ಪುಸ್ತಕಗಳಲ್ಲಿ ನಮ್ಮ ಸಂಸ್ಕೃತಿ-ಇತಿಹಾಸ ಇಲ್ಲ; ನಂದಕುಮಾರ

ಜನ ಕ್ಯಾಶ್‌ ಲೆಸ್‌ ಚುನಾವಣೆ ವ್ಯವಸ್ಥೆಗೆ ಮುಂದಾಗಬೇಕು

Team Udayavani, Mar 1, 2023, 1:40 PM IST

ಪುಸ್ತಕಗಳಲ್ಲಿ ನಮ್ಮ ಸಂಸ್ಕೃತಿ-ಇತಿಹಾಸ ಇಲ್ಲ; ನಂದಕುಮಾರ

ಅಥಣಿ: ರಾಷ್ಟ್ರೀಯತೆ, ಸಂಸ್ಕೃತಿ ಬಿಂಬಿಸುವ ಇತಿಹಾಸ ಪರಿಚಯಿಸದೇ ದಾಸ್ಯದ ಹಾಗೂ ಆಕ್ರಮಣಕಾರರ ಇತಿಹಾಸವನ್ನೇ ನಮ್ಮ ವಿದ್ಯಾರ್ಥಿಗಳಿಗೆ ಪರಿಚಯಿಸಿದ್ದು ದುರದೃಷ್ಟಕರ ಸಂಗತಿ ಎಂದು ಪ್ರಜ್ಞಾ ಪ್ರವಾಹದ ಅಖಿಲ ಭಾರತ ಸಂಯೋಜಕ ನಂದಕುಮಾರ ಹೇಳಿದರು.

ಅವರು ಅಥಣಿ ಉತ್ತಿಷ್ಠ ಭಾರತ ಸಂಘಟನೆ ಸ್ಥಳೀಯ ಶ್ರೀ ಶಿವಣಗಿ ಸಾಂಸ್ಕೃತಿಕ ಭವನದಲ್ಲಿ ಸ್ವಾಧೀನತೆಯಿಂದ ಸ್ವಾತಂತ್ರ್ಯದ ಕಡೆಗೆ ವಿಷಯವಾಗಿ ಆಯೋಜಿಸಿದ್ದ ಒಂದು ದಿನದ ವಿಚಾರ ಸಂಕಿರಣಕ್ಕೆ ಚಾಲನೆ ನೀಡಿ ಮಾತನಾಡಿದರು. ಚೋಳರು ಭಾರತವನ್ನು ಸುಮಾರು 2000 ವರ್ಷಗಳ ಕಾಲ ಆಳ್ವಿಕೆ ಮಾಡಿರುವುದಾಗಲಿ ಅಥವಾ ಅನೇಕ ಶತಮಾನಗಳ ಕಾಲ ಆಡಳಿತ ನಡೆಸಿದ್ದ ಹೊಯ್ಸಳ, ವಿಜಯ ನಗರ, ಪಾಂಡ್ಯರು ಸೇರಿದಂತೆ ಅನೇಕರ ಕುರಿತು ಹಾಗೂ ನಮ್ಮ ಶಿಲ್ಪ ಕಲೆ, ವಾಸ್ತು ಸೇರಿದಂತೆ ನಮ್ಮ ಸಂಸ್ಕೃತಿ ಬಿಂಬಿಸುವ ವಿಷಯಗಳ ಉಲ್ಲೇಖ ನಮ್ಮ ಇತಿಹಾಸದ ಪುಸ್ತಕಗಳಲ್ಲಿ ಎಲ್ಲಿಯೂ ಇಲ್ಲ. ಆದರೆ ನಮ್ಮ ಮೇಲೆ ಆಕ್ರಮಣ ಮಾಡಿ ಆಡಳಿತ ನಡೆಸಿದ ಮೊಘಲರ, ಬ್ರಿಟಿಷರ ಆಡಳಿತವನ್ನು ಇತಿಹಾಸದಲ್ಲಿ ಪರಿಣಾಮಕಾರಿಯಾಗಿ ಬಿಂಬಿಸಲಾಗಿದೆ ಎಂದು ಹೇಳಿದರು.

ಆರ್‌.ಎಸ್‌.ಎಸ್‌ನ ಅಖಂಡ ಕರ್ನಾಟಕದ ಪ್ರಚಾರ ಪ್ರಮುಖ ಅರುಣಕುಮಾರ ರಾಜನೀತಿ ಮತ್ತು ರಾಷ್ಟ್ರೀಯತೆ ವಿಷಯದ ಮೇಲೆ ಮಾತನಾಡಿ, ಸ್ವಾತಂತ್ರ್ಯ ನಂತರ ಭಾರತದಲ್ಲಿ ರಾಜನೀತಿ ಬದಲಾಗಿ ರಾಜಕಾರಣವಾಗಿದೆ.

ರಾಜಕೀಯ ಅಧಿ ಕಾರಕ್ಕಾಗಿ ರಾಜಕಾರಣವನ್ನು ದುರುಪಯೋಗ ಮಾಡಿಕೊಳ್ಳಲಾಗುತ್ತಿದೆ ಇದರಿಂದ ರಾಷ್ಟ್ರೀಯತೆಗೆ ಧಕ್ಕೆ ಉಂಟಾಗುತ್ತಿದೆ ಎಂದ ಅವರು, ದೇಶದಲ್ಲಿ ಮತ್ತೂಮ್ಮೆ ರಾಜಕಾರಣ ಬದಲಾಗಿ ರಾಜನೀತಿಯಾಗಲು ದೇಶದ ಜನ ಕ್ಯಾಶ್‌ ಲೆಸ್‌ ಚುನಾವಣೆ ವ್ಯವಸ್ಥೆಗೆ ಮುಂದಾಗಬೇಕು ಆಗ ಮಾತ್ರ ರಾಷ್ಟ್ರೀಯತೆ ಜಾಗೃತವಾಗುವುದು ಎಂದು ಹೇಳಿದರು.

ಪ್ರಜ್ಞಾ ಪ್ರವಾಹದ ಅಖೀಲ ಭಾರತ ಸಹ ಸಂಯೋಜಕ ರಘುನಂದನ ರಾಷ್ಟ್ರೀಯತೆ-ಭಾವ-ಭಕ್ತಿ ಮತ್ತು ಕ್ರಿಯಾರೂಪ ವಿಷಯದ ಮೇಲೆ ಮಾತನಾಡಿ, ನಮ್ಮ ದಿನ ನಿತ್ಯದ ಚಟುವಟಿಕಗಳಲ್ಲಿ ನಮ್ಮ ಪ್ರತಿಭೆಯಿಂದ ದೂರ ಉಳಿಯುತ್ತಿರುವುದು ನಮ್ಮ ಕ್ರಿಯಾ ರೂಪದಿಂದ ಹಿಂದೆ ಸರಿಯುತ್ತಿದ್ದೇವೆ. ಇದಕ್ಕಾಗಿ ನಾವು ಸೃಜನಶೀಲದೊಂದಿಗೆ ಕ್ರಿಯಾಶೀಲರಾಗಬೇಕು ಎಂದು ಕರೆ ನೀಡಿದರು.

ಗದಗ ಕೆ.ಎಲ್‌.ಇ ಪ್ರಾಧ್ಯಾಪಕಿ ವೀಣಾ ಶಿಕ್ಷಣ ಮತ್ತು ರಾಷ್ಟ್ರೀಯತೆ ವಿಷಯದ ಕುರಿತು ಮಾತನಾಡಿದರು. ಪ್ರತಿ ಭಾಷಣದ ನಂತರ ಸಂವಾದ ನಡೆಯಿತು. ಉತ್ತಿಷ್ಠ ಭಾರತ ಅಥಣಿ ಸಂಯೋಜಕ ಚಂದ್ರಕಾಂತ ಉಂಡೊಡಿ ನಿರೂಪಿಸಿದರು. ವಿಚಾರ ಸಂಕಿರಣವನ್ನು ಉತ್ತಿಷ್ಠ ಭಾರತ ಸಂಘಟನೆಯ ಭಾರತ ಕರ್ಪೂರಮಠ, ವಿನಾಯಕ ಆಸಂಗಿ, ಮಂಜೂಶಾ ನಾಯಿಕ, ಡಾ.ವಿನಾಯಕ ಚಿಂಚೋಳಿಮಠ, ವೈಶಾಲಿ ಕುಲಕರ್ಣಿ, ಕುಮಾರ ಗಾಣಿಗೇರ, ಸಂಜಯ ನಾಯಿಕ, ಪ್ರಮೀಳಾ ನಾಯಿಕ, ಡಾ.ಅಮೃತ ಕುಲಕರ್ಣಿ, ಡಾ.ಪ್ರತೀಕಾ ಕುಲಕರ್ಣಿ, ಮೃಣಾಲಿನಿ ದೇಶಪಾಂಡೆ, ಕುಮಾರ ಪತ್ತಾರ ಸಂಘಟಿಸಿದ್ದರು.

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.