ಪಂಢರಪುರ ಅಪಘಾತದಲ್ಲಿ ಮೃತಪಟ್ಟವರ ಗುರುತು ಪತ್ತೆ: ಮಾಹಿತಿ ಪಡೆದ ಶಾಸಕಿ ಹೆಬ್ಬಾಳಕರ್
Team Udayavani, Nov 8, 2019, 10:13 AM IST
ಬೆಳಗಾವಿ: ಕಾರ್ತಿಕ ಏಕಾದಶಿಯಂದು ಪಂಢರಪುರದ ಶ್ರೀ ವಿಠ್ಠಲನ ದರ್ಶನಕ್ಕೆ ಹೊರಟಾಗ ಮಹಾರಾಷ್ಟ್ರ ಅಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಐವರ ಗುರುತು ಪತ್ತೆಯಾಗಿದ್ದು, ಕೂಡಲೇ ಘಟನೆ ಬಗ್ಗೆ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಮಾಹಿತಿ ಪಡೆದುಕೊಂಡಿದ್ದಾರೆ.
ಬೆಳಗಾವಿ ತಾಲೂಕಿನ ಹಂಗರಗಾ ಗ್ರಾಮದ ಬುಲೇರೋ ಟೆಂಪೋ ವಾಹನ ಚಾಲಕ ಅದಾ ಪಾಟೀಲ (44), ಮಂಡೋಳಿ ಗ್ರಾಮದ ಕೃಷ್ಣಾ ವಾಮನ ಕಣಬರಕರ (46), ಮಹಾದೇವ ಮಲ್ಲಪ್ಪ ಕಣಬರಕರ (48), ಬಾಳು ಅಂಬೇವಾಡಿಕರ (50), ಅರುಣ ಮುತಗೇಕರ (37) ಮೃತಪಟ್ಟಿದ್ದಾರೆ. ಮಾತ್ರು ಸಾಳವಿ, ಗಣಪತ ದಳವಿ, ಪರಶುರಾಮ ದಳವಿ ಗಾಯಗೊಂಡಿದ್ದಾರೆ. ಅಲ್ಲಿ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರತಿ ವರ್ಷದಂತೆ ಈ ವರ್ಷವೂ ಕಾರ್ತಿಕ ಏಕಾದಶಿಗೆ ಪಂಢರಪುರಕ್ಕೆ ತೆರಳುತ್ತಿದ್ದರು. ಮಂಡೋಳಿಯ ಕೃಷ್ಣಾ ಅವರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ಹಾಗೂ ಎಸ್ ಡಿಎಂಸಿ ಸದಸ್ಯರಾಗಿದ್ದರು. ಇನ್ನೂ ಕೆಲವರು ಫರ್ನಿಚರ್, ಟೇಲರ್, ಗೌಂಡಿ, ಕೃಷಿ ಕೆಲಸ ಮಾಡುತ್ತಿದ್ದರು.
ಘಟನೆ ಕುರಿತು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರು ಮಹಾರಾಷ್ಟ್ರದ ಸೊಲ್ಲಾಪುರದ ಶಾಸಕಿ ಪ್ರಣೀತಿ ಶಿಂಧೆ ಅವರಿಗೆ ಕರೆ ಮಾಡಿ ಮಾಹಿತಿ ಕಲೆ ಹಾಕಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆಯಲಾಗುವುದು. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸುವುದಾಗಿ ಶಾಸಕಿ ಶಿಂಧೆ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ