ರಶಾಂತ ಗಂಗಾಧರ ಬಾಂಬೂ ಬೆಳೆ ಪದ್ಧತಿ, ಮಾರುಕಟ್ಟೆ ಲಭ್ಯತೆ ಮತ್ತು ಲಾಭಗಳ ಬಗ್ಗೆ ಮಾಹಿತಿ ನೀಡಿದರು. ಕ್ರಿಯಾಜೆನ್‌ ಸಂಸ್ಥೆ ಪ್ರತಿನಿಧಿ ಅವರ ಉತ್ಪನ್ನಗಳು ಹಾಗೂ ಬಳಕೆ ಬಗ್ಗೆ ಮಾಹಿತಿ ನೀಡಿದರು. ಈ ವೇಳೆ ಚಿದಾನಂದ ಬಸಪ್ರಭು ಕೋರೆ ಕಾರ್ಖಾನೆ ಉಪಾಧ್ಯಕ್ಷ ಮಲ್ಲಿಕಾರ್ಜುನ ಕೋರೆ, ನಿರ್ದೇಶಕರಾದ ಅಜೀತ್‌ ದೇಸಾಯಿ, ತಾತ್ಯಾಸಾಹೇಬ ಕಾಟೆ, ಬಾಳಗೌಡಾ ರೇಂದಾಳೆ, ರಾಮಚಂದ್ರ ನಿಶಾನದಾರ, ಚೇತನ ಪಾಟೀಲ, ಚಿದಾನಂದ ಬಸಪ್ರಭು ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆ ಮತ್ತು ಶಿವಶಕ್ತಿ ಶುಗರ್ಸ್‌ ಒಕ್ಕಲುತನ ವಿಭಾಗದ ಅಧಿಕಾರಿಗಳು, ಸಿಬ್ಬಂದಿ ಮತ್ತು ರೈತ ಸದಸ್ಯರು ಇದ್ದರು.

ಚಿದಾನಂದ ಬಸಪ್ರಭು ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆ ಕಾರ್ಮಿಕ ಕಲ್ಯಾಣಾಧಿಕಾರಿ ಎಸ್‌.ಎಲ್‌. ಹಕಾರೆ ಸ್ವಾಗತಿಸಿದರು. ವ್ಯವಸ್ಥಾಪಕ ನಿರ್ದೇಶಕ ಆರ್‌.ಟಿ. ದೇಸಾಯಿ ಪ್ರಾಸ್ತಾವಿಕ ಮಾತನಾಡಿದರು. ಕಬ್ಬು ಅಭಿವೃದ್ಧಿ ಅಧಿಕಾರಿ ಎನ್‌.ಎಸ್‌. ಹಿರೇಮಠ ನಿರೂಪಿಸಿದರು.

ಸ್ವಂತ 2 ಎಕರೆ ಜಮೀನಿನಲ್ಲಿ ಸಂಪೂರ್ಣ ಸಾವಯವ ಕೃಷಿ ಪದ್ಧತಿಯಲ್ಲಿ ಬೆಳೆದ ಕಬ್ಬನ್ನು ಕಂಡು ಸಂತೋಷವಾಗಿದೆ. ಹಲವು ವರ್ಷಗಳಿಂದ ರಾಸಾಯನಿಕ ಗೊಬ್ಬರ ಅವಲಂಬಿತ ಕೃಷಿ ಮಾಡುತ್ತಿರುವುದು ಹಾಗೂ ಇತ್ತೀಚಿನ ದಿನಗಳಲ್ಲಿ ರಾಸಾಯನಿಕ ಗೊಬ್ಬರದ ಅತಿಯಾದ ಬಳಕೆಯಿಂದ ಜಮೀನು, ನದಿ ನೀರು ಕಲುಷಿತಗೊಳ್ಳುತ್ತಿದೆ. ಅಲ್ಲದೇ ಅದರಿಂದ ಬೆಳೆದ ಆಹಾರ ಧಾನ್ಯ ಸೇವಿಸಿ ದೇಹಕ್ಕೆ ಹಾನಿ ಮಾಡಿಕೊಂಡು ಹಲವು ರೋಗಗಳ ಕಾರಣೀಭೂತರಾಗುತ್ತಿದ್ದೇವೆ.

ಟಾಪ್ ನ್ಯೂಸ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

10-uv-fusion

Theater: ಅಳಿವು ಉಳಿವಿನ ದವಡೆಯಲ್ಲಿ ರಂಗಭೂಮಿ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.