ವಿದ್ಯುತ್‌ ಸಂಘದ ಬಾಕಿ ಬಿಲ್‌ ಪಾವತಿಸಿ: ಕತ್ತಿ

ನೂತನ 63 ಕೆವಿಎ ವಿದ್ಯುತ್‌ ಪರಿವರ್ತಕ ಉದ್ಘಾಟನೆ ; ಬಾಕಿ ಉಳಿಸಿಕೊಂಡಿರುವ 4308 ಗ್ರಾಹಕರು

Team Udayavani, Jun 17, 2022, 1:17 PM IST

10

ಹುಕ್ಕೇರಿ: ಗ್ರಾಹಕರು ಹಲವಾರು ವರ್ಷಗಳಿಂದ ಮನೆ, ವಾಣಿಜ್ಯ ಮಳಿಗೆಗಳ ವಿದ್ಯುತ್‌ ಬಿಲ್‌ ಬಾಕಿ ಉಳಿಸಿಕೊಂಡಿದ್ದಾರೆ. ಬೇಗನೆ ಬಿಲ್‌ ಸಂದಾಯ ಮಾಡಿ ಸಂಘದ ಏಳಿಗೆಗೆ ಸಹಕಾರ ನೀಡಬೇಕೆಂದು ಎಂದು ಮಾಜಿ ಸಂಸದ, ಬಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ರಮೇಶ ಕತ್ತಿ ಹೇಳಿದರು.

ತಾಲೂಕಿನ ಹುಲ್ಲೋಳಿ ಗ್ರಾಮದಲ್ಲಿ ಹುಕ್ಕೇರಿ ಗ್ರಾಮೀಣ ವಿದ್ಯುತ್‌ ಸಹಕಾರಿ ಸಂಘದ ವತಿಯಿಂದ ನೂತನ 63 ಕೆವಿಎ ವಿದ್ಯುತ್‌ ಪರಿರ್ವಕ ಉದ್ಘಾಟಿಸಿ ಮಾತನಾಡಿದರು.

ವಿದ್ಯುತ್‌ ಬಾಕಿ ಉಳಿಸಿದ 4308 ಗ್ರಾಹಕರಿಗೆ ತಾಲೂಕಾ ಕಾನೂನು ಸೇವಾ ಸಮಿತಿ ಮುಖಾಂತರ ಎರಡು ಬಾರಿ ನೋಟಿಸು ನೀಡಲಾಗಿದೆ. ಆದರೂ ಕೂಡ ಬಿಲ್‌ ಸಂದಾಯ ಮಾಡಿರುವುದಿಲ್ಲ. ಹುಕ್ಕೇರಿ ನ್ಯಾಯಾಲಯದಲ್ಲಿ ಜೂ. 4ರಿಂದ 25 ರವರೆಗೆ ನಡೆಯಲಿರುವ ಲೋಕ ಅದಾಲತ್‌ದಲ್ಲಿ ಹಾಜರಾಗಿ ವಿದ್ಯುತ್‌ ಬಿಲ್‌ಗೆ ವಿಧಿಸಿದ ಬಡ್ಡಿ ರಿಯಾಯಿತಿ ಸೌಲಭ್ಯ ಪಡೆದು ಹಣ ಭರಣಾ ಮಾಡುವುದರ ಮೂಲಕ ಸದುಪಯೋಗ ಮಾಡಿಕೊಳ್ಳಬೇಕು ಎಂದರು.

ರೈತರು ಅನಧಿಕೃತವಾಗಿ ಕೃಷಿ ಪಂಪ್‌ಸೆಟ್‌ ಗಳಿಗೆ ವಿದ್ಯುತ್‌ ಬಳಕೆ ಮಾಡಿಕೊಳ್ಳುವುದರಿಂದ ವಿದ್ಯುತ್‌ ಪೂರೈಸುವ ಟಿಸಿಗಳ ಮೇಲೆ ಹೆಚ್ಚಿನ ಒತ್ತಡ ಉಂಟಾಗಿ ಟಿಸಿಗಳು ಹಾನಿಗೀಡಾಗುವುದರ ಜತೆಗೆ ಇನ್ನೂಳಿದ ರೈತರು ತೊಂದರೆ ಅನುಭವಿಸಬೇಕಾಗುತ್ತಿದೆ. ರೈತರು ಅಧಿಕೃತ ಜೋಡಣೆ ಪಡೆದುಕೊಂಡಲ್ಲಿ ವಿದ್ಯುತ್‌ ಪೂರೈಸುವ ಟಿಸಿ ಸಾಮರ್ಥ್ಯಕ್ಕೆ ಅನುಸಾರವಾಗಿ ಮತ್ತಷ್ಟು ಹೆಚ್ಚು ಹೊಸ ಟಿಸಿಗಳನ್ನು ಅಳವಡಿಸಲು ಸಾಧ್ಯವಾಗುತ್ತದೆ ಎಂದು ರೈತರಿಗೆ ಕಿವಿಮಾತು ಹೇಳಿದರು.

ಮುಖಂಡರಾದ ಆನಂದ ದಪ್ಪಾದುಳಿ, ಗ್ರಾಪಂ ಅಧ್ಯಕ್ಷೆ ಶಿವಲೀಲಾ ಮಾಯಪ್ಪಗೋಳ, ಸದಸ್ಯ ಸಿದ್ದಪ್ಪಾ ಪೂಜೇರಿ, ಪಿ.ಕೆ.ಪಿ.ಎಸ್‌ ಅಧ್ಯಕ್ಷ ಕೆ.ಬಿ.ಪಾಟೀಲ, ಗ್ರಾಮದ ಹಿರಿಯರಾದ ಪಿ.ಡಿ. ಚೌಗಲಾ, ಮಾಯಪ್ಪಾ ಹೊಳೆಪ್ಪಗೊಳ, ಶಾಂತಿನಾಥ ಚೌಗಲಾ, ಬೀರಪ್ಪಾ ನರಸಗೋಳ, ಜಯಪಾಲ ಚೌಗಲಾ, ಆನಂದ ಚೌಗಲಾ ಮತ್ತು ಬಸವರಾಜ ದೇಸಾಯಿ, ಸಂಘದ ಸ್ಥಾನಿಕ ಅಭಿಯಂತರ ನೇಮಿನಾಥ ಖೇಮಲಾಪುರೆ, ಶಾಖಾಧಿಕಾರಿ ಮನೋಜಕುಮಾರ ಕಾರಾಡೆ, ಗ್ರಾಮಸ್ಥರು, ರೈತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.