ಬಿಜೆಪಿ ದುರಾಡಳಿತದಿಂದ ಜನರಿಗೆ ಬೇಸರ

ವಿಧಾನ ಪರಿಷತ್‌ ಚುನಾವಣೆ ಮುಂಬರುವ 2023ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಲಿದೆ

Team Udayavani, Nov 25, 2021, 4:35 PM IST

ಬಿಜೆಪಿ ದುರಾಡಳಿತದಿಂದ ಜನರಿಗೆ ಬೇಸರ

ಹುಕ್ಕೇರಿ: ಕಳೆದ ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದಲ್ಲಿದ್ದ ಮುಖಂಡರು ನಮ್ಮ ಅಭ್ಯರ್ಥಿಯನ್ನು ಸೋಲಿಸಿದ್ದರು. ಈಗ ಅವರು ಬಿಜೆಪಿಯಲ್ಲಿದ್ದು ಬಿಜೆಪಿ ಅಭ್ಯರ್ಥಿಯನ್ನು ಸೋಲಿಸುತ್ತಾರೆ.

ಕಟ್ಟುನಿಟ್ಟು ಶಿಸ್ತಿನ ಪಕ್ಷವೆಂದು ಹೇಳುವ ಬಿಜೆಪಿಗೆ ಈ ಚುನಾವಣೆಯಲ್ಲಿ ಗೊತ್ತಾಗುತ್ತದೆ. ಸದಸ್ಯರು ಗೊಂದಲಕ್ಕೀಡಾಗದೆ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗೆ ಮತ ಚಲಾಯಿಸಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಹೇಳಿದರು.

ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ ದ್ವಿಸದಸ್ಯ ಸ್ಥಾನಗಳಿಗೆ ನಡೆಯಲಿರುವ ಚುನಾವಣೆ ಹಿನ್ನೆಲೆಯಲ್ಲಿ ಪಟ್ಟಣದ ಹೊರವಲಯದ ರವದಿ ಫಾರ್ಮ್ಹೌಸ್‌ ಸಭಾಭವನದಲ್ಲಿ ಬುಧವಾರ ಏರ್ಪಡಿಸಿದ್ದ ಚುನಾಯಿತ ಪ್ರತಿನಿಧಿಗಳ ಸಮಾವೇಶದಲ್ಲಿ ಅವರು ಮಾತನಾಡಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರ ಎಲ್ಲ ಕ್ಷೇತ್ರಗಳಲ್ಲಿ ವಿಫಲವಾಗಿವೆ. ಈ ಸರ್ಕಾರಗಳ ದುರಾಡಳಿತದಿಂದ ಜನರು ಬೇಸತ್ತಿದ್ದಾರೆ. ಕಳೆದ ಅವಧಿಯ ಸಿದ್ಧರಾಮಯ್ಯ ಅವರ ಜನಪರ ಆಡಳಿತ ಹಾಗೂ ಈಗಿರುವ ಕೇಂದ್ರ, ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳ ವಿರುದ್ಧ ಮತದಾರರಲ್ಲಿ ಮನವರಿಕೆ ಮಾಡಬೇಕು. ಈಗಿನ ವಿಧಾನ ಪರಿಷತ್‌ ಚುನಾವಣೆ ಮುಂಬರುವ 2023ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಅವರು ಹೇಳಿದರು.

ಹಾಗಾಗಿ ಕಾಂಗ್ರೆಸ್‌ ಪಕ್ಷವು ಯುವ ಉತ್ಸಾಹಿ ಹಾಗೂ ಹೊಸ ಮುಖ ಚನ್ನರಾಜ ಹಟ್ಟಿಹೊಳಿ ಅವರನ್ನು ಕಣಕ್ಕಿಳಿಸಿದ್ದು ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡುವಂತೆ ಅವರು ಕೋರಿದರು. ಕಾಂಗ್ರೆಸ್‌ ಪಕ್ಷದ ಮನಸ್ಸಿನ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿರುವದರಿಂದ ಚನ್ನರಾಜ್‌ ಹಟ್ಟಿಹೊಳಿ ಆಯ್ಕೆ ಸುಲಭವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಟಾಳಕರ ಮಾತನಾಡಿ, ಹುಕ್ಕೇರಿ ಕ್ಷೇತ್ರದಲ್ಲಿ ಮತದಾರರು ಭಯದ ವಾತಾವರಣದಲ್ಲಿ ಬದುಕುತ್ತಿದ್ದಾರೆ. ಭಯಮುಕ್ತರಾಗಿ ಕಾಂಗ್ರೆಸ್‌ ಅಭ್ಯರ್ಥಿಯನ್ನು ಗೆಲ್ಲಿಸಿದರೆ ಅಭ್ಯರ್ಥಿಯೂ ಆದ ಸಹೋದರ ಚನ್ನರಾಜ ಹಾಗೂ ತಾವು ಮನೆಯ ಮಕ್ಕಳಂತೆ ಹೆಗಲಿಗೆ ಹೆಗಲು ಕೊಟ್ಟು ದುಡಿಯುತ್ತೇವೆ ಎಂದರು. ಅಭ್ಯರ್ಥಿ ಚನ್ನರಾಜ್‌ ಹಟ್ಟಿಹೊಳಿ ಮಾತನಾಡಿ, ಅಭ್ಯರ್ಥಿಗಿಂತ ಪಕ್ಷವನ್ನು ನೋಡಿ ಮತ ಚಲಾಯಿಸಿ ಎಂದು ವಿನಂತಿಸಿದರು ಮಾಜಿ ಸಚಿವರಾದ ಪ್ರಕಾಶ ಹುಕ್ಕೇರಿ, ಎ.ಬಿ.ಪಾಟೀಲ, ವೀರಕುಮಾರ ಪಾಟೀಲ, ಕಾಂಗ್ರೆಸ್‌ ಜಿಲ್ಲಾ ಅಧ್ಯಕ್ಷ ಲಕ್ಷ್ಮಣರಾವ್‌ ಚಿಂಗಳೆ ಮಾತನಾಡಿದರು.

ಬ್ಲಾಕ್‌ ಅಧ್ಯಕ್ಷರಾದ ಅಶೋಕ ಅಂಕಲಗಿ, ಸಂತೋಷ ಮುಡಸಿ, ಪ್ರಧಾನ ಕಾರ್ಯದರ್ಶಿ ರಾಜು ಸಿದ್ನಾಳ, ಮುಖಂಡರಾದ ವಿಜಯ ರವದಿ, ಕಿರಣ ರಜಪೂತ, ನಮ್ರತಾ ವೈರಾಗಿ, ಜಿನಗೌಡ ಇಮಗೌಡನವರ, ಮಲ್ಲಿಕಾರ್ಜುನ ರಾಶಿಂಗೆ, ಅವಿನಾಶ ನಲವಡೆ, ಕೆಂಪಣ್ಣಾ ಶಿರಹಟ್ಟಿ, ಶಾನೂಲ್‌ ತಹಶೀಲ್ದಾರ, ಕಿರಣ ಕರೋಶಿ, ಮತ್ತಿತರರು ಉಪಸ್ಥಿತರಿದ್ದರು. ಕಾರ್ಮಿಕರ ಸಂಘದ ಮಹೇಶ ಹಟ್ಟಿಹೊಳಿ ನಿರೂಪಿಸಿದರು. ದಿಲೀಪ ಹೊಸಮನಿ ಸ್ವಾಗತಿಸಿದರು. ಚಂದು ಗಂಗನ್ನವರ ವಂದಿಸಿದರು. ಇದೇ ವೇಳೆ ಜೆಡಿಎಸ್‌, ಬಿಜೆಪಿ ಮುಖಂಡರು ಕಾಂಗ್ರೆಸ್‌ಗೆ ಸೇರ್ಪಡೆಯಾದರು.

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

2-news

Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್‌‌ ಚೆಲ್ಲಾಪಿಲ್ಲಿ

Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ

Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.